‘ನೀರಿನ ಸಂರಕ್ಷಣೆಗೆ ಸಂಸ್ಥೆ ಹೆಚ್ಚಿನ ಆದ್ಯತೆ ನೀಡುತ್ತಿರುವುದು ಖುಷಿಯ ವಿಚಾರ. ಅಂತರ್ಜಲ ವೃದ್ಧಿಯ ಜತೆಗೆ ಬರಗಾಲದಲ್ಲಿಯೂ ಪ್ರಾಣಿ, ಪಕ್ಷಿಗಳ ದಾಹ ನೀಗಿಸಲು ಕೆರೆ-ಕಟ್ಟೆಗಳನ್ನು ಅಭಿವೃದ್ಧಿ ಪಡಿಸಿ ನೀರು ನಿಲ್ಲುವಂತೆ ಮಾಡಿರುವುದು ಶ್ಲಾಘನೀಯ ಕಾರ್ಯ’ ಎಂದು ಕೆರೆಗೋಡಿ ರಂಗಾಪುರ ಮಠದ ಗುರುಪರದೇಶೀಕೇಂದ್ರ ಸ್ವಾಮೀಜಿ ತಿಳಿಸಿದರು.