<p><strong>ತುಮಕೂರು:</strong> ಇಲ್ಲಿನ ವಾಲ್ಮೀಕಿನಗರದ 6ನೇ ಕ್ರಾಸ್ನ ವಿಶ್ವೇಶ್ವರ ಆರಾಧ್ಯ ಅವರ ಮನೆಗೆ ನುಗ್ಗಿ ಬೆದರಿಕೆ ಹಾಕಿ ₹ 5.87 ಲಕ್ಷ ಮೌಲ್ಯದ 4 ಚಿನ್ನದ ಬಳೆಗಳು, ₹ 72 ಸಾವಿರ ನಗದು ಮತ್ತು ಎರಡು ಮೊಬೈಲ್ ದೋಚಿದ ಆರೋಪದ ಮೇಲೆ 10 ಮಂದಿಯನ್ನು ಹೊಸ ಬಡಾವಣೆ ಪೊಲೀಸರು ಬಂಧಿಸಿದ್ದಾರೆ.</p>.<p>ನಗರದ ರೋಹಿತ, ಮನೋಜ್ ಕುಮಾರ್, ಕೆ.ಆರ್. ರಾಘವೇಂದ್ರ, ವೆಂಕಟೇಶ, ಕೆ. ಭರತ್ ಕುಮಾರ್, ಕೆ.ಎಂ. ಗಂಗಾಧರ, ಜಿ.ಎಚ್. ಪವನ್, ಟಿ.ಜಿ. ಸಂತೋಷ್, ಪವನ್ ಕುಮಾರ್, ಹೆಬ್ಬೂರು ಹೋಬಳಿ ಚನ್ನಿಗಪ್ಪನಪಾಳ್ಯದ ಲೋಕೇಶ್ ಬಂಧಿತರು.</p>.<p>ಆರೋಪಿಗಳ ಪತ್ತೆಗೆ ತಿಲಕ್ಪಾರ್ಕ್ ಸಿಪಿಐ ಮುನಿರಾಜು ನೇತೃತ್ವದಲ್ಲಿ ವಿಶೇಷ ತಂಡ ರಚಿಸಲಾಗಿತ್ತು. ರೌಡಿ ರೋಹಿತನ ಜತೆ ಸೇರಿ ಕೃತ್ಯ ಎಸಗಿದ್ದಾಗಿ ಆರೋಪಿಗಳು ಒಪ್ಪಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಬಂಧಿತರಿಂದ ಒಂದು ಆಟೊ, ಎರಡು ದ್ವಿಚಕ್ರವಾಹನ, ₹ 20 ಸಾವಿರ ನಗದು ವಶಪಡಿಸಿಕೊಳ್ಳಲಾಗಿದೆ.</p>.<p>ತುಮಕೂರು ನಗರ ಸಿಪಿಐ ನವೀನ್, ಎಎಸ್ಐ ಪರಮೇಶ್, ಸಿಬ್ಬಂದಿ ಸೈಮನ್ ವಿಕ್ಟರ್, ಮುನಾವರ್ ಪಾಷ, ಹನುಮರಂಗಯ್ಯ, ಲೋಕೇಶ್, ರೇಣುಕಾ ಪ್ರಸನ್ನ, ವಿಠಲ್ ವಾಳಿಖಿಂಡಿ, ನವೀನ್, ರಮೇಶ್, ಜಗದೀಶ್ ಕಾರ್ಯಾಚರಣೆ ತಂಡದಲ್ಲಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು:</strong> ಇಲ್ಲಿನ ವಾಲ್ಮೀಕಿನಗರದ 6ನೇ ಕ್ರಾಸ್ನ ವಿಶ್ವೇಶ್ವರ ಆರಾಧ್ಯ ಅವರ ಮನೆಗೆ ನುಗ್ಗಿ ಬೆದರಿಕೆ ಹಾಕಿ ₹ 5.87 ಲಕ್ಷ ಮೌಲ್ಯದ 4 ಚಿನ್ನದ ಬಳೆಗಳು, ₹ 72 ಸಾವಿರ ನಗದು ಮತ್ತು ಎರಡು ಮೊಬೈಲ್ ದೋಚಿದ ಆರೋಪದ ಮೇಲೆ 10 ಮಂದಿಯನ್ನು ಹೊಸ ಬಡಾವಣೆ ಪೊಲೀಸರು ಬಂಧಿಸಿದ್ದಾರೆ.</p>.<p>ನಗರದ ರೋಹಿತ, ಮನೋಜ್ ಕುಮಾರ್, ಕೆ.ಆರ್. ರಾಘವೇಂದ್ರ, ವೆಂಕಟೇಶ, ಕೆ. ಭರತ್ ಕುಮಾರ್, ಕೆ.ಎಂ. ಗಂಗಾಧರ, ಜಿ.ಎಚ್. ಪವನ್, ಟಿ.ಜಿ. ಸಂತೋಷ್, ಪವನ್ ಕುಮಾರ್, ಹೆಬ್ಬೂರು ಹೋಬಳಿ ಚನ್ನಿಗಪ್ಪನಪಾಳ್ಯದ ಲೋಕೇಶ್ ಬಂಧಿತರು.</p>.<p>ಆರೋಪಿಗಳ ಪತ್ತೆಗೆ ತಿಲಕ್ಪಾರ್ಕ್ ಸಿಪಿಐ ಮುನಿರಾಜು ನೇತೃತ್ವದಲ್ಲಿ ವಿಶೇಷ ತಂಡ ರಚಿಸಲಾಗಿತ್ತು. ರೌಡಿ ರೋಹಿತನ ಜತೆ ಸೇರಿ ಕೃತ್ಯ ಎಸಗಿದ್ದಾಗಿ ಆರೋಪಿಗಳು ಒಪ್ಪಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಬಂಧಿತರಿಂದ ಒಂದು ಆಟೊ, ಎರಡು ದ್ವಿಚಕ್ರವಾಹನ, ₹ 20 ಸಾವಿರ ನಗದು ವಶಪಡಿಸಿಕೊಳ್ಳಲಾಗಿದೆ.</p>.<p>ತುಮಕೂರು ನಗರ ಸಿಪಿಐ ನವೀನ್, ಎಎಸ್ಐ ಪರಮೇಶ್, ಸಿಬ್ಬಂದಿ ಸೈಮನ್ ವಿಕ್ಟರ್, ಮುನಾವರ್ ಪಾಷ, ಹನುಮರಂಗಯ್ಯ, ಲೋಕೇಶ್, ರೇಣುಕಾ ಪ್ರಸನ್ನ, ವಿಠಲ್ ವಾಳಿಖಿಂಡಿ, ನವೀನ್, ರಮೇಶ್, ಜಗದೀಶ್ ಕಾರ್ಯಾಚರಣೆ ತಂಡದಲ್ಲಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>