ಕುಣಿಗಲ್: ಟೆಂಪೊ ಟ್ರಾವಲರ್ ವಾಹನ ರಸ್ತೆ ಬದಿ ನಿಂತಿದ್ದ ಖಾಸಗಿ ಬಸ್ ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟು, ನಾಲ್ಕು ಮಂದಿ ಗಾಯಗೊಂಡಿರುವ ಘಟನೆ ತಾಲ್ಲೂಕಿನ ರಾಜ್ಯ ಹೆದ್ದಾರಿ 33ರ ಡಿ.ಹೊಸಹಳ್ಳಿ ಬಳಿ ಗುರುವಾರ ನಡೆದಿದೆ.
ಮೃತರನ್ನು ಸಿಂಧನೂರು ಪಟ್ಟಣದ ಶಶಿಕಲಾ (69) ಮತ್ತು ಟಿಟಿ ಚಾಲಕ ವೀರೇಶ್ (35)ಎಂದು ಗುರುತಿಸಲಾಗಿದೆ, ಸಿಂಧನೂರು ನಿಂದ ಮೈಸೂರಿಗೆ ಪ್ರವಾಸಕ್ಕಾಗಿ ಹೋಗುತ್ತಿದ್ದಾಗ ಘಟನೆ ಸಂಭವಿಸಿದೆ. ಕುಣಿಗಲ್ ತಾಲ್ಲೂಕಿನ ಹುಲಿಯೂರುದುರ್ಗ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.