<p><strong>ತುಮಕೂರು</strong>: ಹೆಣ್ಣು ಮಕ್ಕಳನ್ನು ಎಲ್ಲ ಕ್ಷೇತ್ರಗಳಲ್ಲಿ ಗುರುತಿಸಿ, ಅವರಿಗೆ ಸ್ಥಾನಮಾನ, ಗೌರವ ನೀಡಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಎಸ್.ಸಿದ್ದರಾಮಣ್ಣ ತಿಳಿಸಿದರು.</p>.<p>ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಅಂಗವಾಗಿ ಬಾಲಭವನ ಸೊಸೈಟಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಬಾಲಭವನ ಸಮಿತಿಯಿಂದ ಬುಧವಾರ ಹಮ್ಮಿಕೊಂಡಿದ್ದ ಪ್ರಬಂಧ ಸ್ಪರ್ಧೆ ಉದ್ಘಾಟಿಸಿ ಮಾತನಾಡಿದರು.</p>.<p>ಹೆಣ್ಣು ಮಕ್ಕಳಿಗೆ ಅವಕಾಶ, ಬೆಂಬಲ ಒದಗಿಸುವ ಸಲುವಾಗಿ ಪ್ರತಿ ವರ್ಷ ಜ. 24ರಂದು ರಾಷ್ಟ್ರೀಯ ಹೆಣ್ಣು ಮಕ್ಕಳ ದಿನವಾಗಿ ಆಚರಿಸಲಾಗುತ್ತದೆ. ಹೆಣ್ಣು ಮಕ್ಕಳ ಬಗ್ಗೆ ಜಾಗೃತಿ ಮೂಡಿಸುವ ಜತೆಗೆ ಅವರ ಹಕ್ಕು, ಶಿಕ್ಷಣ, ಆರೋಗ್ಯಕ್ಕೆ ಒತ್ತು ನೀಡಲಾಗುತ್ತದೆ ಎಂದರು.</p>.<p>ಹದಿಹರೆಯದ ವಯಸ್ಸಿನಲ್ಲಿ ಕೆಲವು ಗೊಂದಲಗಳು ಉಂಟಾಗುವುದು ಸಹಜ. ಸಮಸ್ಯೆಗಳು ಹೆಚ್ಚಾದಂತೆ ಸವಾಲುಗಳು ಹೆಚ್ಚುತ್ತವೆ. ಇಂತಹ ಸಮಸ್ಯೆ ನಿಭಾಯಿಸಲು ಆತ್ಮಸ್ಥೈರ್ಯ ಮುಖ್ಯ. ತಂದೆ-ತಾಯಿ ಮಾತುಗಳನ್ನು ಸಕರಾತ್ಮಕವಾಗಿ ಆಲಿಸಬೇಕು. ಶಿಕ್ಷಕರಿಗೆ ಗೌರವ ಕೊಡಬೇಕು ಎಂದು ಸಲಹೆ ಮಾಡಿದರು.</p>.<p>ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಕ ಕೆ.ಜಿ.ರಘುಚಂದ್ರ, ‘ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ, ಪ್ರಮಾಣ ಪತ್ರ ನೀಡಲಾಗುತ್ತದೆ’ ಎಂದರು.</p>.<p>ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ಎಂ.ಆರ್.ದಿನೇಶ್, ಕ್ಷೇತ್ರ ಶಿಕ್ಷಣಾಧಿಕಾರಿ ಹನುಮಂತಪ್ಪ, ಜಿಲ್ಲಾ ನಿರೂಪಣಾಧಿಕಾರಿ ಅಂಬಿಕಾ, ತೀರ್ಪುಗಾರರಾಗಿ ಆಗಮಿಸಿದ ಪಲ್ಲವಿ, ಸುರೇಶ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು</strong>: ಹೆಣ್ಣು ಮಕ್ಕಳನ್ನು ಎಲ್ಲ ಕ್ಷೇತ್ರಗಳಲ್ಲಿ ಗುರುತಿಸಿ, ಅವರಿಗೆ ಸ್ಥಾನಮಾನ, ಗೌರವ ನೀಡಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಎಸ್.ಸಿದ್ದರಾಮಣ್ಣ ತಿಳಿಸಿದರು.</p>.<p>ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಅಂಗವಾಗಿ ಬಾಲಭವನ ಸೊಸೈಟಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಬಾಲಭವನ ಸಮಿತಿಯಿಂದ ಬುಧವಾರ ಹಮ್ಮಿಕೊಂಡಿದ್ದ ಪ್ರಬಂಧ ಸ್ಪರ್ಧೆ ಉದ್ಘಾಟಿಸಿ ಮಾತನಾಡಿದರು.</p>.<p>ಹೆಣ್ಣು ಮಕ್ಕಳಿಗೆ ಅವಕಾಶ, ಬೆಂಬಲ ಒದಗಿಸುವ ಸಲುವಾಗಿ ಪ್ರತಿ ವರ್ಷ ಜ. 24ರಂದು ರಾಷ್ಟ್ರೀಯ ಹೆಣ್ಣು ಮಕ್ಕಳ ದಿನವಾಗಿ ಆಚರಿಸಲಾಗುತ್ತದೆ. ಹೆಣ್ಣು ಮಕ್ಕಳ ಬಗ್ಗೆ ಜಾಗೃತಿ ಮೂಡಿಸುವ ಜತೆಗೆ ಅವರ ಹಕ್ಕು, ಶಿಕ್ಷಣ, ಆರೋಗ್ಯಕ್ಕೆ ಒತ್ತು ನೀಡಲಾಗುತ್ತದೆ ಎಂದರು.</p>.<p>ಹದಿಹರೆಯದ ವಯಸ್ಸಿನಲ್ಲಿ ಕೆಲವು ಗೊಂದಲಗಳು ಉಂಟಾಗುವುದು ಸಹಜ. ಸಮಸ್ಯೆಗಳು ಹೆಚ್ಚಾದಂತೆ ಸವಾಲುಗಳು ಹೆಚ್ಚುತ್ತವೆ. ಇಂತಹ ಸಮಸ್ಯೆ ನಿಭಾಯಿಸಲು ಆತ್ಮಸ್ಥೈರ್ಯ ಮುಖ್ಯ. ತಂದೆ-ತಾಯಿ ಮಾತುಗಳನ್ನು ಸಕರಾತ್ಮಕವಾಗಿ ಆಲಿಸಬೇಕು. ಶಿಕ್ಷಕರಿಗೆ ಗೌರವ ಕೊಡಬೇಕು ಎಂದು ಸಲಹೆ ಮಾಡಿದರು.</p>.<p>ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಕ ಕೆ.ಜಿ.ರಘುಚಂದ್ರ, ‘ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ, ಪ್ರಮಾಣ ಪತ್ರ ನೀಡಲಾಗುತ್ತದೆ’ ಎಂದರು.</p>.<p>ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ಎಂ.ಆರ್.ದಿನೇಶ್, ಕ್ಷೇತ್ರ ಶಿಕ್ಷಣಾಧಿಕಾರಿ ಹನುಮಂತಪ್ಪ, ಜಿಲ್ಲಾ ನಿರೂಪಣಾಧಿಕಾರಿ ಅಂಬಿಕಾ, ತೀರ್ಪುಗಾರರಾಗಿ ಆಗಮಿಸಿದ ಪಲ್ಲವಿ, ಸುರೇಶ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>