ಈ ಹಿನ್ನೆಯಲ್ಲಿ ಚುನಾವಣಾ ಅಧಿಕಾರಿಗಳಾಗಿದ್ದ ಸುಧಾಕರ್ ಅವರು ಲಾಟರಿ ಮೂಲಕ ಅಧ್ಯಕ್ಷರ ಆಯ್ಕೆ ಮಾಡಲು ತೀರ್ಮಾನಿಸಿ ಪ್ರಕ್ರಿಯೆ ಪ್ರಾರಂಭಿಸಿದರು. ರಾಮಕೃಷ್ಣಯ್ಯ ಅವರ ಹೆಸರು ಬಂದಿದ್ದರಿಂದ ಚುನಾವಣಾ ಅಧಿಕಾರಿಗಳು ಅವರನ್ನೇ ಅಧ್ಯಕ್ಷ ಎಂದು ಘೋಷಣೆ ಮಾಡಿದರು. ಇದರಿಂದ ಸಿಟ್ಟಾದ ಅಭ್ಯರ್ಥಿ ಲಿಂಗಪ್ಪ ಹಾಗೂ ಅವರ ಬೆಂಬಲಿಗರು ಮತಪತ್ರ, ಸಹಿ ಸ್ವೀಕೃತಿ, ಸಭಾ ನಡವಳಿ ಇತರೆ ದಾಖಲೆಗಳನ್ನು ಕಚೇರಿಯಿಂದ ಹೊರಗೆ ಎಸೆದು ಆಕ್ರೋಶ ವ್ಯಕ್ತಪಡಿಸಿದರು.