ತುಮಕೂರು ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ರಸಾಯನಶಾಸ್ತ್ರ ವಿಭಾಗದ ಮುಖ್ಯಸ್ಥೆ ಡಾ.ಅನುಸೂಯಾ ಪ್ರಧಾನ ಭಾಷಣ ಮಾಡಿದರು. ಕೆಂಪೇಗೌಡ ಜಯಂತಿ ಅಂಗವಾಗಿ ಹಮ್ಮಿಕೊಂಡಿದ್ದ ತಾಲ್ಲೂಕು ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ 122 ವಿದ್ಯಾರ್ಥಿಗಳಿಗೆ ₹ 1.20 ಲಕ್ಷ ನಗದು ಬಹುಮಾನ ವಿತರಿಸಲಾಯಿತು. ತಹಶೀಲ್ದಾರ್ ಮಹಬಲೇಶ್ವರ್, ಬಿಇಒ ಬೋರೆಗೌಡ, ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ವೆಂಕಟೇಶ್, ವೇಣುಗೋಪಾಲ್ ಹಾಜರಿದ್ದರು.