ತಜ್ಞರ ಮುನ್ನೆಚ್ಚರಿಕೆಯ ಸೂಚನೆಯ ನಡುವೆಯೂ, ಸರ್ಕಾರದ ಜವಾಬ್ದಾರಿ ರಹಿತ ನಡೆಯಿಂದ ಕೋವಿಡ್ ಎರಡನೇ ಅಲೆಗೆ ಜನರು ದೊಡ್ಡ ಸಂಖ್ಯೆಯಲ್ಲಿ ಸಾವಿಗೀಡಾಗುವಂತಾಗಿದೆ. ಅತ್ಯಂತ ವೇಗವಾಗಿ ಹರಡಲು ಕಾರಣವಾಗಿದೆ. ಹೆಚ್ಚಾಗುತ್ತಿರುವ ಸೋಂಕಿತರ ಸಂಖ್ಯೆಯ ವೇಗವನ್ನು ಗಮನಿಸಿದರೆ ರಾಜ್ಯದಲ್ಲಿರುವ ಈಗಿನ ಆಸ್ಪತ್ರೆ ವ್ಯವಸ್ಥೆ ಸಾಲದಾಗಿದೆ. ಅದಕ್ಕಾಗಿ, ಶಾಲಾ, ಕಾಲೇಜು, ಹಾಸ್ಟೆಲ್, ಕಲ್ಯಾಣ ಮಂಟಪ, ಹೋಟೆಲ್ಗಳನ್ನು ಬಳಸಿಕೊಳ್ಳಲು ಕೇಂದ್ರ ಸರಕಾರ ನೆರವು ನೀಡಬೇಕು ಎಂದು ಒತ್ತಾಯಿಸಿದ್ದಾರೆ.