<p><strong>ತುಮಕೂರು:</strong> ಚಕ್ರವರ್ತಿ ಗೆಳೆಯರ ಬಳಗದ ವತಿಯಿಂದ ನಟ ದಿ.ಪುನೀತ್ ರಾಜ್ಕುಮಾರ್ ನೆನಪಿಗಾಗಿ ಫೆ. 9ರಿಂದ 12ರ ವರೆಗೆ ರಾಷ್ಟ್ರ ಮಟ್ಟದ ಹೊನಲು ಬೆಳಕಿನ ಟೆನ್ನಿಸ್ಬಾಲ್ ಕ್ರಿಕೆಟ್ ಪಂದ್ಯಾವಳಿ ಆಯೋಜಿಸಲಾಗಿದೆ.</p>.<p>ನಗರದ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಪಂದ್ಯಾವಳಿ ನಡೆಯಲಿದೆ. ಪ್ರಥಮ ಬಹುಮಾನವಾಗಿ ₹3 ಲಕ್ಷ ಮತ್ತು ಟ್ರೋಫಿ, ದ್ವಿತೀಯ ಸ್ಥಾನ ಪಡೆದವರಿಗೆ ₹1.50 ಲಕ್ಷ ಹಾಗೂ ಟ್ರೋಫಿ ನೀಡಲಾಗುತ್ತದೆ. ಉತ್ತಮ ಪ್ರದರ್ಶನ ನೀಡಿದ ಆಟಗಾರರಿಗೆ ವೈಯಕ್ತಿಕ ಬಹುಮಾನ ವಿತರಿಸಲಾಗುತ್ತದೆ ಎಂದು ಕನ್ನಡ ಸೇನೆಯ ಅಧ್ಯಕ್ಷ ಧನಿಯಾಕುಮಾರ್ ಇಲ್ಲಿ ಮಂಗಳವಾರ ಹೇಳಿದರು.</p>.<p>ರಾಜ್ಯದ ತಂಡಗಳ ಜತೆಗೆ ಆಂಧ್ರಪ್ರದೇಶ, ಛತ್ತಿಸಗಡ ರಾಜ್ಯದ ತಂಡ ಸೇರಿದಂತೆ ಒಟ್ಟು 32 ತಂಡಗಳು ಭಾಗವಹಿಸಲಿವೆ. ಚಕ್ರವರ್ತಿ ಗೆಳೆಯರ ಬಳಗದ ಪ್ರಕಾಶ್ ಮತ್ತು ತಂಡ ಪ್ರತಿ ಮೂರು ವರ್ಷಕ್ಕೊಮ್ಮೆ ಇಂತಹ ಕ್ರೀಡಾಕೂಟ ಆಯೋಜಿಸುತ್ತಿದ್ದಾರೆ. ಫೆ. 9ರಂದು ಸಂಜೆ 6 ಗಂಟೆಗೆ ರಾಜ್ಯ ಅಥ್ಲೆಟಿಕ್ ಸಂಸ್ಥೆಯ ಅಧ್ಯಕ್ಷ ಡಾ.ಜಿ.ಪರಮೇಶ್ವರ ಕ್ರೀಡಾಕೂಟಕ್ಕೆ ಚಾಲನೆ ನೀಡಲಿದ್ದಾರೆ ಎಂದು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.</p>.<p>ಕ್ರೀಡಾಪಟು ಪಿ.ಎನ್.ಕೃಷ್ಣಮೂರ್ತಿ, ಚಕ್ರವರ್ತಿ ಗೆಳೆಯರ ಬಳಗದ ಪ್ರಕಾಶ್, ನೇತಾಜಿ ಶ್ರೀಧರ್, ಮಾರುತಿ, ಪ್ರಸನ್ನ, ರಂಜನ್, ಚೇತನ್, ಭರತ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು:</strong> ಚಕ್ರವರ್ತಿ ಗೆಳೆಯರ ಬಳಗದ ವತಿಯಿಂದ ನಟ ದಿ.ಪುನೀತ್ ರಾಜ್ಕುಮಾರ್ ನೆನಪಿಗಾಗಿ ಫೆ. 9ರಿಂದ 12ರ ವರೆಗೆ ರಾಷ್ಟ್ರ ಮಟ್ಟದ ಹೊನಲು ಬೆಳಕಿನ ಟೆನ್ನಿಸ್ಬಾಲ್ ಕ್ರಿಕೆಟ್ ಪಂದ್ಯಾವಳಿ ಆಯೋಜಿಸಲಾಗಿದೆ.</p>.<p>ನಗರದ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಪಂದ್ಯಾವಳಿ ನಡೆಯಲಿದೆ. ಪ್ರಥಮ ಬಹುಮಾನವಾಗಿ ₹3 ಲಕ್ಷ ಮತ್ತು ಟ್ರೋಫಿ, ದ್ವಿತೀಯ ಸ್ಥಾನ ಪಡೆದವರಿಗೆ ₹1.50 ಲಕ್ಷ ಹಾಗೂ ಟ್ರೋಫಿ ನೀಡಲಾಗುತ್ತದೆ. ಉತ್ತಮ ಪ್ರದರ್ಶನ ನೀಡಿದ ಆಟಗಾರರಿಗೆ ವೈಯಕ್ತಿಕ ಬಹುಮಾನ ವಿತರಿಸಲಾಗುತ್ತದೆ ಎಂದು ಕನ್ನಡ ಸೇನೆಯ ಅಧ್ಯಕ್ಷ ಧನಿಯಾಕುಮಾರ್ ಇಲ್ಲಿ ಮಂಗಳವಾರ ಹೇಳಿದರು.</p>.<p>ರಾಜ್ಯದ ತಂಡಗಳ ಜತೆಗೆ ಆಂಧ್ರಪ್ರದೇಶ, ಛತ್ತಿಸಗಡ ರಾಜ್ಯದ ತಂಡ ಸೇರಿದಂತೆ ಒಟ್ಟು 32 ತಂಡಗಳು ಭಾಗವಹಿಸಲಿವೆ. ಚಕ್ರವರ್ತಿ ಗೆಳೆಯರ ಬಳಗದ ಪ್ರಕಾಶ್ ಮತ್ತು ತಂಡ ಪ್ರತಿ ಮೂರು ವರ್ಷಕ್ಕೊಮ್ಮೆ ಇಂತಹ ಕ್ರೀಡಾಕೂಟ ಆಯೋಜಿಸುತ್ತಿದ್ದಾರೆ. ಫೆ. 9ರಂದು ಸಂಜೆ 6 ಗಂಟೆಗೆ ರಾಜ್ಯ ಅಥ್ಲೆಟಿಕ್ ಸಂಸ್ಥೆಯ ಅಧ್ಯಕ್ಷ ಡಾ.ಜಿ.ಪರಮೇಶ್ವರ ಕ್ರೀಡಾಕೂಟಕ್ಕೆ ಚಾಲನೆ ನೀಡಲಿದ್ದಾರೆ ಎಂದು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.</p>.<p>ಕ್ರೀಡಾಪಟು ಪಿ.ಎನ್.ಕೃಷ್ಣಮೂರ್ತಿ, ಚಕ್ರವರ್ತಿ ಗೆಳೆಯರ ಬಳಗದ ಪ್ರಕಾಶ್, ನೇತಾಜಿ ಶ್ರೀಧರ್, ಮಾರುತಿ, ಪ್ರಸನ್ನ, ರಂಜನ್, ಚೇತನ್, ಭರತ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>