ಕೊರಟಗೆರೆ: ತಾಲ್ಲೂಕಿನ ಜಿ.ನಾಗೇನಹಳ್ಳಿ ಸಮೀಪದ ಗೊಲ್ಲರಹಟ್ಟಿ ಬಳಿ ಶನಿವಾರ ಸತ್ಯನಾರಾಯಣ ಅವರು ಬೈಕ್ ಅಪಘಾತದಿಂದ ತೀವ್ರ ಗಾಯಗೊಂಡು ಒದ್ದಾಡುತ್ತಿದ್ದು, ತಹಶೀಲ್ದಾರ್ ಮುನಿಶಾಮಿರೆಡ್ಡಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಅಪಘಾತವಾಗಿ ನೋವಿನಿಂದ ಒದ್ದಾಡುತ್ತಿದ್ದರೂ ಯಾರೊಬ್ಬರ ಅವರ ನೆರವಿಗೆ ಬಂದಿಲ್ಲ. ಕಾರ್ಯ ನಿಮಿತ್ತ ಅದೇ ರಸ್ತೆಯಲ್ಲಿ ತಹಶೀಲ್ದಾರ್ ಅವರು ತೆರಳುತ್ತಿದ್ದರು. ಗಾಯಾಳುವನ್ನು ತಮ್ಮ ಜೀಪ್ನಲ್ಲಿ ಕೂರಿಸಿಕೊಂಡು ಆಸ್ಪತ್ರೆಗೆ ದಾಖಲಿಸಿದ್ದಾರೆ.