<p><strong>ತುಮಕೂರು</strong>: ಟಿ.ವಿ, ಸಿನಿಮಾಕ್ಕಿಂತ ನಾಟಕ ಪ್ರತ್ಯಕ್ಷವಾಗಿ ಪ್ರೇಕ್ಷಕರನ್ನು ನಾಟುವ ಪ್ರಭಾವಶಾಲಿ ಕಲೆಯಾಗಿದೆ ಎಂದು ಸಿದ್ಧಗಂಗಾ ಆಸ್ಪತ್ರೆ ನಿರ್ದೇಶಕ ಡಾ.ಎಸ್.ಪರಮೇಶ್ ತಿಳಿಸಿದರು.</p>.<p>ಝೆನ್ ಟೀಮ್ ವತಿಯಿಂದ ಈಚೆಗೆ ಹಮ್ಮಿಕೊಂಡಿದ್ದ ನಾಟಕೋತ್ಸವ ಸಮಾರಂಭವನ್ನು ಹಾರ್ಮೋನಿಯಂ ನುಡಿಸುವುದರ ಮೂಲಕ ಉದ್ಘಾಟಿಸಿ ಮಾತನಾಡಿದರು.</p>.<p>ಆಧುನಿಕ ಕಲೆಗಳಲ್ಲಿ ನಾಟಕ ಅತ್ಯಂತ ಪ್ರಭಾವಶಾಲಿ ಕಲೆಯಾಗಿದ್ದು, ಪ್ರೇಕ್ಷಕರನ್ನು ರಂಜಿಸುವ ಜತೆಗೆ ನೇರವಾಗಿ ನಾಟುವ ಮೂಲಕ ಉದ್ದೀಪನಗೊಳಿಸುತ್ತದೆ. ನಾಟಕದ ವಸ್ತು, ವಿಷಯ ಅಳವಡಿಸಿಕೊಳ್ಳುವುದಷ್ಟೇ ಅಲ್ಲದೇ, ಬೇರೆಯವರಿಗೂ ಹೇಳಬಹುದಾಗಿದೆ ಎಂದರು.</p>.<p>ಆಧುನಿಕ ಜಗತ್ತಿನಲ್ಲಿ ಹಳೆಯ ಕಲೆಗಳನ್ನು ಮರೆಯುತ್ತಿದ್ದೇವೆ. ಪ್ರೇಕ್ಷಕರನ್ನು ನೇರವಾಗಿ ತಟ್ಟುವ ನಾಟಕದಂತಕ ಕಲೆ ಉಳಿಸಿ, ಬೆಳೆಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ಹೇಳಿದರು.</p>.<p>ಇತಿಹಾಸ ಉಪನ್ಯಾಸಕ ಕೊಟ್ಟ ಶಂಕರ್, ‘ಜಿಲ್ಲೆಯಲ್ಲಿ ನಾಟಕ, ನಾಟಕೋತ್ಸವ ಏರ್ಪಡಿಸುವ ಮೂಲಕ ಸಾಂಸ್ಕೃತಿಕ ಲೋಕದ ಅಸ್ಮಿತೆಯನ್ನು ಉಳಿಸುವ ನಿಟ್ಟಿನಲ್ಲಿ ಝೆನ್ಟೀಮ್ ಕೆಲಸ ಮಾಡುತ್ತಿದೆ’ ಎಂದು ತಿಳಿಸಿದರು.</p>.<p>ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಹುಲ್ಕುಮಾರ್ ಶಹಾಪುರವಾಡ್, ‘ನಾಟಕ ನೋಡುವ, ಸಂಗೀತ ಕೇಳುವ ಹವ್ಯಾಸವಿದೆ. ತಾವೊಬ್ಬ ಕಲಾಭಿಮಾನಿ’ ಎಂದರು. 8ನೇ ತರಗತಿ ಓದುತ್ತಿದ್ದಾಗ ಅಂಗೂಲಿಮಾಲಾ ನಾಟಕದಲ್ಲಿ ಪಾತ್ರಧಾರಿಯಾಗಿದ್ದ ಘಟನೆಯನ್ನು ಸ್ಮರಿಸಿದರು.</p>.<p>ಉಪನ್ಯಾಸಕಿ ಆರತಿ, ಝೆನ್ಟೀಮ್ ಮುಖ್ಯಸ್ಥ ಉಗಮ ಶ್ರೀನಿವಾಸ್ ಉಪಸ್ಥಿತರಿದ್ದರು. ಶಿಕ್ಷಕಿ ತೇಜಸ್ವಿನಿ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು</strong>: ಟಿ.ವಿ, ಸಿನಿಮಾಕ್ಕಿಂತ ನಾಟಕ ಪ್ರತ್ಯಕ್ಷವಾಗಿ ಪ್ರೇಕ್ಷಕರನ್ನು ನಾಟುವ ಪ್ರಭಾವಶಾಲಿ ಕಲೆಯಾಗಿದೆ ಎಂದು ಸಿದ್ಧಗಂಗಾ ಆಸ್ಪತ್ರೆ ನಿರ್ದೇಶಕ ಡಾ.ಎಸ್.ಪರಮೇಶ್ ತಿಳಿಸಿದರು.</p>.<p>ಝೆನ್ ಟೀಮ್ ವತಿಯಿಂದ ಈಚೆಗೆ ಹಮ್ಮಿಕೊಂಡಿದ್ದ ನಾಟಕೋತ್ಸವ ಸಮಾರಂಭವನ್ನು ಹಾರ್ಮೋನಿಯಂ ನುಡಿಸುವುದರ ಮೂಲಕ ಉದ್ಘಾಟಿಸಿ ಮಾತನಾಡಿದರು.</p>.<p>ಆಧುನಿಕ ಕಲೆಗಳಲ್ಲಿ ನಾಟಕ ಅತ್ಯಂತ ಪ್ರಭಾವಶಾಲಿ ಕಲೆಯಾಗಿದ್ದು, ಪ್ರೇಕ್ಷಕರನ್ನು ರಂಜಿಸುವ ಜತೆಗೆ ನೇರವಾಗಿ ನಾಟುವ ಮೂಲಕ ಉದ್ದೀಪನಗೊಳಿಸುತ್ತದೆ. ನಾಟಕದ ವಸ್ತು, ವಿಷಯ ಅಳವಡಿಸಿಕೊಳ್ಳುವುದಷ್ಟೇ ಅಲ್ಲದೇ, ಬೇರೆಯವರಿಗೂ ಹೇಳಬಹುದಾಗಿದೆ ಎಂದರು.</p>.<p>ಆಧುನಿಕ ಜಗತ್ತಿನಲ್ಲಿ ಹಳೆಯ ಕಲೆಗಳನ್ನು ಮರೆಯುತ್ತಿದ್ದೇವೆ. ಪ್ರೇಕ್ಷಕರನ್ನು ನೇರವಾಗಿ ತಟ್ಟುವ ನಾಟಕದಂತಕ ಕಲೆ ಉಳಿಸಿ, ಬೆಳೆಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ಹೇಳಿದರು.</p>.<p>ಇತಿಹಾಸ ಉಪನ್ಯಾಸಕ ಕೊಟ್ಟ ಶಂಕರ್, ‘ಜಿಲ್ಲೆಯಲ್ಲಿ ನಾಟಕ, ನಾಟಕೋತ್ಸವ ಏರ್ಪಡಿಸುವ ಮೂಲಕ ಸಾಂಸ್ಕೃತಿಕ ಲೋಕದ ಅಸ್ಮಿತೆಯನ್ನು ಉಳಿಸುವ ನಿಟ್ಟಿನಲ್ಲಿ ಝೆನ್ಟೀಮ್ ಕೆಲಸ ಮಾಡುತ್ತಿದೆ’ ಎಂದು ತಿಳಿಸಿದರು.</p>.<p>ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಹುಲ್ಕುಮಾರ್ ಶಹಾಪುರವಾಡ್, ‘ನಾಟಕ ನೋಡುವ, ಸಂಗೀತ ಕೇಳುವ ಹವ್ಯಾಸವಿದೆ. ತಾವೊಬ್ಬ ಕಲಾಭಿಮಾನಿ’ ಎಂದರು. 8ನೇ ತರಗತಿ ಓದುತ್ತಿದ್ದಾಗ ಅಂಗೂಲಿಮಾಲಾ ನಾಟಕದಲ್ಲಿ ಪಾತ್ರಧಾರಿಯಾಗಿದ್ದ ಘಟನೆಯನ್ನು ಸ್ಮರಿಸಿದರು.</p>.<p>ಉಪನ್ಯಾಸಕಿ ಆರತಿ, ಝೆನ್ಟೀಮ್ ಮುಖ್ಯಸ್ಥ ಉಗಮ ಶ್ರೀನಿವಾಸ್ ಉಪಸ್ಥಿತರಿದ್ದರು. ಶಿಕ್ಷಕಿ ತೇಜಸ್ವಿನಿ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>