<p><strong>ಶಿರಾ:</strong> ನಗರಸಭೆ 14ನೇ ವಾರ್ಡ್ ಕೋಟೆ ಬಡಾವಣೆ ಹಾಗೂ 3ನೇ ವಾರ್ಡ್ ವಿದ್ಯಾನಗರದಲ್ಲಿ ಸೋಮವಾರ ಹುಚ್ಚುನಾಯಿ ಕಚ್ಚಿ ಸುಮಾರು 10 ಮಂದಿ ಗಾಯಗೊಂಡಿದ್ದಾರೆ.</p>.<p>ಕೋಟೆ ಬಡಾವಣೆಯಲ್ಲಿ ಹೆಚ್ಚು ಜನರಿಗೆ ಹುಚ್ಚುನಾಯಿ ಕಚ್ಚಿದ್ದು ತೀವ್ರವಾಗಿ ಗಾಯಗೊಂಡಿದ್ದಾರೆ. ರಮೇಶ್, ಬಸವರಾಜು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹಲವರು ಚಿಕಿತ್ಸೆ ಪಡೆದು ಮನೆಗೆ ತೆರಳಿದರು. ನಗರಸಭೆ ಸಿಬ್ಬಂದಿ ಲಿಂಗರಾಜು ಗಾಯಗೊಂಡು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.</p>.<p>ಕೋಟೆ ಬಡಾವಣೆಯ ಹಲವಾರು ಮಂದಿ ನಗರಸಭೆಗೆ ಆಗಮಿಸಿ ಅಧಿಕಾರಿಗಳ ಗಮನಕ್ಕೆ ತಂದರು. ಹುಚ್ಚುನಾಯಿಯನ್ನು ಸಾರ್ವಜನಿಕರು ಸಾಯಿಸಿದರು.</p>.<p>ನಗರಸಭೆ ಪೌರಾಯುಕ್ತ ರುದ್ರೇಶ್, ನಗರಸಭೆ ಅಧ್ಯಕ್ಷೆ ಪೂಜಾ, ಸದಸ್ಯ ಬಿ.ಎಂ.ರಾಧಾಕೃಷ್ಣ, ರಫೀವುಲ್ಲಾ, ಖಾದರ್ ಖಾನ್, ಅರೇಹಳ್ಳಿ ರಮೇಶ್, ತಿಮ್ಮಣ್ಣ ಆಸ್ಪತ್ರೆಗೆ ತೆರಳಿ ವೈದ್ಯರು ಮತ್ತು ಗಾಯಾಳುಗಳ ಜೊತೆ ಚರ್ಚೆ ನಡೆಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿರಾ:</strong> ನಗರಸಭೆ 14ನೇ ವಾರ್ಡ್ ಕೋಟೆ ಬಡಾವಣೆ ಹಾಗೂ 3ನೇ ವಾರ್ಡ್ ವಿದ್ಯಾನಗರದಲ್ಲಿ ಸೋಮವಾರ ಹುಚ್ಚುನಾಯಿ ಕಚ್ಚಿ ಸುಮಾರು 10 ಮಂದಿ ಗಾಯಗೊಂಡಿದ್ದಾರೆ.</p>.<p>ಕೋಟೆ ಬಡಾವಣೆಯಲ್ಲಿ ಹೆಚ್ಚು ಜನರಿಗೆ ಹುಚ್ಚುನಾಯಿ ಕಚ್ಚಿದ್ದು ತೀವ್ರವಾಗಿ ಗಾಯಗೊಂಡಿದ್ದಾರೆ. ರಮೇಶ್, ಬಸವರಾಜು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹಲವರು ಚಿಕಿತ್ಸೆ ಪಡೆದು ಮನೆಗೆ ತೆರಳಿದರು. ನಗರಸಭೆ ಸಿಬ್ಬಂದಿ ಲಿಂಗರಾಜು ಗಾಯಗೊಂಡು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.</p>.<p>ಕೋಟೆ ಬಡಾವಣೆಯ ಹಲವಾರು ಮಂದಿ ನಗರಸಭೆಗೆ ಆಗಮಿಸಿ ಅಧಿಕಾರಿಗಳ ಗಮನಕ್ಕೆ ತಂದರು. ಹುಚ್ಚುನಾಯಿಯನ್ನು ಸಾರ್ವಜನಿಕರು ಸಾಯಿಸಿದರು.</p>.<p>ನಗರಸಭೆ ಪೌರಾಯುಕ್ತ ರುದ್ರೇಶ್, ನಗರಸಭೆ ಅಧ್ಯಕ್ಷೆ ಪೂಜಾ, ಸದಸ್ಯ ಬಿ.ಎಂ.ರಾಧಾಕೃಷ್ಣ, ರಫೀವುಲ್ಲಾ, ಖಾದರ್ ಖಾನ್, ಅರೇಹಳ್ಳಿ ರಮೇಶ್, ತಿಮ್ಮಣ್ಣ ಆಸ್ಪತ್ರೆಗೆ ತೆರಳಿ ವೈದ್ಯರು ಮತ್ತು ಗಾಯಾಳುಗಳ ಜೊತೆ ಚರ್ಚೆ ನಡೆಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>