ಜಯಮ್ಮ ಅರಚಿದ್ದರಿಂದ ನೆರೆಹೊರೆಯವರು ಹೋಗಿ ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಅರೋಪಿಯನ್ನು ಗ್ರಾಮಸ್ಥರು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಡಿವೈಎಸ್ಪಿ ಜಗದೀಶ್, ಸಿಪಿಐ ಗುರುಪ್ರಸಾದ್ ಮತ್ತು ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಅರೋಪಿ ರಾಜ ಈ ಹಿಂದೆ ಗ್ರಾಮದ ಯಶವಂತ್ ಎಂಬ ಬಾಲಕನೊಬ್ಬನನ್ನು ಕೊಲೆ ಮಾಡಿದ್ದು, ತಾಯಿಯೇ ಮಾನಸಿಕ ಅಸ್ವಸ್ಥತೆಯ ಆಧಾರದ ಮೇಲೆ ಬಿಡಿಸಿಕೊಂಡು ಬಂದಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.