<p><strong>ಕುಣಿಗಲ್:</strong> ಶಿಕ್ಷಣದಿಂದ ಮಾತ್ರ ಜೀವನದಲ್ಲಿ ಉನ್ನತಿ ಸಾಧಿಸಲು ಸಾಧ್ಯ. ವಿದ್ವಾಂಸರು ಎಲ್ಲೆಡೆ ಗೌರವಿಸಲ್ಪಡುತ್ತಾರೆ. ಶಿಕ್ಷಣಕ್ಕಾಗಿ ವಿದ್ಯಾರ್ಥಿ ಜೀವನ ಅರ್ಪಿಸಿ, ಜ್ಞಾನ ಸಂಪಾದನೆಗಾಗಿ ಅಧ್ಯಯನಶೀಲರಾಗಿ ಎಂದು ತುಮಕೂರು ವಿಶ್ವವಿದ್ಯಾನಿಲಯದ ಉಪ ಕುಲಪತಿ ಪ್ರೊ.ಎಂ.ವೆಂಕಟೇಶ್ವರಲು ಹೇಳಿದರು.</p>.<p>ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯಶಾಸ್ತ್ರ ವಿಭಾಗ ಮತ್ತು ಐಕ್ಯೂಎಸಿಯಿಂದ ಏರ್ಪಡಿಸಿದ್ದ ಇಗ್ನೈಟ್ 2025, ಪ್ರಥಮ ಬಿ.ಕಾಂ. ವಿದ್ಯಾರ್ಥಿಗಳ ಸ್ವಾಗತ ಸಮಾರಂಭದಲ್ಲಿ ಮಾತನಾಡಿದರು.</p>.<p>ವಿಶ್ವದ ಬಹುತೇಕ ಉದ್ದಿಮೆಗಳ ಸಿಇಒ ಗಳು ಭಾರತೀಯರಾಗಿದ್ದು, ಭಾರತದ ಯುವ ಪ್ರತಿಭೆಗೆ ವಿಶ್ವವೇ ಬೆರಗಾಗಿದೆ. ವಿದ್ಯಾರ್ಥಿಗಳು ಪಠ್ಯದ ಜತೆ ಸಾಮಾನ್ಯ ಜ್ಞಾನ ಹೆಚ್ಚಿಸಿಕೊಳ್ಳಬೇಕಿದೆ ಎಂದರು.</p>.<p>ತುಮಕೂರು ವಿಶ್ವವಿದ್ಯಾನಿಲಯ ದಾನಿಗಳ ನೆರವಿನಿಂದ ಮಧ್ಯಾಹ್ನದ ಉಪಹಾರ ಯೋಜನೆ ಜಾರಿಗೆ ತಂದಿದೆ. 5 ವಿದ್ಯಾರ್ಥಿಗಳನ್ನು ಶೈಕ್ಷಣಿಕ ಪ್ರವಾಸಕ್ಕಾಗಿ ಇಂಗ್ಲೆಂಡಿಗೆ ಕಳಿಸಿದೆ. ನವೋದ್ಯಮ ತರಬೇತಿ ಕೇಂದ್ರ ಪ್ರಾರಂಭಿಸಿ ಯುವಜನರಿಗೆ ಉದ್ಯಮ ಪ್ರಾರಂಭಿಸಿಲು ಸಹಕರಿಸಿದೆ ಎಂದರು.</p>.<p>ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಟಿ.ಎನ್.ನರಸಿಂಹಮೂರ್ತಿ, ವಾಣಿಜ್ಯಶಾಸ್ತ್ರ ಕಲಿತವರು ಜಾಗತಿಕ ಆರ್ಥಿಕತೆ, ನಾವೀನ್ಯತೆ, ವ್ಯಾಪಾರ, ಉದ್ದಿಮೆ, ಹಣಕಾಸು, ವಿಮೆ, ಮಾರುಕಟ್ಟೆ ಮತ್ತು ಸಂಪನ್ಮೂಲ ನಿರ್ವಹಣೆಯ ಜ್ಞಾನ ಅರಿತು ವಿಶ್ವದೆಲ್ಲೆಡೆ ಇರುವ ಅವಕಾಶ ಪಡೆಯಬಹುದು ಎಂದರು.</p>.<p>ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಹಿಮಾಲಯ ಪಬ್ಲಿಷಿಂಗ್ ಹೌಸ್ ನೀಡಿದ ಪಠ್ಯಪುಸ್ತಕ ನೀಡಲಾಯಿತು. ಸಾಂಸ್ಕೃತಿಕ ಚಟುವಟಿಕೆಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು.</p>.<p>ಪ್ರಾಂಶುಪಾಲ ರಾಮಾಂಜನಪ್ಪ, ಆಂಗ್ಲ ವಿಭಾಗದ ಮುಖ್ಯಸ್ಥ ಸಿ.ಆರ್.ಮನೋಜ್, ಮ್ಯಾನೇಜರ್ ಚೆಲುವಮೂರ್ತೀ, ಸಿ.ಜಿ.ನಾಗಮಣಿ, ಮೋಜಿನಕುಮಾರ್, ಶಶಿಕಲ, ಬಬಿತ, ಮಂಜುಸ್ವಾಮಿ ನಾಗಮಣಿ ಬಿ.ಸುರೇಶ್, ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕುಣಿಗಲ್:</strong> ಶಿಕ್ಷಣದಿಂದ ಮಾತ್ರ ಜೀವನದಲ್ಲಿ ಉನ್ನತಿ ಸಾಧಿಸಲು ಸಾಧ್ಯ. ವಿದ್ವಾಂಸರು ಎಲ್ಲೆಡೆ ಗೌರವಿಸಲ್ಪಡುತ್ತಾರೆ. ಶಿಕ್ಷಣಕ್ಕಾಗಿ ವಿದ್ಯಾರ್ಥಿ ಜೀವನ ಅರ್ಪಿಸಿ, ಜ್ಞಾನ ಸಂಪಾದನೆಗಾಗಿ ಅಧ್ಯಯನಶೀಲರಾಗಿ ಎಂದು ತುಮಕೂರು ವಿಶ್ವವಿದ್ಯಾನಿಲಯದ ಉಪ ಕುಲಪತಿ ಪ್ರೊ.ಎಂ.ವೆಂಕಟೇಶ್ವರಲು ಹೇಳಿದರು.</p>.<p>ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯಶಾಸ್ತ್ರ ವಿಭಾಗ ಮತ್ತು ಐಕ್ಯೂಎಸಿಯಿಂದ ಏರ್ಪಡಿಸಿದ್ದ ಇಗ್ನೈಟ್ 2025, ಪ್ರಥಮ ಬಿ.ಕಾಂ. ವಿದ್ಯಾರ್ಥಿಗಳ ಸ್ವಾಗತ ಸಮಾರಂಭದಲ್ಲಿ ಮಾತನಾಡಿದರು.</p>.<p>ವಿಶ್ವದ ಬಹುತೇಕ ಉದ್ದಿಮೆಗಳ ಸಿಇಒ ಗಳು ಭಾರತೀಯರಾಗಿದ್ದು, ಭಾರತದ ಯುವ ಪ್ರತಿಭೆಗೆ ವಿಶ್ವವೇ ಬೆರಗಾಗಿದೆ. ವಿದ್ಯಾರ್ಥಿಗಳು ಪಠ್ಯದ ಜತೆ ಸಾಮಾನ್ಯ ಜ್ಞಾನ ಹೆಚ್ಚಿಸಿಕೊಳ್ಳಬೇಕಿದೆ ಎಂದರು.</p>.<p>ತುಮಕೂರು ವಿಶ್ವವಿದ್ಯಾನಿಲಯ ದಾನಿಗಳ ನೆರವಿನಿಂದ ಮಧ್ಯಾಹ್ನದ ಉಪಹಾರ ಯೋಜನೆ ಜಾರಿಗೆ ತಂದಿದೆ. 5 ವಿದ್ಯಾರ್ಥಿಗಳನ್ನು ಶೈಕ್ಷಣಿಕ ಪ್ರವಾಸಕ್ಕಾಗಿ ಇಂಗ್ಲೆಂಡಿಗೆ ಕಳಿಸಿದೆ. ನವೋದ್ಯಮ ತರಬೇತಿ ಕೇಂದ್ರ ಪ್ರಾರಂಭಿಸಿ ಯುವಜನರಿಗೆ ಉದ್ಯಮ ಪ್ರಾರಂಭಿಸಿಲು ಸಹಕರಿಸಿದೆ ಎಂದರು.</p>.<p>ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಟಿ.ಎನ್.ನರಸಿಂಹಮೂರ್ತಿ, ವಾಣಿಜ್ಯಶಾಸ್ತ್ರ ಕಲಿತವರು ಜಾಗತಿಕ ಆರ್ಥಿಕತೆ, ನಾವೀನ್ಯತೆ, ವ್ಯಾಪಾರ, ಉದ್ದಿಮೆ, ಹಣಕಾಸು, ವಿಮೆ, ಮಾರುಕಟ್ಟೆ ಮತ್ತು ಸಂಪನ್ಮೂಲ ನಿರ್ವಹಣೆಯ ಜ್ಞಾನ ಅರಿತು ವಿಶ್ವದೆಲ್ಲೆಡೆ ಇರುವ ಅವಕಾಶ ಪಡೆಯಬಹುದು ಎಂದರು.</p>.<p>ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಹಿಮಾಲಯ ಪಬ್ಲಿಷಿಂಗ್ ಹೌಸ್ ನೀಡಿದ ಪಠ್ಯಪುಸ್ತಕ ನೀಡಲಾಯಿತು. ಸಾಂಸ್ಕೃತಿಕ ಚಟುವಟಿಕೆಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು.</p>.<p>ಪ್ರಾಂಶುಪಾಲ ರಾಮಾಂಜನಪ್ಪ, ಆಂಗ್ಲ ವಿಭಾಗದ ಮುಖ್ಯಸ್ಥ ಸಿ.ಆರ್.ಮನೋಜ್, ಮ್ಯಾನೇಜರ್ ಚೆಲುವಮೂರ್ತೀ, ಸಿ.ಜಿ.ನಾಗಮಣಿ, ಮೋಜಿನಕುಮಾರ್, ಶಶಿಕಲ, ಬಬಿತ, ಮಂಜುಸ್ವಾಮಿ ನಾಗಮಣಿ ಬಿ.ಸುರೇಶ್, ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>