ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾದಿಗ ದಂಡೋರ ರಾಜ್ಯ ಕಾರ್ಯದರ್ಶಿ ಬೇವಿನಹಳ್ಳಿ ಚನ್ನಬಸವಯ್ಯ, ‘ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಈ ಬಗ್ಗೆ ಹೇಳಿಕೆ ನೀಡಿದ್ದಾರೆ. ಖರ್ಚಾಗದೆ ಉಳಿದಿರುವ ಹಣವನ್ನು ಹರಿಜನ, ಗಿರಿಜನ ಕಲ್ಯಾಣಕ್ಕೆ ಸಂಬಂಧಿಸಿದ ಇಲಾಖೆ ಅಥವಾ ಅಭಿವೃದ್ಧಿ ನಿಗಮಗಳಿಗೆ ವರ್ಗಾಯಿಸಬೇಕಿತ್ತು. ಕಾರಜೋಳ ಅವರಿಗೆ ಪರಿಶಿಷ್ಟ ಸಮುದಾಯಗಳ ಬಗ್ಗೆ ಕಾಳಜಿ ಇದ್ದಂತೆ ಕಾಣುತ್ತಿಲ್ಲ’ ಎಂದು ಟೀಕಿಸಿದರು.