ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ತೇಜಸ್ವಿ, 'ಬಿಜೆಪಿ ಯುವಕರಿಗೆ ಹೆಚ್ಚಿನ ರಾಜಕೀಯ ಅವಕಾಶ ಕಲ್ಪಿಸುತ್ತದೆ. ಈ ಸಂಪ್ರದಾಯವನ್ನು ಮೊದಲಿನಿಂದಲೂ ಅನುಸರಿಸಿಕೊಂಡು ಬಂದಿದೆ. ನನ್ನನ್ನು ಗುರುತಿಸಿ ಪಕ್ಷದ ವರಿಷ್ಠರು ಅವಕಾಶ ಕೊಟ್ಟಿರುವುದೂ ಅದೇ ಮಾನದಂಡದಿಂದ. ಅರುಣ್ ಜೇಟ್ಲಿ, ಅನಂತಕುಮಾರ್ ಹೀಗೆ ಅನೇಕರಿಗೆ ರಾಜಕೀಯ ಅವಕಾಶಗಳು ಲಭಿಸಿದ್ದು ಯುವಕರಾಗಿದ್ದಾಗಲೇ,’ ಎಂದು ಹೇಳಿದರು.