ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಸಭ್ಯ ವರ್ತನೆ; ಶಿಕ್ಷಕರ ಅಮಾನತು

Last Updated 18 ಜನವರಿ 2020, 9:39 IST
ಅಕ್ಷರ ಗಾತ್ರ

ತುಮಕೂರು: ವಿದ್ಯಾರ್ಥಿನಿಯರ ಜತೆ ಅಸಭ್ಯವಾಗಿ ವರ್ತಿಸಿದ ಆರೋಪದ ಮೇಲೆ ತಾಲ್ಲೂಕಿನ ಕೈದಾಳ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕರಾದ ಯತೀಶ್ ಮತ್ತು ಭೀಮಣ್ಣ ಅವರನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಕೆಲಸದಿಂದ ಅಮಾನತುಗೊಳಿಸಿದ್ದಾರೆ.

ಗುರುವಾರ ಶಾಲೆಯಲ್ಲಿ ಸಂತಾನೋತ್ಪತ್ತಿ ಬಗ್ಗೆ ಶಿಕ್ಷಕ ಯತೀಶ್ ಪಾಠ ಮಾಡಿದ್ದಾರೆ. ಈ ವೇಳೆ ಹೆಣ್ಣು ಮಕ್ಕಳ ಋತುಸ್ರಾವದ ಸಂದರ್ಭದಲ್ಲಿ ಅನುಸರಿಬೇಕಾದ ಕ್ರಮಗಳ ಬಗ್ಗೆ ಮಾಹಿತಿ ನೀಡುತ್ತ ಕೆಟ್ಟದಾಗಿ ವರ್ತಿಸಿದ್ದಾರೆ ಎನ್ನಲಾಗುತ್ತಿದೆ. ಈ ಬಗ್ಗೆ ವಿದ್ಯಾರ್ಥಿನಿಯರು ಪೋಷಕರಿಗೆ ಮಾಹಿತಿ ನೀಡಿದ್ದಾರೆ.

ಪೋಷಕರು ಶಾಲೆಗೆ ಬಂದು ವಿಚಾರಿಸಿದ್ದಾರೆ. ಯತೀಶ್ ಬೆಂಬಲಕ್ಕೆ ಭೀಮಣ್ಣ ಸಹ ಮುಂದಾಗಿದ್ದಾರೆ. ಈ ವೇಳೆ ಪೋಷಕರು ಶಿಕ್ಷಕರನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ. ಶಾಲೆಗೆ ಪೊಲೀಸರು ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿ ಭೇಟಿ ನೀಡಿದ್ದರು. ಶಿಕ್ಷಕರನ್ನು ಅಮಾನತು ಮಾಡುವಂತೆ ಗ್ರಾಮಸ್ಥರು ಪಟ್ಟು ಹಿಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT