ಕಳೆದ ಎಂಟು, ಹತ್ತು ವರ್ಷಗಳಿಂದ ಕೆಎಸ್wwಆರ್ಟಿಸಿ ಬಸ್ ನಿಲ್ದಾಣ, ಆಟೊ ನಿಲ್ದಾಣ ಸೇರಿದಂತೆ ನಗರದ ಆಯಕಟ್ಟಿನ ವಿವಿಧ ಬಡಾವಣೆಗಳಲ್ಲಿ, ಉದ್ಯಾನಗಳಲ್ಲಿ ಗಿಡಗಳನ್ನು ನೆಟ್ಟು, ಪೋಷಿಸಿರುವುದಕ್ಕೆ ಸಾಕ್ಷಿಯಾಗಿ ಇಂದು ನೂರಾರು ಮರಗಳು ನೆರಳು ನೀಡುತ್ತಿವೆ. ರಾಷ್ಟ್ರೀಯ ಸೇವಾ ಯೋಜನೆಯ ಶಿಬಿರದ ಮೂಲಕ ಗ್ರಾಮೀಣ ಪ್ರದೇಶಗಳಲ್ಲಿಯೂ ಗಿಡ-ಮರಗಳನ್ನು ನೆಟ್ಟಿದ್ದಾರೆ. ಆ ಮೂಲಕ ಗ್ರಾಮದ ಜನರಲ್ಲಿಯೂ ಪರಿಸರದ ಅರಿವು ಮೂಡಿಸಿದ್ದಾರೆ.