<p><strong>ತಿಪಟೂರು:</strong> ತಾಲ್ಲೂಕಿನ ತಡಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬನ್ನಿಹಳ್ಳಿ ಕೆರೆಯ ಹೂಳು ತೆಗೆಯಲಾಗಿದ್ದು, ಹೆಚ್ಚು ನೀರು ಸಂಗ್ರಹವಾಗುವ ಭರವಸೆ ಮೂಡಿದೆ.</p>.<p>13 ಎಕರೆ 25 ಗುಂಟೆ ವಿಸ್ತೀರ್ಣ ಹೊಂದಿರುವ ಕೆರೆಯನ್ನು ₹10 ಲಕ್ಷ ವೆಚ್ಚದಲ್ಲಿ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆಯಿಂದ ‘ನಮ್ಮ ಊರು- ನಮ್ಮ ಕೆರೆ’ ಯೋಜನೆಯಡಿ ಹೂಳು ತೆಗೆಯಲಾಗಿದೆ.</p>.<p>ಈ ಯೋಜನೆಗೆ ಗ್ರಾಮಸ್ಥರೂ ಕೈಜೋಡಿಸಿದರು. ಕೆರೆಯ ಹೂಳು ತೆಗೆದು ಸುತ್ತಲೂ ಸಸಿಗಳನ್ನು ನೆಟ್ಟಿದ್ದು ಹಸಿರಿನಿಂದ ಕಂಗೊಳಿಸುತ್ತಿದೆ.</p>.<p>‘ನೀರಿನ ಸಂರಕ್ಷಣೆಗೆ ಸಂಸ್ಥೆ ಹೆಚ್ಚಿನ ಆದ್ಯತೆ ನೀಡುತ್ತಿರುವುದು ಖುಷಿಯ ವಿಚಾರ. ಅಂತರ್ಜಲ ವೃದ್ಧಿಯ ಜತೆಗೆ ಬರಗಾಲದಲ್ಲಿಯೂ ಪ್ರಾಣಿ, ಪಕ್ಷಿಗಳ ದಾಹ ನೀಗಿಸಲು ಕೆರೆ-ಕಟ್ಟೆಗಳನ್ನು ಅಭಿವೃದ್ಧಿ ಪಡಿಸಿ ನೀರು ನಿಲ್ಲುವಂತೆ ಮಾಡಿರುವುದು ಶ್ಲಾಘನೀಯ ಕಾರ್ಯ’ ಎಂದು ಕೆರೆಗೋಡಿ ರಂಗಾಪುರ ಮಠದ ಗುರುಪರದೇಶೀಕೇಂದ್ರ ಸ್ವಾಮೀಜಿ ತಿಳಿಸಿದರು.</p>.<p>‘ಉತ್ತಮ ಕೆರೆಗಳನ್ನು ಆಯ್ಕೆ ಮಾಡಿಕೊಂಡು ಸ್ಥಳೀಯರ ಸಹಕಾರದಿಂದಲೇ ಅಭಿವೃದ್ಧಿಗೆ ಮುಂದಾಗುತ್ತೇವೆ. ಇದರಿಂದ ತಮ್ಮ ಶ್ರಮದ ಪ್ರತಿಫಲದ ಬಗ್ಗೆ ಜನಸಾಮಾನ್ಯರಲ್ಲಿ ಅರಿವು ಮೂಡಲು ಸಾಧ್ಯವಾಗುತ್ತದೆ’ ಎನ್ನುತ್ತಾರೆ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆ ತಾಲ್ಲೂಕು ಯೋಜನಾಧಿಕಾರಿ ಶಾಂತ ನಾಯಕ್.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿಪಟೂರು:</strong> ತಾಲ್ಲೂಕಿನ ತಡಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬನ್ನಿಹಳ್ಳಿ ಕೆರೆಯ ಹೂಳು ತೆಗೆಯಲಾಗಿದ್ದು, ಹೆಚ್ಚು ನೀರು ಸಂಗ್ರಹವಾಗುವ ಭರವಸೆ ಮೂಡಿದೆ.</p>.<p>13 ಎಕರೆ 25 ಗುಂಟೆ ವಿಸ್ತೀರ್ಣ ಹೊಂದಿರುವ ಕೆರೆಯನ್ನು ₹10 ಲಕ್ಷ ವೆಚ್ಚದಲ್ಲಿ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆಯಿಂದ ‘ನಮ್ಮ ಊರು- ನಮ್ಮ ಕೆರೆ’ ಯೋಜನೆಯಡಿ ಹೂಳು ತೆಗೆಯಲಾಗಿದೆ.</p>.<p>ಈ ಯೋಜನೆಗೆ ಗ್ರಾಮಸ್ಥರೂ ಕೈಜೋಡಿಸಿದರು. ಕೆರೆಯ ಹೂಳು ತೆಗೆದು ಸುತ್ತಲೂ ಸಸಿಗಳನ್ನು ನೆಟ್ಟಿದ್ದು ಹಸಿರಿನಿಂದ ಕಂಗೊಳಿಸುತ್ತಿದೆ.</p>.<p>‘ನೀರಿನ ಸಂರಕ್ಷಣೆಗೆ ಸಂಸ್ಥೆ ಹೆಚ್ಚಿನ ಆದ್ಯತೆ ನೀಡುತ್ತಿರುವುದು ಖುಷಿಯ ವಿಚಾರ. ಅಂತರ್ಜಲ ವೃದ್ಧಿಯ ಜತೆಗೆ ಬರಗಾಲದಲ್ಲಿಯೂ ಪ್ರಾಣಿ, ಪಕ್ಷಿಗಳ ದಾಹ ನೀಗಿಸಲು ಕೆರೆ-ಕಟ್ಟೆಗಳನ್ನು ಅಭಿವೃದ್ಧಿ ಪಡಿಸಿ ನೀರು ನಿಲ್ಲುವಂತೆ ಮಾಡಿರುವುದು ಶ್ಲಾಘನೀಯ ಕಾರ್ಯ’ ಎಂದು ಕೆರೆಗೋಡಿ ರಂಗಾಪುರ ಮಠದ ಗುರುಪರದೇಶೀಕೇಂದ್ರ ಸ್ವಾಮೀಜಿ ತಿಳಿಸಿದರು.</p>.<p>‘ಉತ್ತಮ ಕೆರೆಗಳನ್ನು ಆಯ್ಕೆ ಮಾಡಿಕೊಂಡು ಸ್ಥಳೀಯರ ಸಹಕಾರದಿಂದಲೇ ಅಭಿವೃದ್ಧಿಗೆ ಮುಂದಾಗುತ್ತೇವೆ. ಇದರಿಂದ ತಮ್ಮ ಶ್ರಮದ ಪ್ರತಿಫಲದ ಬಗ್ಗೆ ಜನಸಾಮಾನ್ಯರಲ್ಲಿ ಅರಿವು ಮೂಡಲು ಸಾಧ್ಯವಾಗುತ್ತದೆ’ ಎನ್ನುತ್ತಾರೆ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆ ತಾಲ್ಲೂಕು ಯೋಜನಾಧಿಕಾರಿ ಶಾಂತ ನಾಯಕ್.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>