ತಿಪಟೂರು: ನಗರದ ಸತ್ಯಗಣಪತಿ ಆಸ್ಥಾನ ಮಂಟಪದಲ್ಲಿ ಬಯಲುಸೀಮೆ ಸಾಮಾಜಿಕ, ಸಾಂಸ್ಕೃತಿಕ ಸಂಘದಿಂದ ನ. 20ರಂದು ಸಂಜೆ 6ಗಂಟೆಗೆ 65ನೇ ಕನ್ನಡ ರಾಜ್ಯೋತ್ಸವ, ಮುಕ್ತಕಗಳ ವಾಚನ ಮತ್ತು ಭಾವಗೀತೆ ಗಾಯನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಸಾಹಿತಿ ನಾರಾಯಣ ಭಾಗ್ವತ್ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.