<p><strong>ತುಮಕೂರು:</strong> ಮುಖ್ಯಮಂತ್ರಿ ಅಮೃತ ನಗರೋತ್ಥಾನ ಯೋಜನೆಯಡಿ ಜಿಲ್ಲೆಗೆ ₹102 ಕೋಟಿ ಅನುದಾನ ಮಂಜೂರಾಗಿದೆ. ಇದರಲ್ಲಿ ₹40 ಕೋಟಿ ವೆಚ್ಚದ ಕಾಮಗಾರಿ ಬಾಕಿ ಉಳಿದಿದ್ದು, ಒಂದು ತಿಂಗಳಲ್ಲಿ ಪೂರ್ಣಗೊಳಿಸುವಂತೆ ಗಡುವು ನೀಡಲಾಗಿದೆ ಎಂದು ಪೌರಾಡಳಿತ ಮತ್ತು ಹಜ್ ಸಚಿವ ರಹೀಂ ಖಾನ್ ಇಲ್ಲಿ ಬುಧವಾರ ಹೇಳಿದರು.</p>.<p>ನಗರದಲ್ಲಿ ಎರಡು ಸೇರಿದಂತೆ ರಾಜ್ಯದಲ್ಲಿ 180 ಇಂದಿರಾ ಕ್ಯಾಂಟೀನ್ ನಿರ್ಮಿಸಲಾಗುತ್ತಿದೆ. ಈಗಾಗಲೇ ಕೆಲವು ಉದ್ಘಾಟನೆಯಾಗಿವೆ. ಮುಂದಿನ 15 ದಿನದಲ್ಲಿ ಎಲ್ಲ ಕ್ಯಾಂಟೀನ್ ಶುರುವಾಗಲಿವೆ. ಜಿಲ್ಲೆಯಲ್ಲಿ ಶೇ 50ರಷ್ಟು ಆಸ್ತಿಗಳಿಗೆ ಇ ಮತ್ತು ಬಿ–ಖಾತಾ ವಿತರಿಸಲಾಗಿದೆ. 10 ಸಾವಿರ ಇ–ಖಾತಾ, 5,900 ಬಿ–ಖಾತಾ ವಿತರಿಸಲಾಗಿದೆ ಎಂದು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.</p>.<p>ಜಿಲ್ಲೆಯಲ್ಲಿ ಕುಡಿಯುವ ನೀರಿಗೆ ತೊಂದರೆ ಆಗದಂತೆ ನೋಡಿಕೊಳ್ಳಬೇಕು. ಶುದ್ಧ ನೀರು ಪೂರೈಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ. ಎಲ್ಲ ಅಧಿಕಾರಿಗಳು ಇದನ್ನು ಗಂಭೀರವಾಗಿ ಪರಿಗಣಿಸಿ ಆದ್ಯತೆ ನೀಡಬೇಕು. ಸ್ವಚ್ಛ, ಶುದ್ಧ ನೀರು ಸರಬರಾಜು ಮಾಡಲು ಕ್ರಮ ವಹಿಸುವಂತೆ ನಿರ್ದೇಶಿಸಲಾಗಿದೆ ಎಂದು ತಿಳಿಸಿದರು.</p>.<p>ಅಮಾನತಿನ ಎಚ್ಚರಿಕೆ: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬುಧವಾರ ನಗರ ಸ್ಥಳೀಯ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಸಚಿವರು, ‘ನಗರೋತ್ಥಾನ ಯೋಜನೆ ಅನುಷ್ಠಾನದಲ್ಲಿ ಹಿಂದೆ ಉಳಿದ ಅಧಿಕಾರಿಗಳ ಅಮಾನತಿಗೆ ಕ್ರಮಕೈಗೊಳ್ಳಲಾಗುವುದು’ ಎಂದು ಎಚ್ಚರಿಸಿದರು.</p>.<p>ಯೋಜನೆ ಪ್ರಾರಂಭವಾಗಿ 3 ವರ್ಷ ಕಳೆದರೂ ಕುಣಿಗಲ್ ಪುರಸಭೆಯಲ್ಲಿ ಕೇವಲ ಶೇ 14ರಷ್ಟು ಮಾತ್ರ ಭೌತಿಕ ಸಾಧನೆಯಾಗಿದೆ. 27 ಕಾಮಗಾರಿಗಳ ಪೈಕಿ ಕೇವಲ 4 ಮಾತ್ರ ಪೂರ್ಣಗೊಂಡಿವೆ. 6 ಕಾಮಗಾರಿ ಇನ್ನೂ ಟೆಂಡರ್ ಹಂತದಲ್ಲಿವೆ. ಪ್ರಗತಿಯಲ್ಲಿ ಹಿನ್ನಡೆಯಾದರೆ ಸಂಬಂಧಪಟ್ಟ ಅಧಿಕಾರಿಗಳನ್ನು ಮನೆಗೆ ಕಳುಹಿಸಲಾಗುವುದು ಎಂದು ಪುರಸಭೆ ಮುಖ್ಯಾಧಿಕಾರಿ ಮಂಜುಳಾ ಅವರನ್ನು ತರಾಟೆಗೆ ತೆಗೆದುಕೊಂಡರು.</p>.<p>ಯೋಜನೆಯಡಿ ಜಿಲ್ಲೆಗೆ ಇದುವರೆಗೆ ₹44.71 ಕೋಟಿ ಬಿಡುಗಡೆಯಾಗಿದೆ. ಈಗಾಗಲೇ ಈ ಯೋಜನೆ ಪೂರ್ಣಗೊಳ್ಳುವ ಹಂತಕ್ಕೆ ತಲುಪಬೇಕಾಗಿತ್ತು. ಅಧಿಕಾರಿಗಳ ಇಚ್ಛಾಶಕ್ತಿ ಕೊರತೆಯಿಂದ ನಿರೀಕ್ಷಿತ ಮಟ್ಟದಲ್ಲಿ ಪ್ರಗತಿ ಸಾಧಿಸಲು ಆಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.</p>.<p>2026 ಮಾರ್ಚ್ ವೇಳೆಗೆ ಯೋಜನೆ ಪೂರ್ಣಗೊಳಿಸಬೇಕಿದ್ದು, ಜನವರಿ ವೇಳೆಗೆ ಎಲ್ಲ ಸಿವಿಲ್ ಕಾಮಗಾರಿ ಮುಗಿಸಬೇಕು. ನಿಗದಿತ ಅವಧಿಯಲ್ಲಿ ಟೆಂಡರ್ ಅಂತಿಮಗೊಳಿಸಬೇಕು ಎಂದು ಸೂಚಿಸಿದರು.</p>.<p>ಜಿಲ್ಲಾಧಿಕಾರಿ ಶುಭ ಕಲ್ಯಾಣ್, ‘ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ನೀರಿಗೆ ಸಮಸ್ಯೆ ಇಲ್ಲ. ಪಾವಗಡ ಪುರಸಭೆಯ 2 ವಾರ್ಡ್ಗಳಲ್ಲಿ ಮಾತ್ರ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ’ ಎಂದರು.</p>.<p><strong>ಕ್ಯಾಂಟೀನ್ಗಳಲ್ಲಿ ನಕಲಿ ಬಿಲ್</strong></p><p> ಇಂದಿರಾ ಕ್ಯಾಂಟೀನ್ಗಳಲ್ಲಿ ಗುತ್ತಿಗೆದಾರರು ಊಟ ಮಾಡುವವರ ಲೆಕ್ಕವನ್ನು ತಪ್ಪಾಗಿ ನೀಡಿ ನಕಲಿ ಬಿಲ್ ಸೃಷ್ಟಿ ಮಾಡುತ್ತಿದ್ದಾರೆ. ಇದನ್ನು ತಡೆಯಲು ಸಿ.ಸಿ ಟಿ.ವಿ ಕ್ಯಾಮೆರಾ ಅಳವಡಿಸಲಾಗಿದೆ. ಇನ್ನು ಮುಂದೆ ಇದಕ್ಕೆ ಕಡಿವಾಣ ಬೀಳಲಿದೆ. ರಹೀಂ ಖಾನ್ ಪೌರಾಡಳಿತ ಸಚಿವ </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು:</strong> ಮುಖ್ಯಮಂತ್ರಿ ಅಮೃತ ನಗರೋತ್ಥಾನ ಯೋಜನೆಯಡಿ ಜಿಲ್ಲೆಗೆ ₹102 ಕೋಟಿ ಅನುದಾನ ಮಂಜೂರಾಗಿದೆ. ಇದರಲ್ಲಿ ₹40 ಕೋಟಿ ವೆಚ್ಚದ ಕಾಮಗಾರಿ ಬಾಕಿ ಉಳಿದಿದ್ದು, ಒಂದು ತಿಂಗಳಲ್ಲಿ ಪೂರ್ಣಗೊಳಿಸುವಂತೆ ಗಡುವು ನೀಡಲಾಗಿದೆ ಎಂದು ಪೌರಾಡಳಿತ ಮತ್ತು ಹಜ್ ಸಚಿವ ರಹೀಂ ಖಾನ್ ಇಲ್ಲಿ ಬುಧವಾರ ಹೇಳಿದರು.</p>.<p>ನಗರದಲ್ಲಿ ಎರಡು ಸೇರಿದಂತೆ ರಾಜ್ಯದಲ್ಲಿ 180 ಇಂದಿರಾ ಕ್ಯಾಂಟೀನ್ ನಿರ್ಮಿಸಲಾಗುತ್ತಿದೆ. ಈಗಾಗಲೇ ಕೆಲವು ಉದ್ಘಾಟನೆಯಾಗಿವೆ. ಮುಂದಿನ 15 ದಿನದಲ್ಲಿ ಎಲ್ಲ ಕ್ಯಾಂಟೀನ್ ಶುರುವಾಗಲಿವೆ. ಜಿಲ್ಲೆಯಲ್ಲಿ ಶೇ 50ರಷ್ಟು ಆಸ್ತಿಗಳಿಗೆ ಇ ಮತ್ತು ಬಿ–ಖಾತಾ ವಿತರಿಸಲಾಗಿದೆ. 10 ಸಾವಿರ ಇ–ಖಾತಾ, 5,900 ಬಿ–ಖಾತಾ ವಿತರಿಸಲಾಗಿದೆ ಎಂದು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.</p>.<p>ಜಿಲ್ಲೆಯಲ್ಲಿ ಕುಡಿಯುವ ನೀರಿಗೆ ತೊಂದರೆ ಆಗದಂತೆ ನೋಡಿಕೊಳ್ಳಬೇಕು. ಶುದ್ಧ ನೀರು ಪೂರೈಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ. ಎಲ್ಲ ಅಧಿಕಾರಿಗಳು ಇದನ್ನು ಗಂಭೀರವಾಗಿ ಪರಿಗಣಿಸಿ ಆದ್ಯತೆ ನೀಡಬೇಕು. ಸ್ವಚ್ಛ, ಶುದ್ಧ ನೀರು ಸರಬರಾಜು ಮಾಡಲು ಕ್ರಮ ವಹಿಸುವಂತೆ ನಿರ್ದೇಶಿಸಲಾಗಿದೆ ಎಂದು ತಿಳಿಸಿದರು.</p>.<p>ಅಮಾನತಿನ ಎಚ್ಚರಿಕೆ: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬುಧವಾರ ನಗರ ಸ್ಥಳೀಯ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಸಚಿವರು, ‘ನಗರೋತ್ಥಾನ ಯೋಜನೆ ಅನುಷ್ಠಾನದಲ್ಲಿ ಹಿಂದೆ ಉಳಿದ ಅಧಿಕಾರಿಗಳ ಅಮಾನತಿಗೆ ಕ್ರಮಕೈಗೊಳ್ಳಲಾಗುವುದು’ ಎಂದು ಎಚ್ಚರಿಸಿದರು.</p>.<p>ಯೋಜನೆ ಪ್ರಾರಂಭವಾಗಿ 3 ವರ್ಷ ಕಳೆದರೂ ಕುಣಿಗಲ್ ಪುರಸಭೆಯಲ್ಲಿ ಕೇವಲ ಶೇ 14ರಷ್ಟು ಮಾತ್ರ ಭೌತಿಕ ಸಾಧನೆಯಾಗಿದೆ. 27 ಕಾಮಗಾರಿಗಳ ಪೈಕಿ ಕೇವಲ 4 ಮಾತ್ರ ಪೂರ್ಣಗೊಂಡಿವೆ. 6 ಕಾಮಗಾರಿ ಇನ್ನೂ ಟೆಂಡರ್ ಹಂತದಲ್ಲಿವೆ. ಪ್ರಗತಿಯಲ್ಲಿ ಹಿನ್ನಡೆಯಾದರೆ ಸಂಬಂಧಪಟ್ಟ ಅಧಿಕಾರಿಗಳನ್ನು ಮನೆಗೆ ಕಳುಹಿಸಲಾಗುವುದು ಎಂದು ಪುರಸಭೆ ಮುಖ್ಯಾಧಿಕಾರಿ ಮಂಜುಳಾ ಅವರನ್ನು ತರಾಟೆಗೆ ತೆಗೆದುಕೊಂಡರು.</p>.<p>ಯೋಜನೆಯಡಿ ಜಿಲ್ಲೆಗೆ ಇದುವರೆಗೆ ₹44.71 ಕೋಟಿ ಬಿಡುಗಡೆಯಾಗಿದೆ. ಈಗಾಗಲೇ ಈ ಯೋಜನೆ ಪೂರ್ಣಗೊಳ್ಳುವ ಹಂತಕ್ಕೆ ತಲುಪಬೇಕಾಗಿತ್ತು. ಅಧಿಕಾರಿಗಳ ಇಚ್ಛಾಶಕ್ತಿ ಕೊರತೆಯಿಂದ ನಿರೀಕ್ಷಿತ ಮಟ್ಟದಲ್ಲಿ ಪ್ರಗತಿ ಸಾಧಿಸಲು ಆಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.</p>.<p>2026 ಮಾರ್ಚ್ ವೇಳೆಗೆ ಯೋಜನೆ ಪೂರ್ಣಗೊಳಿಸಬೇಕಿದ್ದು, ಜನವರಿ ವೇಳೆಗೆ ಎಲ್ಲ ಸಿವಿಲ್ ಕಾಮಗಾರಿ ಮುಗಿಸಬೇಕು. ನಿಗದಿತ ಅವಧಿಯಲ್ಲಿ ಟೆಂಡರ್ ಅಂತಿಮಗೊಳಿಸಬೇಕು ಎಂದು ಸೂಚಿಸಿದರು.</p>.<p>ಜಿಲ್ಲಾಧಿಕಾರಿ ಶುಭ ಕಲ್ಯಾಣ್, ‘ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ನೀರಿಗೆ ಸಮಸ್ಯೆ ಇಲ್ಲ. ಪಾವಗಡ ಪುರಸಭೆಯ 2 ವಾರ್ಡ್ಗಳಲ್ಲಿ ಮಾತ್ರ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ’ ಎಂದರು.</p>.<p><strong>ಕ್ಯಾಂಟೀನ್ಗಳಲ್ಲಿ ನಕಲಿ ಬಿಲ್</strong></p><p> ಇಂದಿರಾ ಕ್ಯಾಂಟೀನ್ಗಳಲ್ಲಿ ಗುತ್ತಿಗೆದಾರರು ಊಟ ಮಾಡುವವರ ಲೆಕ್ಕವನ್ನು ತಪ್ಪಾಗಿ ನೀಡಿ ನಕಲಿ ಬಿಲ್ ಸೃಷ್ಟಿ ಮಾಡುತ್ತಿದ್ದಾರೆ. ಇದನ್ನು ತಡೆಯಲು ಸಿ.ಸಿ ಟಿ.ವಿ ಕ್ಯಾಮೆರಾ ಅಳವಡಿಸಲಾಗಿದೆ. ಇನ್ನು ಮುಂದೆ ಇದಕ್ಕೆ ಕಡಿವಾಣ ಬೀಳಲಿದೆ. ರಹೀಂ ಖಾನ್ ಪೌರಾಡಳಿತ ಸಚಿವ </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>