<p><strong>ತುಮಕೂರು:</strong> ಸಮಸ್ತರು ರಂಗ ಸಂಸ್ಥೆಯಿಂದ ನಗರದಲ್ಲಿ ಶನಿವಾರ ಆಯೋಜಿಸಿದ್ದ ‘ಸಂಗೊಳ್ಳಿ ರಾಯಣ್ಣ’ ಐತಿಹಾಸಿಕ ನಾಟಕ ಯಶಸ್ವಿಯಾಗಿ ಮೂಡಿ ಬಂತು.</p>.<p>ಬಸವೇಗೌಡ ನಿರ್ದೇಶನದಲ್ಲಿ ಕಲಾವಿದರು ತಮ್ಮ ಅಚ್ಚುಕಟ್ಟಾದ ಅಭಿನಯದ ಮೂಲಕ ವೀಕ್ಷಕರ ಗಮನ ಸೆಳೆದರು. ರಾಹುಲ್, ದರ್ಶನ್ ಇತರರು ಉತ್ತಮವಾಗಿ ಅಭಿನಯಿಸಿದರು. ಸಂಗೊಳ್ಳಿ ರಾಯಣ್ಣನ ಜೀವನ, ದೇಶಭಕ್ತಿ, ತ್ಯಾಗ-ಬಲಿದಾನಗಳನ್ನು ನಾಟಕದ ಮೂಲಕ ಕಟ್ಟಿ ಕೊಡಲಾಯಿತು.</p>.<p>ರಂಗ ನಿರ್ದೇಶಕ ಮೆಳೇಹಳ್ಳಿ ದೇವರಾಜು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಪ್ರಸ್ತುತ ಎಲ್ಲವೂ ಸ್ವಕೇಂದ್ರಿತಗೊಂಡು ನಾನು, ನನ್ನದು ಎಂಬ ಭಾವ ಅತಿಯಾಗಿದೆ. ಮನಸ್ಸು-ಮನಸ್ಸಿನ ಮಧ್ಯೆ ಕಂದಕ ಸೃಷ್ಟಿಯಾಗುತ್ತಿದೆ. ಸಾಂಸ್ಕೃತಿಕ ಮನಸ್ಥಿತಿಯಿಂದ ದೂರವಾಗುತ್ತಿರುವುದೇ ಇದಕ್ಕೆ ಮುಖ್ಯ ಕಾರಣ ಎಂದು ಅಭಿಪ್ರಾಯಪಟ್ಟರು.</p>.<p>ಉಪನ್ಯಾಸಕ ನಾಗರಾಜರಾವ್, ‘ಮಕ್ಕಳನ್ನು ರಂಗಭೂಮಿಯ ಕಡೆಗೆ ಹೇಗೆ ತೊಡಗಿಸಬೇಕು. ಅದರ ಪ್ರಯೋಜನೆ ಏನು? ಮುಂದಿನ ದಿನಮಾನಗಳಲ್ಲಿ ಯಾವ ರೀತಿ ಕೆಲಸ ಮಾಡಬಹುದು’ ಎಂಬುದರ ಕುರಿತು ತಿಳಿಸಿದರು.</p>.<p>ನವೋದಯ ಐಎಎಸ್ ಅಕಾಡೆಮಿಯ ನಿರ್ದೇಶಕ ಉದಯ್ ಸಾಗರ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು:</strong> ಸಮಸ್ತರು ರಂಗ ಸಂಸ್ಥೆಯಿಂದ ನಗರದಲ್ಲಿ ಶನಿವಾರ ಆಯೋಜಿಸಿದ್ದ ‘ಸಂಗೊಳ್ಳಿ ರಾಯಣ್ಣ’ ಐತಿಹಾಸಿಕ ನಾಟಕ ಯಶಸ್ವಿಯಾಗಿ ಮೂಡಿ ಬಂತು.</p>.<p>ಬಸವೇಗೌಡ ನಿರ್ದೇಶನದಲ್ಲಿ ಕಲಾವಿದರು ತಮ್ಮ ಅಚ್ಚುಕಟ್ಟಾದ ಅಭಿನಯದ ಮೂಲಕ ವೀಕ್ಷಕರ ಗಮನ ಸೆಳೆದರು. ರಾಹುಲ್, ದರ್ಶನ್ ಇತರರು ಉತ್ತಮವಾಗಿ ಅಭಿನಯಿಸಿದರು. ಸಂಗೊಳ್ಳಿ ರಾಯಣ್ಣನ ಜೀವನ, ದೇಶಭಕ್ತಿ, ತ್ಯಾಗ-ಬಲಿದಾನಗಳನ್ನು ನಾಟಕದ ಮೂಲಕ ಕಟ್ಟಿ ಕೊಡಲಾಯಿತು.</p>.<p>ರಂಗ ನಿರ್ದೇಶಕ ಮೆಳೇಹಳ್ಳಿ ದೇವರಾಜು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಪ್ರಸ್ತುತ ಎಲ್ಲವೂ ಸ್ವಕೇಂದ್ರಿತಗೊಂಡು ನಾನು, ನನ್ನದು ಎಂಬ ಭಾವ ಅತಿಯಾಗಿದೆ. ಮನಸ್ಸು-ಮನಸ್ಸಿನ ಮಧ್ಯೆ ಕಂದಕ ಸೃಷ್ಟಿಯಾಗುತ್ತಿದೆ. ಸಾಂಸ್ಕೃತಿಕ ಮನಸ್ಥಿತಿಯಿಂದ ದೂರವಾಗುತ್ತಿರುವುದೇ ಇದಕ್ಕೆ ಮುಖ್ಯ ಕಾರಣ ಎಂದು ಅಭಿಪ್ರಾಯಪಟ್ಟರು.</p>.<p>ಉಪನ್ಯಾಸಕ ನಾಗರಾಜರಾವ್, ‘ಮಕ್ಕಳನ್ನು ರಂಗಭೂಮಿಯ ಕಡೆಗೆ ಹೇಗೆ ತೊಡಗಿಸಬೇಕು. ಅದರ ಪ್ರಯೋಜನೆ ಏನು? ಮುಂದಿನ ದಿನಮಾನಗಳಲ್ಲಿ ಯಾವ ರೀತಿ ಕೆಲಸ ಮಾಡಬಹುದು’ ಎಂಬುದರ ಕುರಿತು ತಿಳಿಸಿದರು.</p>.<p>ನವೋದಯ ಐಎಎಸ್ ಅಕಾಡೆಮಿಯ ನಿರ್ದೇಶಕ ಉದಯ್ ಸಾಗರ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>