ನನಗೆ ಮದುವೆ ಮಾಡಲಿಲ್ಲ ಎಂದು ವೆಂಕಟಪ್ಪ ಜಗಳ ತೆಗೆದಿದ್ದು ನಂತರ ಕುಡಿಯಲು ಹಣ ನೀಡುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾನೆ. ಹುಣೆಸೆಹಣ್ಣು ಬಿಡಿಸುವ ಮರದ ತುಂಡಿನಿಂದ ತಂದೆಯ ತಲೆಗೆ ಬಲವಾಗಿ ಹೊಡೆದು ಸಾಯಿಸಿದ್ದಾನೆ. ಬೆಳಿಗ್ಗೆ ಪಕ್ಕದ ಮನೆಯವರು ಸಣ್ಣಯ್ಯ ಅವರ ಪತ್ನಿ ತಾಯಮ್ಮ ಅವರಿಗೆ ದೂರವಾಣಿ ಕರೆ ಮಾಡಿ ವಿಷಯ ತಿಳಿಸಿದ್ದಾರೆ.