ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊರಟಗೆರೆ | ಟೆಂಡರ್‌ ಲೋಪ: ಗುತ್ತಿಗೆದಾರರ ಪ್ರತಿಭಟನೆ

Published 9 ನವೆಂಬರ್ 2023, 4:45 IST
Last Updated 9 ನವೆಂಬರ್ 2023, 4:45 IST
ಅಕ್ಷರ ಗಾತ್ರ

ಕೊರಟಗೆರೆ: ಪಂಚಾಯತ್‌ರಾಜ್‌ ಇಲಾಖೆಯ ಗುತ್ತಿಗೆ ಟೆಂಡರ್‌ ಪ್ರಕ್ರಿಯೆಯಲ್ಲಿ ಮೀಸಲಾತಿ ಕೈಬಿಟ್ಟು, ಕರ್ತವ್ಯ ಲೋಪ ಎಸಗಿರುವ ಅಧಿಕಾರಿಗಳನ್ನು ಅಮಾನತುಗೊಳಿಸುವಂತೆ ಒತ್ತಾಯಿಸಿ ಪಟ್ಟಣದಲ್ಲಿ ಬುಧವಾರ ಪರಿಶಿಷ್ಟ ಜಾತಿ ಹಾಗೂ ಪಂಗಡಗಳ ಗುತ್ತಿಗೆದಾರ ಸಂಘದಿಂದ ಪ್ರತಿಭಟನೆ ನಡೆಯಿತು.

ಗುತ್ತಿಗೆ ನೀಡುವಾಗ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಮೀಸಲಾತಿ ಕೈಬಿಟ್ಟು ₹60 ಲಕ್ಷ ಅನುದಾನದ 7 ಕಾಮಗಾರಿಗಳ ಟೆಂಡರ್‌ ಪ್ರಕ್ರಿಯೆ ಪೂರ್ಣಗೊಳಿಸಲಾಗಿದೆ. ಕೊರಟಗೆರೆ ಎಂಜಿನಿಯರ್ ಮುಷೀರ್‌, ಮಧುಗಿರಿ ಕಾರ್ಯನಿರ್ವಾಹಕ ಎಂಜಿನಿಯರ್ ದಯಾನಂದ್‌ ಸರ್ಕಾರದ ಆದೇಶ ಉಲ್ಲಂಘಿಸಿದ್ದಾರೆ. ಕೊರಟಗೆರೆ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ರವಿಕುಮಾರ್‌ ನೀಡಿರುವ ಮೀಸಲಾತಿ ಅನುದಾನದ ಅಂಕಿ–ಅಂಶದ ಆದೇಶವನ್ನು ಬದಿಗಿಟ್ಟು ಇಬ್ಬರು ಕೆಲಸ ಮಾಡಿದ್ದಾರೆ ಎಂದು ಗುತ್ತಿಗೆದಾರ ಲಕ್ಷ್ಮಿನಾರಾಯಣ್‌ ಆರೋಪಿಸಿದರು.

7 ಕಾಮಗಾರಿಯಲ್ಲಿ 2 ಎಸ್‌ಸಿ, 1 ಎಸ್‍ಟಿ ಮತ್ತು 4 ಸಾಮಾನ್ಯ ವರ್ಗಕ್ಕೆ ಮೀಸಲಿಟ್ಟು ಕೊರಟಗೆರೆ ಎಇಇ ರವಿಕುಮಾರ್‌ ಮಧುಗಿರಿ ಮತ್ತು ಕೊರಟಗೆರೆ ಕಚೇರಿಗಳಿಗೆ ಆದೇಶದ ಪ್ರತಿಗಳನ್ನು ಕಳುಹಿಸಿದ್ದಾರೆ. ಆದರೂ ಇದನ್ನು ಉಲ್ಲಂಘಿಸಿ ಕೆಲಸ ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

‘₹60 ಲಕ್ಷ ಅನುದಾನದ 7 ಕಾಮಗಾರಿಗಳ ಟೆಂಡರ್‌ ಪ್ರಕ್ರಿಯೆಗೆ ಈಗಾಗಲೇ ತಡೆ ನೀಡಲಾಗಿದೆ. ತಾಂತ್ರಿಕ ಸಮಸ್ಯೆಯಿಂದ ಈ ಲೋಪವಾಗಿದೆ. ಮಧುಗಿರಿ, ಕೊರಟಗೆರೆ ಕಚೇರಿಯಲ್ಲಿ ಅಧಿಕಾರಿಗಳ ಕೊರತೆ ಇದೆ. ಕೆಲಸದ ಒತ್ತಡದಿಂದ ಇಂತಹ ಲೋಪವಾಗಿದೆ’ ಎಂದು ಮಧುಗಿರಿ ಎಂಜಿನಿಯರ್ ದಯಾನಂದ್‌ ಪ್ರತಿಕ್ರಿಯೆ ನೀಡಿದರು.

ಗುತ್ತಿಗೆದಾರರಾದ ಬಸವರಾಜು, ನಾಗೇಶ್, ಅಶ್ವತ್ಥಪ್ಪ, ಗೋವಿಂದರಾಜು, ದಾಡಿ ವೆಂಕಟೇಶ್, ಪ್ರಸನ್ನಕುಮಾರ್, ಪ್ರಶಾಂತ್, ಕದರಪ್ಪ, ಹನುಮಂತರಾಜು, ಕಾಮರಾಜು, ನಂದನಕುಮಾರ್, ಗೋಪಿನಾಥ್‌ ಇತರರು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT