<p>ಪಾವಗಡ: ಶ್ರಾವಣ ಶನಿವಾರದ ಪ್ರಯುಕ್ತ ಪಟ್ಟಣದ ಶನೈಶ್ಚರ ದೇಗುಲಕ್ಕೆ ಬಂದಿದ್ದ ಭಕ್ತರು, ದೇವಾಲಯ ಪ್ರವೇಶ ನಿಷೇಧಿಸಿದ್ದ ಕಾರಣ ರಸ್ತೆ ವಿಭಜಕಕ್ಕೆ ತೆಂಗಿನಕಾಯಿ ಒಡೆದು ಪೂಜೆ ಸಲ್ಲಿಸಿದರು.</p>.<p>ಕೋವಿಡ್ ಮೂರನೆ ಅಲೆ ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲಾಧಿಕಾರಿ 144 ಸೆಕ್ಷನ್ ವಿಧಿಸಿ ಶನಿವಾರ, ಭಾನುವಾರ, ಸೋಮವಾರ, ಸರ್ಕಾರಿ ರಜಾ ದಿನ ಹಾಗೂ ವಿಶೇಷ ದಿನಗಳಂದು ದೇಗುಲ ಪ್ರವೇಶ ನಿಷೇಧಿಸಿರುವುದರಿಂದ ಪಟ್ಟಣದ ಶನೈಶ್ಚರ ದೇಗುಲದ ಬಾಗಿಲು ಮುಚ್ಚಲಾಗಿತ್ತು.</p>.<p>ವಿಷಯ ತಿಳಿಯದೆ ಆಂಧ್ರ ಪ್ರದೇಶದ ವಿವಿಧ ಭಾಗಗಳಿಂದ ಭಕ್ತರು ಬಂದಿದ್ದರು. ಶನೈಶ್ಚರ ದೇಗುಲದ ಸುತ್ತಲೂ ಬ್ಯಾರಿಕೇಡ್ ಹಾಕಿದ್ದರಿಂದ ರಸ್ತೆ ವಿಭಜಕದ ಬಳಿ ಫೋಟೊ ಇರಿಸಿ ವಿಭಜಕಕ್ಕೆ ತೆಂಗಿನಕಾಯಿ ಒಡೆದು ಪೂಜೆ ಸಲ್ಲಿಸಿದರು.</p>.<p>ಸುಮಾರು 50 ಮೀಟರ್ ದೂರದಿಂದ ಭಕ್ತರು ದೇಗುಲದ ಗೋಪುರಕ್ಕೆ ನಮಸ್ಕರಿಸುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು. ವಸತಿ ಗೃಹದಲ್ಲಿ ಕೊಠಡಿ ನೀಡದ ಕಾರಣ ಭಕ್ತರು ಪಟ್ಟಣದ ಶೌಚಾಲಯ, ಹೊರ ವಲಯದ ಕಣಿವೆ ಲಕ್ಷ್ಮಿ ನರಸಿಂಹ ಸ್ವಾಮಿ ದೇಗುಲದ ಬಳಿ ಸ್ನಾನ ಮಾಡಿ, ಅಲ್ಲಿಯೇ ಆಹಾರ<br />ಸೇವಿಸಿದರು.</p>.<p>ದೇವಾಲಯದಲ್ಲಿ ಪ್ರಸಾದ ವಿತರಣೆ ಸ್ಥಗಿತಗೊಳಿಸಲಾಗಿತ್ತು. ರಸ್ತೆಗಳು ವಾಹನ, ಜನರಿಂದ ತುಂಬಿತ್ತು. ವಾರದ ಮುನ್ನವೇ ದರ್ಶನ ನಿಷೇಧಿಸುವ ಬಗ್ಗೆ ವ್ಯಾಪಕ ಪ್ರಚಾರ ನೀಡಿದ್ದರೆ ಜನರಿಗಾದ ನಿರಾಶೆ ತಪ್ಪಿಸಬಹುದಿತ್ತು ಎಂದು ನೂರಾರು ಕಿ.ಮೀ. ದೂರದಿಂದ ಬಂದಿದ್ದ ಭಕ್ತರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಪಾವಗಡ: ಶ್ರಾವಣ ಶನಿವಾರದ ಪ್ರಯುಕ್ತ ಪಟ್ಟಣದ ಶನೈಶ್ಚರ ದೇಗುಲಕ್ಕೆ ಬಂದಿದ್ದ ಭಕ್ತರು, ದೇವಾಲಯ ಪ್ರವೇಶ ನಿಷೇಧಿಸಿದ್ದ ಕಾರಣ ರಸ್ತೆ ವಿಭಜಕಕ್ಕೆ ತೆಂಗಿನಕಾಯಿ ಒಡೆದು ಪೂಜೆ ಸಲ್ಲಿಸಿದರು.</p>.<p>ಕೋವಿಡ್ ಮೂರನೆ ಅಲೆ ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲಾಧಿಕಾರಿ 144 ಸೆಕ್ಷನ್ ವಿಧಿಸಿ ಶನಿವಾರ, ಭಾನುವಾರ, ಸೋಮವಾರ, ಸರ್ಕಾರಿ ರಜಾ ದಿನ ಹಾಗೂ ವಿಶೇಷ ದಿನಗಳಂದು ದೇಗುಲ ಪ್ರವೇಶ ನಿಷೇಧಿಸಿರುವುದರಿಂದ ಪಟ್ಟಣದ ಶನೈಶ್ಚರ ದೇಗುಲದ ಬಾಗಿಲು ಮುಚ್ಚಲಾಗಿತ್ತು.</p>.<p>ವಿಷಯ ತಿಳಿಯದೆ ಆಂಧ್ರ ಪ್ರದೇಶದ ವಿವಿಧ ಭಾಗಗಳಿಂದ ಭಕ್ತರು ಬಂದಿದ್ದರು. ಶನೈಶ್ಚರ ದೇಗುಲದ ಸುತ್ತಲೂ ಬ್ಯಾರಿಕೇಡ್ ಹಾಕಿದ್ದರಿಂದ ರಸ್ತೆ ವಿಭಜಕದ ಬಳಿ ಫೋಟೊ ಇರಿಸಿ ವಿಭಜಕಕ್ಕೆ ತೆಂಗಿನಕಾಯಿ ಒಡೆದು ಪೂಜೆ ಸಲ್ಲಿಸಿದರು.</p>.<p>ಸುಮಾರು 50 ಮೀಟರ್ ದೂರದಿಂದ ಭಕ್ತರು ದೇಗುಲದ ಗೋಪುರಕ್ಕೆ ನಮಸ್ಕರಿಸುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು. ವಸತಿ ಗೃಹದಲ್ಲಿ ಕೊಠಡಿ ನೀಡದ ಕಾರಣ ಭಕ್ತರು ಪಟ್ಟಣದ ಶೌಚಾಲಯ, ಹೊರ ವಲಯದ ಕಣಿವೆ ಲಕ್ಷ್ಮಿ ನರಸಿಂಹ ಸ್ವಾಮಿ ದೇಗುಲದ ಬಳಿ ಸ್ನಾನ ಮಾಡಿ, ಅಲ್ಲಿಯೇ ಆಹಾರ<br />ಸೇವಿಸಿದರು.</p>.<p>ದೇವಾಲಯದಲ್ಲಿ ಪ್ರಸಾದ ವಿತರಣೆ ಸ್ಥಗಿತಗೊಳಿಸಲಾಗಿತ್ತು. ರಸ್ತೆಗಳು ವಾಹನ, ಜನರಿಂದ ತುಂಬಿತ್ತು. ವಾರದ ಮುನ್ನವೇ ದರ್ಶನ ನಿಷೇಧಿಸುವ ಬಗ್ಗೆ ವ್ಯಾಪಕ ಪ್ರಚಾರ ನೀಡಿದ್ದರೆ ಜನರಿಗಾದ ನಿರಾಶೆ ತಪ್ಪಿಸಬಹುದಿತ್ತು ಎಂದು ನೂರಾರು ಕಿ.ಮೀ. ದೂರದಿಂದ ಬಂದಿದ್ದ ಭಕ್ತರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>