ಕಾಂಗ್ರೆಸ್ ಅಭ್ಯರ್ಥಿ ರಮೇಶ್ ಬಾಬು, ಬಿಜೆಪಿ ಅಭ್ಯರ್ಥಿ ಚಿದಾನಂದಗೌಡ, ಜೆಡಿಎಸ್ ಅಭ್ಯರ್ಥಿ ಚೌಡರೆಡ್ಡಿ ತೂಪಲ್ಲಿ, ಪಕ್ಷೇತರ ಅಭ್ಯರ್ಥಿಗಳಾದ ಹಾಲನೂರು ಲೇಪಾಕ್ಷ, ಡಿ.ಟಿ.ಶ್ರೀನಿವಾಸ್ ಬೆಂಬಲಿಗರು ಮತದಾನ ಕೇಂದ್ರಗಳ ಹೊರಗೆ ಶಾಮಿಯಾನ ಹಾಕಿಕೊಂಡು ಮತದಾರರಿಗೆ ಚೀಟಿಗಳನ್ನು ವಿತರಿಸಿದರು. ಸ್ಥಳಕ್ಕೆ ಬಂದ ಮತದಾರರಲ್ಲಿ ನಮ್ಮ ಪಕ್ಷಕ್ಕೆ ಅಥವಾ ನಮ್ಮ ಅಭ್ಯರ್ಥಿಗೆ ಮತ ಕೊಡಿ ಎಂದು ಕೋರಿದರು. ಪಕ್ಷೇತರ ಅಭ್ಯರ್ಥಿ ಡಾ.ಕೆ.ಎಂ.ಸುರೇಶ್ ಬೆಂಬಲಿಗರ ಜತೆ ವಿವಿಧ ಮತಕೇಂದ್ರಗಳಿಗೆ ಭೇಟಿ ನೀಡಿದರು.