ಇದಾದ ಕೆಲವು ದಿನಗಳ ನಂತರ ಮಾಧವ್ರಾವ್ ಗುರೂಜಿ ಎಂಬ ಹೆಸರಲ್ಲಿ ವಿಜಯ್ಬಾಬುಗೆ ಕರೆ ಮಾಡಿದ ವ್ಯಕ್ತಿ ದೊಡ್ಡ ಮಟ್ಟದ ಪೂಜೆ, ಹೋಮ ನಡೆಸಿದರೆ ನಿಮ್ಮೆಲ್ಲ ಸಮಸ್ಯೆಗಳು ಬಗೆಹರಿಯುತ್ತವೆ ಎಂದು ಹೇಳಿ ತಮ್ಮ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆ ಮಾಡಿಸಿಕೊಂಡಿದ್ದರು. ಉದ್ಯಮಿಯು ಇಬ್ಬರಿಗೆ ಸೇರಿ ವಿವಿಧ ಹಂತಗಳಲ್ಲಿ ಹಣ ನೀಡಿದ್ದರು. ಹಣ ಪಡೆದ ನಂತರ ಜ್ಯೋತಿಷಿಗಳು ಮೊಬೈಲ್ ಸ್ವಿಚ್ ಆಫ್ ಮಾಡಿದ್ದಾರೆ.