<p><strong>ಶಿರಾ:</strong> ತಾಲ್ಲೂಕಿನ ಕಳ್ಳಂಬೆಳ್ಳ ಹೋಬಳಿಯ ಚಿನ್ನಪ್ಪನಹಳ್ಳಿ ಗ್ರಾಮದಲ್ಲಿ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಪ್ರಸಾದ ಸೇವಿಸಿ ಅಸ್ವಸ್ಥರಾಗಿದ್ದವರು ಚೇತರಿಸಿಕೊಂಡಿದ್ದಾರೆ.</p>.<p>ಆಂಜನೇಯಸ್ವಾಮಿ ದೇವರ ಪ್ರಸಾದ ಸೇವಿಸಿ ಭಾನುವಾರ 115 ಮಂದಿ ಅಸ್ವಸ್ಥರಾಗಿದ್ದು, ಕಳ್ಳಂಬೆಳ್ಳ, ಶಿರಾ ಮತ್ತು ತುಮಕೂರಿನ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದಿದ್ದಾರೆ.</p>.<p>ಶಿರಾ ಆಸ್ಪತ್ರೆಯಲ್ಲಿ 40 ಮಂದಿ ಹೊರರೋಗಿಗಳಾಗಿ, 75 ಮಂದಿ ಒಳರೋಗಿಗಳಾಗಿ ದಾಖಲಾಗಿದ್ದು, ಅದರಲ್ಲಿ 40 ಮಂದಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ತುಮಕೂರಿನ ಜಿಲ್ಲಾಸ್ಪತ್ರೆಗೆ ಕಳುಹಿಸಿಕೊಡಲಾಗಿತ್ತು. ಶಿರಾ ಆಸ್ಪತ್ರೆಯಲ್ಲಿ ಇದ್ದವರು ಚೇತರಿಸಿಕೊಂಡಿದ್ದು, ಸೋಮವಾರ ಬೆಳಿಗ್ಗೆ ಗ್ರಾಮಕ್ಕೆ ಕಳುಹಿಸಿಕೊಡಲಾಗಿದೆ. ಪ್ರಸ್ತುತ 3 ಮಂದಿ ಮಾತ್ರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.</p>.<p><strong>ಶಾಸಕರ ಭೇಟಿ: </strong>ಕರ್ನಾಟಕ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ ಹಾಗೂ ಶಾಸಕ ಬಿ.ಸತ್ಯನಾರಾಯಣ ಸೋಮವಾರ ಚಿನ್ನೇನಹಳ್ಳಿ ಗ್ರಾಮಕ್ಕೆ ಮತ್ತು ಶಿರಾ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ಅಸ್ವಸ್ಥರ ಆರೋಗ್ಯ ವಿಚಾರಿಸಿದರು. ಪ್ರಾಣಾಪಾಯವಾಗದಂತೆ ಸಕಾಲದಲ್ಲಿ ಸೂಕ್ತ ಚಿಕಿತ್ಸೆ ನೀಡಿದ ವೈದ್ಯರ ಸೇವೆಯನ್ನು ಶಾಸಕರು ಶ್ಲಾಘಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿರಾ:</strong> ತಾಲ್ಲೂಕಿನ ಕಳ್ಳಂಬೆಳ್ಳ ಹೋಬಳಿಯ ಚಿನ್ನಪ್ಪನಹಳ್ಳಿ ಗ್ರಾಮದಲ್ಲಿ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಪ್ರಸಾದ ಸೇವಿಸಿ ಅಸ್ವಸ್ಥರಾಗಿದ್ದವರು ಚೇತರಿಸಿಕೊಂಡಿದ್ದಾರೆ.</p>.<p>ಆಂಜನೇಯಸ್ವಾಮಿ ದೇವರ ಪ್ರಸಾದ ಸೇವಿಸಿ ಭಾನುವಾರ 115 ಮಂದಿ ಅಸ್ವಸ್ಥರಾಗಿದ್ದು, ಕಳ್ಳಂಬೆಳ್ಳ, ಶಿರಾ ಮತ್ತು ತುಮಕೂರಿನ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದಿದ್ದಾರೆ.</p>.<p>ಶಿರಾ ಆಸ್ಪತ್ರೆಯಲ್ಲಿ 40 ಮಂದಿ ಹೊರರೋಗಿಗಳಾಗಿ, 75 ಮಂದಿ ಒಳರೋಗಿಗಳಾಗಿ ದಾಖಲಾಗಿದ್ದು, ಅದರಲ್ಲಿ 40 ಮಂದಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ತುಮಕೂರಿನ ಜಿಲ್ಲಾಸ್ಪತ್ರೆಗೆ ಕಳುಹಿಸಿಕೊಡಲಾಗಿತ್ತು. ಶಿರಾ ಆಸ್ಪತ್ರೆಯಲ್ಲಿ ಇದ್ದವರು ಚೇತರಿಸಿಕೊಂಡಿದ್ದು, ಸೋಮವಾರ ಬೆಳಿಗ್ಗೆ ಗ್ರಾಮಕ್ಕೆ ಕಳುಹಿಸಿಕೊಡಲಾಗಿದೆ. ಪ್ರಸ್ತುತ 3 ಮಂದಿ ಮಾತ್ರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.</p>.<p><strong>ಶಾಸಕರ ಭೇಟಿ: </strong>ಕರ್ನಾಟಕ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ ಹಾಗೂ ಶಾಸಕ ಬಿ.ಸತ್ಯನಾರಾಯಣ ಸೋಮವಾರ ಚಿನ್ನೇನಹಳ್ಳಿ ಗ್ರಾಮಕ್ಕೆ ಮತ್ತು ಶಿರಾ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ಅಸ್ವಸ್ಥರ ಆರೋಗ್ಯ ವಿಚಾರಿಸಿದರು. ಪ್ರಾಣಾಪಾಯವಾಗದಂತೆ ಸಕಾಲದಲ್ಲಿ ಸೂಕ್ತ ಚಿಕಿತ್ಸೆ ನೀಡಿದ ವೈದ್ಯರ ಸೇವೆಯನ್ನು ಶಾಸಕರು ಶ್ಲಾಘಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>