<p><strong>ಶಿರಾ</strong>: ‘ನಗರದ ಸ್ವಚ್ಛತೆ ಕಾಪಾಡುವಲ್ಲಿ ಪ್ರಮುಖ ಪಾತ್ರವಹಿಸುವ ಪೌರ ಕಾರ್ಮಿಕರಿಗೆ ಗೌರವಯುತ ಬದುಕು ಕಟ್ಟಿಕೊಳ್ಳಲು ಅನುಕೂಲವಾಗುವಂತೆ ನಿವೇಶನ ನೀಡಲಾಗುವುದು’ ಎಂದು ಶಾಸಕ ಡಾ.ಸಿ.ಎಂ. ರಾಜೇಶ್ ಗೌಡ ಹೇಳಿದರು.</p>.<p>ನಗರದ ಅಂಬೇಡ್ಕರ್ ಭವನದಲ್ಲಿ ಗುರುವಾರ ಪೌರ ಕಾರ್ಮಿಕರ ದಿನಾಚರಣೆ ಹಾಗೂ ವಿವಿಧ ಸೌಲಭ್ಯ ವಿತರಣಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಪೌರ ಕಾರ್ಮಿಕರು ತ್ಯಾಗ ಮತ್ತು ಸೇವಾ ಮನೋಭಾವದಿಂದ ಸೇವೆ ಸಲ್ಲಿಸುತ್ತಿದ್ದಾರೆ. ಇವರ ಬದುಕು ಸಂಕಷ್ಟದಲ್ಲಿದೆ. ಬಹಳಷ್ಟು ಮಂದಿ ಇರಲು ಸೂರಿಲ್ಲದೆ ಸಂಕಷ್ಟಪಡುತ್ತಿದ್ದಾರೆ. ಇಂತಹವರಿಗೆ ಸೂರು ಕಲ್ಪಿಸುವುದು ಪ್ರತಿಯೊಬ್ಬರ ಕರ್ತವ್ಯ. ಈ ಹಿನ್ನೆಲೆಯಲ್ಲಿ ಸರ್ವೆ ನಂ. 112ರಲ್ಲಿರುವ 5 ಎಕರೆ 30 ಗುಂಟೆ ಜಾಗದಲ್ಲಿ ನಿವೇಶನ ನೀಡಲಾಗುವುದು. ಗುಡಿಸಲಿನಲ್ಲಿ ವಾಸ ಮಾಡುವವರಿಗೆ ಮನೆ ನಿರ್ಮಿಸಿ ಕೊಡಲಾಗುವುದು ಎಂದು ತಿಳಿಸಿದರು.</p>.<p>ನಿವೃತ್ತ ಪೌರ ಕಾರ್ಮಿಕರು ಹಾಗೂ ಉತ್ತಮವಾಗಿ ಸೇವೆ ಸಲ್ಲಿಸಿದ ಪೌರ ಕಾರ್ಮಿಕರನ್ನು ಸನ್ಮಾನಿಸಲಾಯಿತು.</p>.<p>ನಾರು ಅಭಿವೃದ್ಧಿ ನಿಗಮದ ಅಧ್ಯಕ್ಷ ಬಿ.ಕೆ. ಮಂಜುನಾಥ್, ತಹಶೀಲ್ದಾರ್ ಎಂ. ಮಮತಾ, ನಗರಸಭೆ ಪೌರಯುಕ್ತ ಶ್ರೀನಿವಾಸ್, ಎಇಇ ಸೇತುರಾಮ್ ಸಿಂಗ್, ಬಿಜೆಪಿ ನಗರ ಮೋರ್ಚಾ ಅಧ್ಯಕ್ಷ ವಿಜಯರಾಜು, ಡಿ.ಎಸ್- 4 ಅಧ್ಯಕ್ಷ ಟೈರ್ ರಂಗನಾಥ್, ಡಿಎಸ್ಎಸ್ ಸಂಚಾಲಕ ತಿಪ್ಪೇಸ್ವಾಮಿ, ನಗರಸಭೆ ಮಾಜಿ ಸದಸ್ಯರಾದ ಆರ್. ರಾಮು, ಸಂತೇಪೇಟೆ ನಟರಾಜು, ಸೊಪ್ಪಿನಹಟ್ಟಿ ನಟರಾಜು, ರಾಮಚಂದ್ರಗುಪ್ತ, ಕಂದಾಯ ನಿರೀಕ್ಷಕ ಪ್ರದೀಪ್ ಕುಮಾರ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿರಾ</strong>: ‘ನಗರದ ಸ್ವಚ್ಛತೆ ಕಾಪಾಡುವಲ್ಲಿ ಪ್ರಮುಖ ಪಾತ್ರವಹಿಸುವ ಪೌರ ಕಾರ್ಮಿಕರಿಗೆ ಗೌರವಯುತ ಬದುಕು ಕಟ್ಟಿಕೊಳ್ಳಲು ಅನುಕೂಲವಾಗುವಂತೆ ನಿವೇಶನ ನೀಡಲಾಗುವುದು’ ಎಂದು ಶಾಸಕ ಡಾ.ಸಿ.ಎಂ. ರಾಜೇಶ್ ಗೌಡ ಹೇಳಿದರು.</p>.<p>ನಗರದ ಅಂಬೇಡ್ಕರ್ ಭವನದಲ್ಲಿ ಗುರುವಾರ ಪೌರ ಕಾರ್ಮಿಕರ ದಿನಾಚರಣೆ ಹಾಗೂ ವಿವಿಧ ಸೌಲಭ್ಯ ವಿತರಣಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಪೌರ ಕಾರ್ಮಿಕರು ತ್ಯಾಗ ಮತ್ತು ಸೇವಾ ಮನೋಭಾವದಿಂದ ಸೇವೆ ಸಲ್ಲಿಸುತ್ತಿದ್ದಾರೆ. ಇವರ ಬದುಕು ಸಂಕಷ್ಟದಲ್ಲಿದೆ. ಬಹಳಷ್ಟು ಮಂದಿ ಇರಲು ಸೂರಿಲ್ಲದೆ ಸಂಕಷ್ಟಪಡುತ್ತಿದ್ದಾರೆ. ಇಂತಹವರಿಗೆ ಸೂರು ಕಲ್ಪಿಸುವುದು ಪ್ರತಿಯೊಬ್ಬರ ಕರ್ತವ್ಯ. ಈ ಹಿನ್ನೆಲೆಯಲ್ಲಿ ಸರ್ವೆ ನಂ. 112ರಲ್ಲಿರುವ 5 ಎಕರೆ 30 ಗುಂಟೆ ಜಾಗದಲ್ಲಿ ನಿವೇಶನ ನೀಡಲಾಗುವುದು. ಗುಡಿಸಲಿನಲ್ಲಿ ವಾಸ ಮಾಡುವವರಿಗೆ ಮನೆ ನಿರ್ಮಿಸಿ ಕೊಡಲಾಗುವುದು ಎಂದು ತಿಳಿಸಿದರು.</p>.<p>ನಿವೃತ್ತ ಪೌರ ಕಾರ್ಮಿಕರು ಹಾಗೂ ಉತ್ತಮವಾಗಿ ಸೇವೆ ಸಲ್ಲಿಸಿದ ಪೌರ ಕಾರ್ಮಿಕರನ್ನು ಸನ್ಮಾನಿಸಲಾಯಿತು.</p>.<p>ನಾರು ಅಭಿವೃದ್ಧಿ ನಿಗಮದ ಅಧ್ಯಕ್ಷ ಬಿ.ಕೆ. ಮಂಜುನಾಥ್, ತಹಶೀಲ್ದಾರ್ ಎಂ. ಮಮತಾ, ನಗರಸಭೆ ಪೌರಯುಕ್ತ ಶ್ರೀನಿವಾಸ್, ಎಇಇ ಸೇತುರಾಮ್ ಸಿಂಗ್, ಬಿಜೆಪಿ ನಗರ ಮೋರ್ಚಾ ಅಧ್ಯಕ್ಷ ವಿಜಯರಾಜು, ಡಿ.ಎಸ್- 4 ಅಧ್ಯಕ್ಷ ಟೈರ್ ರಂಗನಾಥ್, ಡಿಎಸ್ಎಸ್ ಸಂಚಾಲಕ ತಿಪ್ಪೇಸ್ವಾಮಿ, ನಗರಸಭೆ ಮಾಜಿ ಸದಸ್ಯರಾದ ಆರ್. ರಾಮು, ಸಂತೇಪೇಟೆ ನಟರಾಜು, ಸೊಪ್ಪಿನಹಟ್ಟಿ ನಟರಾಜು, ರಾಮಚಂದ್ರಗುಪ್ತ, ಕಂದಾಯ ನಿರೀಕ್ಷಕ ಪ್ರದೀಪ್ ಕುಮಾರ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>