ದೇವಸ್ಥಾನಗಳ ಸರ್ಕಾರೀಕರಣ, ದೈವಸ್ಥಾನಗಳನ್ನು ಅಪವಿತ್ರಗೊಳಿಸುತ್ತಿರುವುದು, ಮೂರ್ತಿ ಭಂಜನ, ಅನಧಿಕೃತವೆಂದು ದೇವಸ್ಥಾನ ಧ್ವಂಸಗೊಳಿಸುವುದು, ದೇಗುಲ ಜಮೀನು ಲೂಟಿ, ದೇವನಿಧಿ ಅಪವ್ಯಯ ಸೇರಿದಂತೆ ಪ್ರಮುಖ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಯಲಿದೆ. ದೇವಸ್ಥಾನಗಳಲ್ಲಿ ದೇವತಾತತ್ವ ಕಾಪಾಡುವುದು, ದೇವಸ್ಥಾನಗಳಲ್ಲಿ ಧರ್ಮಪ್ರಸಾರ ಮಾಡುವುದು, ಭಕ್ತಾದಿಗಳಿಗೆ ಮೂಲ ಸೌಕರ್ಯ ಕಲ್ಪಿಸಬೇಕು, ದೇವಸ್ಥಾನಗಳ ಸಂಘಟನೆ, ವಸ್ತ್ರಸಂಹಿತೆ ಅಳವಡಿಸುವಂತೆ ಸಮಾವೇಶದಲ್ಲಿ ಒತ್ತಾಯಿಸಲಾಗುವುದು ಎಂದು ಅವರು ವಿವರಿಸಿದರು.