<p><strong>ಕುಣಿಗಲ್</strong>: ಮಾನಸಿಕ ಅಸ್ವಸ್ಥ ಮಗನಿಂದಲೆ ತಾಯಿ ಕೊಲೆಯಾಗಿರುವ ಘಟನೆ ಹುಲಿಯೂರುದುರ್ಗ ಪೊಲೀಸ್ ಠಾಣಾ ವ್ಯಾಪ್ತಿಯ ಸಂತೆಮಾವತ್ತೂರು ಹಂಗರಹಳ್ಳಿಯಲ್ಲಿ ಶುಕ್ರವಾರ ರಾತ್ರಿ ನಡೆದಿದೆ.</p>.<p>ಕೊಲೆಯಾದವರನ್ನು ಜಯಮ್ಮ (55) ಎಂದು ಗುರುತಿಸಲಾಗಿದೆ. ಈಕೆಯ ಮಗ ರಾಜ ಕಳೆದ ಕೆಲದಿನಗಳಿಂದಲೂ ಕ್ಷುಲಕ ಕಾರಣಕ್ಕೆ ತಾಯಿಯೊಂದಿಗೆ ಜಗಳವಾಡುತ್ತಿದ್ದು, ಶುಕ್ರವಾರ ರಾತ್ರಿ ಜಯಮ್ಮ ಮಲಗಿದ್ದ ಸಮಯದಲ್ಲಿ ಮನೆಯಲ್ಲಿ ಮಸಾಲೆ ಅರಿಯಲು ಬಳಸುವ ಗುಂಡುಕಲ್ಲನ್ನು ಎತ್ತಿ ತಲೆಗೆ ಹೊಡೆದು ಕೊಲೆ ಮಾಡಿದ್ದಾನೆ.</p>.<p>ಜಯಮ್ಮ ಅರಚಿದ್ದರಿಂದ ನೆರೆಹೊರೆಯವರು ಹೋಗಿ ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಅರೋಪಿಯನ್ನು ಗ್ರಾಮಸ್ಥರು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಡಿವೈಎಸ್ಪಿ ಜಗದೀಶ್, ಸಿಪಿಐ ಗುರುಪ್ರಸಾದ್ ಮತ್ತು ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಅರೋಪಿ ರಾಜ ಈ ಹಿಂದೆ ಗ್ರಾಮದ ಯಶವಂತ್ ಎಂಬ ಬಾಲಕನೊಬ್ಬನನ್ನು ಕೊಲೆ ಮಾಡಿದ್ದು, ತಾಯಿಯೇ ಮಾನಸಿಕ ಅಸ್ವಸ್ಥತೆಯ ಆಧಾರದ ಮೇಲೆ ಬಿಡಿಸಿಕೊಂಡು ಬಂದಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕುಣಿಗಲ್</strong>: ಮಾನಸಿಕ ಅಸ್ವಸ್ಥ ಮಗನಿಂದಲೆ ತಾಯಿ ಕೊಲೆಯಾಗಿರುವ ಘಟನೆ ಹುಲಿಯೂರುದುರ್ಗ ಪೊಲೀಸ್ ಠಾಣಾ ವ್ಯಾಪ್ತಿಯ ಸಂತೆಮಾವತ್ತೂರು ಹಂಗರಹಳ್ಳಿಯಲ್ಲಿ ಶುಕ್ರವಾರ ರಾತ್ರಿ ನಡೆದಿದೆ.</p>.<p>ಕೊಲೆಯಾದವರನ್ನು ಜಯಮ್ಮ (55) ಎಂದು ಗುರುತಿಸಲಾಗಿದೆ. ಈಕೆಯ ಮಗ ರಾಜ ಕಳೆದ ಕೆಲದಿನಗಳಿಂದಲೂ ಕ್ಷುಲಕ ಕಾರಣಕ್ಕೆ ತಾಯಿಯೊಂದಿಗೆ ಜಗಳವಾಡುತ್ತಿದ್ದು, ಶುಕ್ರವಾರ ರಾತ್ರಿ ಜಯಮ್ಮ ಮಲಗಿದ್ದ ಸಮಯದಲ್ಲಿ ಮನೆಯಲ್ಲಿ ಮಸಾಲೆ ಅರಿಯಲು ಬಳಸುವ ಗುಂಡುಕಲ್ಲನ್ನು ಎತ್ತಿ ತಲೆಗೆ ಹೊಡೆದು ಕೊಲೆ ಮಾಡಿದ್ದಾನೆ.</p>.<p>ಜಯಮ್ಮ ಅರಚಿದ್ದರಿಂದ ನೆರೆಹೊರೆಯವರು ಹೋಗಿ ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಅರೋಪಿಯನ್ನು ಗ್ರಾಮಸ್ಥರು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಡಿವೈಎಸ್ಪಿ ಜಗದೀಶ್, ಸಿಪಿಐ ಗುರುಪ್ರಸಾದ್ ಮತ್ತು ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಅರೋಪಿ ರಾಜ ಈ ಹಿಂದೆ ಗ್ರಾಮದ ಯಶವಂತ್ ಎಂಬ ಬಾಲಕನೊಬ್ಬನನ್ನು ಕೊಲೆ ಮಾಡಿದ್ದು, ತಾಯಿಯೇ ಮಾನಸಿಕ ಅಸ್ವಸ್ಥತೆಯ ಆಧಾರದ ಮೇಲೆ ಬಿಡಿಸಿಕೊಂಡು ಬಂದಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>