<p><strong>ತಿಪಟೂರು</strong>: ತಾಲ್ಲೂಕಿನ ಮತ್ತಿಹಳ್ಳಿಯಲ್ಲಿ ಭಕ್ತರ ನಂಬಿಕೆ ಹಾಗೂ ಶ್ರದ್ಧೆಯ ಕೇಂದ್ರವಾಗಿರುವ ವೀರಭದ್ರೇಶ್ವರ ಹಾಗೂ ಬಿದರಾಂಬಿಕ ದೇವಾಲಯಗಳ ನೂತನ ವಿಮಾನ ಗೋಪುರ ಲೋಕಾರ್ಪಣೆ ಮಹೋತ್ಸವ ಭಾನುವಾರ ವಿಜೃಂಭಣೆಯಿಂದ ನೆರವೇರಿತು.</p>.<p>ಧಾರ್ಮಿಕ ಸಂಸ್ಕೃತಿ ಹಾಗೂ ಗ್ರಾಮೀಣ ಏಕತೆಗೆ ಮಾದರಿಯಾದ ಈ ಮಹೋತ್ಸವಕ್ಕೆ ಭಕ್ತರ ಸಂಭ್ರಮದಿಂದ ಭಾಗವಹಿಸಿದ್ದರು. ಈ ಮಹೋತ್ಸವಕ್ಕೆ ಕೆರೆಗೋಡಿ ರಂಗಾಪುರ ಕ್ಷೇತ್ರದ ಗುರುಪರದೇಶಿಕೇಂದ್ರ ಸ್ವಾಮೀಜಿ ಹಾಗೂ ಮಾಡಾಳು ನಿರಂಜನ ಪೀಠದ ರುದ್ರಮುನಿ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ವಿಮಾನ ಗೋಪುರಕ್ಕೆ ಕಳಸ ಹಸ್ತಾಂತರಿಸಿದರು.</p>.<p>ಕರಿಕೆರೆ ಬ್ರಹ್ಮಲಿಂಗೇಶ್ವರ, ಬೆಳಗುಂಬ ವೀರಭದ್ರೇಶ್ವರ, ರಾಮನಹಳ್ಳಿ ಮಲ್ಲಿಕಾರ್ಜುನಸ್ವಾಮಿ, ಅಮ್ಮನಹಟ್ಟಿ ಮಾಳಮ್ಮದೇವಿ, ಮತ್ತಿಹಳ್ಳಿ ಯಲ್ಲಮ್ಮದೇವಿ ಹಾಗೂ ಮಡೆನೂರು ಗೌಡನಕಟ್ಟೆ ಬಿದರಾಂಬಿಕ ದೇವಿ ಪ್ರತಿಮೆ ಮೆರವಣಿಗೆ ಗ್ರಾಮಕ್ಕೆ ಭೇಟಿ ನೀಡಿದ್ದವು.</p>.<p>ನಂದಿ ದ್ವಜಾರೋಹಣ, ನಂದಿ ಧ್ವಜ ಕುಣಿತ, ಹೋಮ ಹವನ, ಕಳಸ ಪೂಜೆ, ಮಣೇವು ನಡೆಯಿತು. ಮಹೋತ್ಸವ ಅಂಗವಾಗಿ ಗ್ರಾಮಸ್ಥರು ಹಾಗೂ ಭಕ್ತರ ಸಹಭಾಗಿತ್ವದಲ್ಲಿ ಶನಿವಾರ ಸಂಜೆಯಿಂದ ಅನ್ನಪ್ರಸಾದದ ವ್ಯವಸ್ಥೆ ಮಾಡಲಾಗಿದ್ದು, ಸಾವಿರಾರು ಭಕ್ತರು ಸತ್ಕಾರ ಸ್ವೀಕರಿಸಿದರು.</p>.<p>ಮಹೋತ್ಸವಕ್ಕೆ ಮತ್ತಿಹಳ್ಳಿ ಮಾತ್ರವಲ್ಲದೆ ಸುತ್ತಲಿನ ನೂರಕ್ಕೂ ಹೆಚ್ಚು ಗ್ರಾಮಗಳಿಂದ ಭಕ್ತರು ಭೇಟಿ ನೀಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿಪಟೂರು</strong>: ತಾಲ್ಲೂಕಿನ ಮತ್ತಿಹಳ್ಳಿಯಲ್ಲಿ ಭಕ್ತರ ನಂಬಿಕೆ ಹಾಗೂ ಶ್ರದ್ಧೆಯ ಕೇಂದ್ರವಾಗಿರುವ ವೀರಭದ್ರೇಶ್ವರ ಹಾಗೂ ಬಿದರಾಂಬಿಕ ದೇವಾಲಯಗಳ ನೂತನ ವಿಮಾನ ಗೋಪುರ ಲೋಕಾರ್ಪಣೆ ಮಹೋತ್ಸವ ಭಾನುವಾರ ವಿಜೃಂಭಣೆಯಿಂದ ನೆರವೇರಿತು.</p>.<p>ಧಾರ್ಮಿಕ ಸಂಸ್ಕೃತಿ ಹಾಗೂ ಗ್ರಾಮೀಣ ಏಕತೆಗೆ ಮಾದರಿಯಾದ ಈ ಮಹೋತ್ಸವಕ್ಕೆ ಭಕ್ತರ ಸಂಭ್ರಮದಿಂದ ಭಾಗವಹಿಸಿದ್ದರು. ಈ ಮಹೋತ್ಸವಕ್ಕೆ ಕೆರೆಗೋಡಿ ರಂಗಾಪುರ ಕ್ಷೇತ್ರದ ಗುರುಪರದೇಶಿಕೇಂದ್ರ ಸ್ವಾಮೀಜಿ ಹಾಗೂ ಮಾಡಾಳು ನಿರಂಜನ ಪೀಠದ ರುದ್ರಮುನಿ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ವಿಮಾನ ಗೋಪುರಕ್ಕೆ ಕಳಸ ಹಸ್ತಾಂತರಿಸಿದರು.</p>.<p>ಕರಿಕೆರೆ ಬ್ರಹ್ಮಲಿಂಗೇಶ್ವರ, ಬೆಳಗುಂಬ ವೀರಭದ್ರೇಶ್ವರ, ರಾಮನಹಳ್ಳಿ ಮಲ್ಲಿಕಾರ್ಜುನಸ್ವಾಮಿ, ಅಮ್ಮನಹಟ್ಟಿ ಮಾಳಮ್ಮದೇವಿ, ಮತ್ತಿಹಳ್ಳಿ ಯಲ್ಲಮ್ಮದೇವಿ ಹಾಗೂ ಮಡೆನೂರು ಗೌಡನಕಟ್ಟೆ ಬಿದರಾಂಬಿಕ ದೇವಿ ಪ್ರತಿಮೆ ಮೆರವಣಿಗೆ ಗ್ರಾಮಕ್ಕೆ ಭೇಟಿ ನೀಡಿದ್ದವು.</p>.<p>ನಂದಿ ದ್ವಜಾರೋಹಣ, ನಂದಿ ಧ್ವಜ ಕುಣಿತ, ಹೋಮ ಹವನ, ಕಳಸ ಪೂಜೆ, ಮಣೇವು ನಡೆಯಿತು. ಮಹೋತ್ಸವ ಅಂಗವಾಗಿ ಗ್ರಾಮಸ್ಥರು ಹಾಗೂ ಭಕ್ತರ ಸಹಭಾಗಿತ್ವದಲ್ಲಿ ಶನಿವಾರ ಸಂಜೆಯಿಂದ ಅನ್ನಪ್ರಸಾದದ ವ್ಯವಸ್ಥೆ ಮಾಡಲಾಗಿದ್ದು, ಸಾವಿರಾರು ಭಕ್ತರು ಸತ್ಕಾರ ಸ್ವೀಕರಿಸಿದರು.</p>.<p>ಮಹೋತ್ಸವಕ್ಕೆ ಮತ್ತಿಹಳ್ಳಿ ಮಾತ್ರವಲ್ಲದೆ ಸುತ್ತಲಿನ ನೂರಕ್ಕೂ ಹೆಚ್ಚು ಗ್ರಾಮಗಳಿಂದ ಭಕ್ತರು ಭೇಟಿ ನೀಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>