<p>ತುರುವೇಕೆರೆ: ಕೊಬ್ಬರಿಗೆ ವೈಜ್ಞಾನಿಕ ಬೆಲೆ ನಿಗದಿಪಡಿಸದೆ ರಾಜ್ಯದ ತೆಂಗು ಬೆಳೆಗಾರರನ್ನು ಕಡೆಗಣಿಸಿರುವ ಕಾಂಗ್ರೆಸ್ಗೆ ಮುಂಬರುವ ಲೋಕಸಬಾ ಚುನಾವಣೆಯಲ್ಲಿ ಜನರು ಸರಿಯಾದ ಪಾಠ ಕಲಿಸಬೇಕು ಎಂದು ಶಾಸಕ ಎಂ.ಟಿ.ಕೃಷ್ಣಪ್ಪ ಹೇಳಿದರು.</p>.<p>ಪಟ್ಟಣದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ 13 ಜಿಲ್ಲೆಗಳಲ್ಲಿ ತೆಂಗು ಬೆಳೆಯುವ ರೈತರಿಗೆ ಸರ್ಕಾರ ಅನ್ಯಾಯ ಮಾಡಿದೆ. ಕೊಬ್ಬರಿಗೆ ಕನಿಷ್ಠ ₹15 ಸಾವಿರವಾದರೂ ಬೆಂಬಲ ಬೆಲೆ ಘೋಷಿಸಬೇಕು ಎಂದು ಪ್ರತಿಭಟನೆ, ಚಳವಳಿ, ಹೋರಾಟ ಮಾಡಿದರೂ ಬಜೆಟ್ನಲ್ಲಿ ಕೊಬ್ಬರಿ ಬೆಳೆಗಾರರ ಪರವಾಗಿ ಯಾವುದೇ ಘೋಷಣೆ ಮಾಡದೆ ರೈತ ವಿರೋದಿ ಸರ್ಕಾರವಾಗಿದೆ ಎಂದು ಟೀಕಿಸಿದರು.</p>.<p>ರಾಜ್ಯ ಸರ್ಕಾರ ಕಾಂಗ್ರೆಸ್ ಶಾಸಕರಿಗೆ ಒಂದು ಅನುದಾನ, ಉಳಿದ ಪಕ್ಷದ ಶಾಸಕರಿಗೆ ಒಂದು ಅನುದಾನ ನೀಡುವ ಮೂಲಕ ತಾರತಮ್ಯ ಮಾಡುತ್ತಿದೆ ಎಂದು ದೂರಿದರು.</p>.<p>ಗ್ಯಾರಂಟಿಗಳಿಂದ ರಾಜ್ಯದ ಜನತೆ ಬೆಸತ್ತಿದ್ದು ಅವುಗಳಿಗೆ ಮಾನ್ಯತೆ ಇಲ್ಲವಾಗಿದೆ. ಕಾಂಗ್ರೆಸ್ ಸರ್ಕಾರಕ್ಕೆ ಚುನಾವಣೆ ವೇಳೆ ಬುದ್ಧಿ ಕಲಿಸಬೇಕು. ಇಲ್ಲವಾದರೆ ರಾಜ್ಯದ ರೈತರಿಗೆ ಉಳಿಗಾಲವಿಲ್ಲ ಎಂದು ಹೇಳಿದರು.</p>.<p>‘ಹೇಮಾವತಿ ಸಂಪರ್ಕ ಕಾಲುವೆ ಯೋಜನೆಯ ಬಗ್ಗೆ ಸರಿಯಾದ ಮಾಹಿತಿ ಇಲ್ಲ. ಆದರೆ ತಾಲ್ಲೂಕಿನ ಪಾಲಿನ ನೀರಿಗೆ ಅನ್ಯಾಯವಾದರೆ ಕೈಕಟ್ಟಿ ಕೂರುವುದಿಲ್ಲ’ ಎಂದು ಪ್ರತಿಕ್ರಿಯಿಸಿದರು.</p>.<p>ಗೋಷ್ಠಿಯಲ್ಲಿ ಡಿಸಿಸಿ ಬ್ಯಾಂಕ್ ಮಾಜಿ ನಿರ್ದೇಶಕ ದೇವರಾಜು, ಮುಖಂಡರಾದ ಪರಮೇಶ್, ವಿಜೇಂದ್ರಕುಮಾರ್, ವೆಂಕಟಾಪುರ ಯೋಗೀಶ್, ಮಂಗಿಗುಪ್ಪೆ ಬಸವರಾಜು, ರಂಗಸ್ವಾಮಿ, ಪುಟ್ಟರಾಜು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ತುರುವೇಕೆರೆ: ಕೊಬ್ಬರಿಗೆ ವೈಜ್ಞಾನಿಕ ಬೆಲೆ ನಿಗದಿಪಡಿಸದೆ ರಾಜ್ಯದ ತೆಂಗು ಬೆಳೆಗಾರರನ್ನು ಕಡೆಗಣಿಸಿರುವ ಕಾಂಗ್ರೆಸ್ಗೆ ಮುಂಬರುವ ಲೋಕಸಬಾ ಚುನಾವಣೆಯಲ್ಲಿ ಜನರು ಸರಿಯಾದ ಪಾಠ ಕಲಿಸಬೇಕು ಎಂದು ಶಾಸಕ ಎಂ.ಟಿ.ಕೃಷ್ಣಪ್ಪ ಹೇಳಿದರು.</p>.<p>ಪಟ್ಟಣದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ 13 ಜಿಲ್ಲೆಗಳಲ್ಲಿ ತೆಂಗು ಬೆಳೆಯುವ ರೈತರಿಗೆ ಸರ್ಕಾರ ಅನ್ಯಾಯ ಮಾಡಿದೆ. ಕೊಬ್ಬರಿಗೆ ಕನಿಷ್ಠ ₹15 ಸಾವಿರವಾದರೂ ಬೆಂಬಲ ಬೆಲೆ ಘೋಷಿಸಬೇಕು ಎಂದು ಪ್ರತಿಭಟನೆ, ಚಳವಳಿ, ಹೋರಾಟ ಮಾಡಿದರೂ ಬಜೆಟ್ನಲ್ಲಿ ಕೊಬ್ಬರಿ ಬೆಳೆಗಾರರ ಪರವಾಗಿ ಯಾವುದೇ ಘೋಷಣೆ ಮಾಡದೆ ರೈತ ವಿರೋದಿ ಸರ್ಕಾರವಾಗಿದೆ ಎಂದು ಟೀಕಿಸಿದರು.</p>.<p>ರಾಜ್ಯ ಸರ್ಕಾರ ಕಾಂಗ್ರೆಸ್ ಶಾಸಕರಿಗೆ ಒಂದು ಅನುದಾನ, ಉಳಿದ ಪಕ್ಷದ ಶಾಸಕರಿಗೆ ಒಂದು ಅನುದಾನ ನೀಡುವ ಮೂಲಕ ತಾರತಮ್ಯ ಮಾಡುತ್ತಿದೆ ಎಂದು ದೂರಿದರು.</p>.<p>ಗ್ಯಾರಂಟಿಗಳಿಂದ ರಾಜ್ಯದ ಜನತೆ ಬೆಸತ್ತಿದ್ದು ಅವುಗಳಿಗೆ ಮಾನ್ಯತೆ ಇಲ್ಲವಾಗಿದೆ. ಕಾಂಗ್ರೆಸ್ ಸರ್ಕಾರಕ್ಕೆ ಚುನಾವಣೆ ವೇಳೆ ಬುದ್ಧಿ ಕಲಿಸಬೇಕು. ಇಲ್ಲವಾದರೆ ರಾಜ್ಯದ ರೈತರಿಗೆ ಉಳಿಗಾಲವಿಲ್ಲ ಎಂದು ಹೇಳಿದರು.</p>.<p>‘ಹೇಮಾವತಿ ಸಂಪರ್ಕ ಕಾಲುವೆ ಯೋಜನೆಯ ಬಗ್ಗೆ ಸರಿಯಾದ ಮಾಹಿತಿ ಇಲ್ಲ. ಆದರೆ ತಾಲ್ಲೂಕಿನ ಪಾಲಿನ ನೀರಿಗೆ ಅನ್ಯಾಯವಾದರೆ ಕೈಕಟ್ಟಿ ಕೂರುವುದಿಲ್ಲ’ ಎಂದು ಪ್ರತಿಕ್ರಿಯಿಸಿದರು.</p>.<p>ಗೋಷ್ಠಿಯಲ್ಲಿ ಡಿಸಿಸಿ ಬ್ಯಾಂಕ್ ಮಾಜಿ ನಿರ್ದೇಶಕ ದೇವರಾಜು, ಮುಖಂಡರಾದ ಪರಮೇಶ್, ವಿಜೇಂದ್ರಕುಮಾರ್, ವೆಂಕಟಾಪುರ ಯೋಗೀಶ್, ಮಂಗಿಗುಪ್ಪೆ ಬಸವರಾಜು, ರಂಗಸ್ವಾಮಿ, ಪುಟ್ಟರಾಜು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>