<p><strong>ತುರುವೇಕೆರೆ:</strong> ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷೆ ಕಾವ್ಯ ರಾಜ್ಕುಮಾರ್ ಅವರು ಗ್ರಾಮ ಪಂಚಾಯಿತಿ ಚುನಾವಣೆಗೆ ಸ್ಪರ್ಧಿಸಿರುವುದು ತಾಲ್ಲೂಕಿನಲ್ಲಿ ಕುತೂಹಲದ ಕೇಂದ್ರ ಬಿಂದುವಾಗಿದೆ.</p>.<p>ಕಾವ್ಯ ರಾಜ್ಕುಮಾರ್ ಅವರು ದಂಡಿನಶಿವರ ಕ್ಷೇತ್ರದ 2ನೇ ಬ್ಲಾಕ್ನಿಂದ ಸ್ಪರ್ಧಿಸಿದ್ದಾರೆ.</p>.<p>‘ನಾನು 2014ರಲ್ಲಿ ದಂಡಿನಶಿವರ ಕ್ಷೇತ್ರದ ತಾಲ್ಲೂಕು ಪಂಚಾಯಿತಿ ಚುನಾವಣೆಯಲ್ಲಿ ಗೆದಿದ್ದೆ. 17 ತಿಂಗಳು ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆಯಾಗಿ ಕಾರ್ಯನಿರ್ವಹಿಸಿದ್ದೇನೆ. ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆಯಾಗಿದ್ದಾಗ ₹15 ಲಕ್ಷ ಅನುದಾನ ಮಾತ್ರ ಬರುತ್ತಿತ್ತು. ಆದರೆ ಕ್ಷೇತ್ರದ ಗ್ರಾಮಗಳ ಸಂಖ್ಯೆ ಹೆಚ್ಚಿದ್ದವು. ಕಡಿಮೆ ಹಣದಲ್ಲಿ ಯಾವ ಗ್ರಾಮವನ್ನು ಪರಿಪೂರ್ಣ ಅಭಿವೃದ್ದಿ ಮಾಡಲಾಗುತ್ತಿಲ್ಲ ಎಂಬ ಅಸಮಾಧಾನವಿತ್ತು’ ಎನ್ನುತ್ತಾರೆ ಕಾವ್ಯ.</p>.<p>ಇತ್ತೀಚೆಗೆ ಸರ್ಕಾರ ಗ್ರಾಮ ಪಂಚಾಯಿತಿಗೆ ಹೆಚ್ಚಿನ ಅಧಿಕಾರ ಮತ್ತು ಅನುದಾನ ನೀಡುತ್ತಿದೆ. ದಂಡಿನಶಿವರ ಮತ್ತು ಅದರ ವ್ಯಾಪ್ತಿಯ ಗ್ರಾಮಗಳ ಅಭಿವೃದ್ಧಿಗಾಗಿ ಗ್ರಾಮ ಪಂಚಾಯಿತಿಗೆ ಸ್ಪರ್ಧಿಸಿದ್ದೇನೆ. ಗ್ರಾಮ ಪಂಚಾಯಿತಿಯಲ್ಲಿ ಜನರ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡುವ ವಿಶ್ವಾಸವಿದೆ ಎನ್ನುತ್ತಾರೆ ಅವರು.</p>.<p>ಈಗಾಗಲೇ ದಂಡಿನಶಿವರ ವ್ಯಾಪ್ತಿಯ ಗ್ರಾಮಗಳಲ್ಲಿ ರಸ್ತೆ, ಕುಡಿಯುವ ನೀರು, ಚರಂಡಿ ಸೇರಿದಂತೆ ಅನೇಕ ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದೇನೆ ಎಂದರು.</p>.<p>ಮೂರ್ನಾಲ್ಕು ದಿನಗಳಿಂದ ಬಿ.ಹೊಸೂರು, ದಂಡಿನಶಿವರ, ದಂಡಿನಶಿವರ ಜನತಾ ಕಾಲೊನಿಗಳಲ್ಲಿ ಪ್ರಚಾರ ನಡೆಸಿದ್ದೇವೆ. ಅಲ್ಲಿನ ಜನರುಹಲವು ಸಮಸ್ಯೆಗಳನ್ನು ಮನವರಿಕೆ ಮಾಡಿಕೊಟ್ಟಿದ್ದಾರೆ. ಗೆಲ್ಲುವ ಸಂಪೂರ್ಣ ವಿಶ್ವಾಸವಿದೆ. ಸೋಲು ಗೆಲುವುಗಳನ್ನು ಸಮನಾಗಿ<br />ಸ್ವೀಕರಿಸಿ ಜನರ, ಪ್ರೀತಿ ವಿಶ್ವಾಸ ಗಳಿಸಲು ಇನ್ನಷ್ಟು ಗಟ್ಟಿಯಾಗುವೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುರುವೇಕೆರೆ:</strong> ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷೆ ಕಾವ್ಯ ರಾಜ್ಕುಮಾರ್ ಅವರು ಗ್ರಾಮ ಪಂಚಾಯಿತಿ ಚುನಾವಣೆಗೆ ಸ್ಪರ್ಧಿಸಿರುವುದು ತಾಲ್ಲೂಕಿನಲ್ಲಿ ಕುತೂಹಲದ ಕೇಂದ್ರ ಬಿಂದುವಾಗಿದೆ.</p>.<p>ಕಾವ್ಯ ರಾಜ್ಕುಮಾರ್ ಅವರು ದಂಡಿನಶಿವರ ಕ್ಷೇತ್ರದ 2ನೇ ಬ್ಲಾಕ್ನಿಂದ ಸ್ಪರ್ಧಿಸಿದ್ದಾರೆ.</p>.<p>‘ನಾನು 2014ರಲ್ಲಿ ದಂಡಿನಶಿವರ ಕ್ಷೇತ್ರದ ತಾಲ್ಲೂಕು ಪಂಚಾಯಿತಿ ಚುನಾವಣೆಯಲ್ಲಿ ಗೆದಿದ್ದೆ. 17 ತಿಂಗಳು ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆಯಾಗಿ ಕಾರ್ಯನಿರ್ವಹಿಸಿದ್ದೇನೆ. ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆಯಾಗಿದ್ದಾಗ ₹15 ಲಕ್ಷ ಅನುದಾನ ಮಾತ್ರ ಬರುತ್ತಿತ್ತು. ಆದರೆ ಕ್ಷೇತ್ರದ ಗ್ರಾಮಗಳ ಸಂಖ್ಯೆ ಹೆಚ್ಚಿದ್ದವು. ಕಡಿಮೆ ಹಣದಲ್ಲಿ ಯಾವ ಗ್ರಾಮವನ್ನು ಪರಿಪೂರ್ಣ ಅಭಿವೃದ್ದಿ ಮಾಡಲಾಗುತ್ತಿಲ್ಲ ಎಂಬ ಅಸಮಾಧಾನವಿತ್ತು’ ಎನ್ನುತ್ತಾರೆ ಕಾವ್ಯ.</p>.<p>ಇತ್ತೀಚೆಗೆ ಸರ್ಕಾರ ಗ್ರಾಮ ಪಂಚಾಯಿತಿಗೆ ಹೆಚ್ಚಿನ ಅಧಿಕಾರ ಮತ್ತು ಅನುದಾನ ನೀಡುತ್ತಿದೆ. ದಂಡಿನಶಿವರ ಮತ್ತು ಅದರ ವ್ಯಾಪ್ತಿಯ ಗ್ರಾಮಗಳ ಅಭಿವೃದ್ಧಿಗಾಗಿ ಗ್ರಾಮ ಪಂಚಾಯಿತಿಗೆ ಸ್ಪರ್ಧಿಸಿದ್ದೇನೆ. ಗ್ರಾಮ ಪಂಚಾಯಿತಿಯಲ್ಲಿ ಜನರ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡುವ ವಿಶ್ವಾಸವಿದೆ ಎನ್ನುತ್ತಾರೆ ಅವರು.</p>.<p>ಈಗಾಗಲೇ ದಂಡಿನಶಿವರ ವ್ಯಾಪ್ತಿಯ ಗ್ರಾಮಗಳಲ್ಲಿ ರಸ್ತೆ, ಕುಡಿಯುವ ನೀರು, ಚರಂಡಿ ಸೇರಿದಂತೆ ಅನೇಕ ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದೇನೆ ಎಂದರು.</p>.<p>ಮೂರ್ನಾಲ್ಕು ದಿನಗಳಿಂದ ಬಿ.ಹೊಸೂರು, ದಂಡಿನಶಿವರ, ದಂಡಿನಶಿವರ ಜನತಾ ಕಾಲೊನಿಗಳಲ್ಲಿ ಪ್ರಚಾರ ನಡೆಸಿದ್ದೇವೆ. ಅಲ್ಲಿನ ಜನರುಹಲವು ಸಮಸ್ಯೆಗಳನ್ನು ಮನವರಿಕೆ ಮಾಡಿಕೊಟ್ಟಿದ್ದಾರೆ. ಗೆಲ್ಲುವ ಸಂಪೂರ್ಣ ವಿಶ್ವಾಸವಿದೆ. ಸೋಲು ಗೆಲುವುಗಳನ್ನು ಸಮನಾಗಿ<br />ಸ್ವೀಕರಿಸಿ ಜನರ, ಪ್ರೀತಿ ವಿಶ್ವಾಸ ಗಳಿಸಲು ಇನ್ನಷ್ಟು ಗಟ್ಟಿಯಾಗುವೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>