<p><strong>ಗುಬ್ಬಿ: </strong>ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆದು 26 ತಿಂಗಳು ಕಳೆದರೂ ಮೀಸಲಾತಿ ಕುರಿತ ವಿವಾದ ನ್ಯಾಯಾಲಯದಲ್ಲಿ ಇದ್ದುದ್ದರಿಂದ ಯಾರೊಬ್ಬರೂ ಅಧಿಕಾರದ ಗದ್ದುಗೆ ಹಿಡಿಯಲು ಸಾಧ್ಯವಾಗಿರಲಿಲ್ಲ.</p>.<p>ತಾಲ್ಲೂಕಿನಲ್ಲಿ ಪಟ್ಟಣ ಪಂಚಾಯಿತಿ ಅಸ್ತಿತ್ವಕ್ಕೆ ಬಂದಂದಿನಿಂದಲೂ ಅಧ್ಯಕ್ಷ ಸ್ಥಾನದ ಮೀಸಲಾತಿ ಪರಿಶಿಷ್ಟ ಪಂಗಡಕ್ಕೆ ನಿಗದಿಯಾಗಿತ್ತು. ಇದನ್ನು ಪ್ರಶ್ನಿಸಿ 19ನೇ ವಾರ್ಡ್ ಸದಸ್ಯ ಅಣ್ಣಪ್ಪಸ್ವಾಮಿ ನ್ಯಾಯಾಲಯದ ಮೆಟ್ಟಿಲೇರಿದ್ದರು.</p>.<p>ಇತ್ತೀಚೆಗೆ ನ್ಯಾಯಾಲಯದ ತೀರ್ಪು ಬಂದಿದ್ದು, ಅಧ್ಯಕ್ಷ ಸ್ಥಾನ ಪರಿಶಿಷ್ಟ ಪಂಗಡಕ್ಕೆ ಹಾಗೂ ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆಗೆ ನಿಗದಿಯಾಗಿದೆ.</p>.<p>ಪಟ್ಟಣ ಪಂಚಾಯಿತಿಯ 19 ಸ್ಥಾನಗಳಲ್ಲಿ 11 ಸ್ಥಾನಗಳಲ್ಲಿ ಜಯಗಳಿಸಿದ್ದ ಜೆಡಿಎಸ್ ಅಧಿಕಾರ ಹಿಡಿಯಲು ಸಿದ್ಧವಾಗಿತ್ತು. ಆದರೆ ಮೀಸಲಾತಿ ಪಟ್ಟಿಯಿಂದ ನಿರಾಸೆಯಾಗಿದೆ. 6 ಸ್ಥಾನಗಳಲ್ಲಿ ಗೆದ್ದಿರುವ ಬಿಜೆಪಿಯಲ್ಲಿ ಮಾತ್ರ ಪರಿಶಿಷ್ಟ ಪಂಗಡದ ಅಭ್ಯರ್ಥಿ ಇದ್ದಾರೆ. ಬಹುಮತವಿದ್ದರೂ ಜೆಡಿಎಸ್ನಲ್ಲಿ ಪರಿಶಿಷ್ಟ ಪಂಗಡ ಅಭ್ಯರ್ಥಿ ಇಲ್ಲದ ಕಾರಣ ಅನಿವಾರ್ಯವಾಗಿ ಬಿಜೆಪಿಗೆ ಅಧ್ಯಕ್ಷ ಸ್ಥಾನ ಬಿಟ್ಟುಕೊಡಬೇಕಾಗಿದೆ. ಹಾಗಾಗಿ 19ನೇ ವಾರ್ಡ್ನ ಬಿಜೆಪಿ ಸದಸ್ಯ ಅಣ್ಣಪ್ಪ ಸ್ವಾಮಿ ಅಧ್ಯಕ್ಷರಾಗುವುದು ಖಚಿತವಾಗಿದೆ .</p>.<p>ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆಗೆ ಮೀಸಲಾಗಿದೆ. ಜೆಡಿಎಸ್ ಸದಸ್ಯರಾದಸವಿತ, ಮಂಗಳಮ್ಮ, ಕೆ. ಮಾಹಾಲಕ್ಷಿ ಸಾಮಾನ್ಯ ವರ್ಗದವರಾಗಿದ್ದು, ಉಪಾಧ್ಯಕ್ಷ ಸ್ಥಾನ ಅನಾಯಾಸವಾಗಿ ಜೆಡಿಎಸ್ಗೆ ದೊರಕಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುಬ್ಬಿ: </strong>ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆದು 26 ತಿಂಗಳು ಕಳೆದರೂ ಮೀಸಲಾತಿ ಕುರಿತ ವಿವಾದ ನ್ಯಾಯಾಲಯದಲ್ಲಿ ಇದ್ದುದ್ದರಿಂದ ಯಾರೊಬ್ಬರೂ ಅಧಿಕಾರದ ಗದ್ದುಗೆ ಹಿಡಿಯಲು ಸಾಧ್ಯವಾಗಿರಲಿಲ್ಲ.</p>.<p>ತಾಲ್ಲೂಕಿನಲ್ಲಿ ಪಟ್ಟಣ ಪಂಚಾಯಿತಿ ಅಸ್ತಿತ್ವಕ್ಕೆ ಬಂದಂದಿನಿಂದಲೂ ಅಧ್ಯಕ್ಷ ಸ್ಥಾನದ ಮೀಸಲಾತಿ ಪರಿಶಿಷ್ಟ ಪಂಗಡಕ್ಕೆ ನಿಗದಿಯಾಗಿತ್ತು. ಇದನ್ನು ಪ್ರಶ್ನಿಸಿ 19ನೇ ವಾರ್ಡ್ ಸದಸ್ಯ ಅಣ್ಣಪ್ಪಸ್ವಾಮಿ ನ್ಯಾಯಾಲಯದ ಮೆಟ್ಟಿಲೇರಿದ್ದರು.</p>.<p>ಇತ್ತೀಚೆಗೆ ನ್ಯಾಯಾಲಯದ ತೀರ್ಪು ಬಂದಿದ್ದು, ಅಧ್ಯಕ್ಷ ಸ್ಥಾನ ಪರಿಶಿಷ್ಟ ಪಂಗಡಕ್ಕೆ ಹಾಗೂ ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆಗೆ ನಿಗದಿಯಾಗಿದೆ.</p>.<p>ಪಟ್ಟಣ ಪಂಚಾಯಿತಿಯ 19 ಸ್ಥಾನಗಳಲ್ಲಿ 11 ಸ್ಥಾನಗಳಲ್ಲಿ ಜಯಗಳಿಸಿದ್ದ ಜೆಡಿಎಸ್ ಅಧಿಕಾರ ಹಿಡಿಯಲು ಸಿದ್ಧವಾಗಿತ್ತು. ಆದರೆ ಮೀಸಲಾತಿ ಪಟ್ಟಿಯಿಂದ ನಿರಾಸೆಯಾಗಿದೆ. 6 ಸ್ಥಾನಗಳಲ್ಲಿ ಗೆದ್ದಿರುವ ಬಿಜೆಪಿಯಲ್ಲಿ ಮಾತ್ರ ಪರಿಶಿಷ್ಟ ಪಂಗಡದ ಅಭ್ಯರ್ಥಿ ಇದ್ದಾರೆ. ಬಹುಮತವಿದ್ದರೂ ಜೆಡಿಎಸ್ನಲ್ಲಿ ಪರಿಶಿಷ್ಟ ಪಂಗಡ ಅಭ್ಯರ್ಥಿ ಇಲ್ಲದ ಕಾರಣ ಅನಿವಾರ್ಯವಾಗಿ ಬಿಜೆಪಿಗೆ ಅಧ್ಯಕ್ಷ ಸ್ಥಾನ ಬಿಟ್ಟುಕೊಡಬೇಕಾಗಿದೆ. ಹಾಗಾಗಿ 19ನೇ ವಾರ್ಡ್ನ ಬಿಜೆಪಿ ಸದಸ್ಯ ಅಣ್ಣಪ್ಪ ಸ್ವಾಮಿ ಅಧ್ಯಕ್ಷರಾಗುವುದು ಖಚಿತವಾಗಿದೆ .</p>.<p>ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆಗೆ ಮೀಸಲಾಗಿದೆ. ಜೆಡಿಎಸ್ ಸದಸ್ಯರಾದಸವಿತ, ಮಂಗಳಮ್ಮ, ಕೆ. ಮಾಹಾಲಕ್ಷಿ ಸಾಮಾನ್ಯ ವರ್ಗದವರಾಗಿದ್ದು, ಉಪಾಧ್ಯಕ್ಷ ಸ್ಥಾನ ಅನಾಯಾಸವಾಗಿ ಜೆಡಿಎಸ್ಗೆ ದೊರಕಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>