<p><strong>ಕುಣಿಗಲ್:</strong> ತಾಲ್ಲೂಕಿನ ಬಿದನಗೆರೆ ಗ್ರಾಮದ ತೋಪಿನ ರಂಗಸ್ವಾಮಿ ದೇವಾಲಯದ ಶೆಟರ್ ಮುರಿದು ಒಳ ಪ್ರವೇಶಿಸಿದ ಕಳ್ಳರು ನಾಲ್ಕು ಪಂಚಲೋಹದ ವಿಗ್ರಹಗಳನ್ನು ಕದ್ದಿದ್ದಾರೆ.</p>.<p>ದೇವಾಲಯ ರಾಷ್ಟ್ರೀಯ ಹೆದ್ದಾರಿ 75ರ ಬೈಪಾಸ್ ರಸ್ತೆಗೆ ಹೊಂದಿಕೊಂಡಿದೆ. ಕಳ್ಳರು ಗುರುವಾರ ರಾತ್ರಿ ರಸ್ತೆ ಬದಿಯ ವಿದ್ಯುತ್ ಕಂಬದಿಂದ ಅಕ್ರಮವಾಗಿ ಸಂಪರ್ಕ ಪಡೆದು ದೇವಾಲಯದ ಗ್ರೀಲ್ ಮತ್ತು ಶೆಟರ್ಗಳನ್ನು ಕಟ್ಟರ್ ಬಳಸಿ ಮುರಿದು ಒಳ ಪ್ರವೇಶಿಸಿ ವಿಗ್ರಹ ಕದ್ದಿದ್ದಾರೆ.</p>.<p>ಅರ್ಚಕ ರಂಗಸ್ವಾಮಿ ಕುಣಿಗಲ್ ಪೊಲೀಸರಿಗೆ ದೂರು ನೀಡಿದ್ದಾರೆ.</p>.<p>ಬಿದನಗೆರೆ ತೋಪಿನ ರಂಗಸ್ವಾಮಿ ದೇವಾಲಯದಲ್ಲಿ ನಾಲ್ಕನೆ ಬಾರಿಗೆ ಕಳ್ಳತನ ನಡೆದಿದೆ. ತಾಲ್ಲೂಕಿನಲ್ಲಿ ಜಾನುವಾರು ಕಳ್ಳತನ, ಮನೆಗಳ್ಳತನ, ದೇವಾಲಯಗಳಲ್ಲಿ ಕಳ್ಳತನ, ಸರಗಳ್ಳತನ ಪ್ರಕರಣ ನಿರಂತರವಾಗಿ ನಡೆಯುತ್ತಿದೆ. ರಾಷ್ಟ್ರೀಯ ಹೆದ್ದಾರಿಗಳಲ್ಲಿ ವಾಹನ ಚಾಲಕರನ್ನು ಅಡ್ಡಗಟ್ಟಿ ಸುಲಿಗೆ ಮಾಡುತ್ತಿರುವ ಪ್ರಕರಣಗಳು ನಡೆಯುತ್ತಿದೆ ಪೊಲೀಸರು ಈ ಬಗ್ಗೆ ಹೆಚ್ಚಿನ ನಿಗಾ ವಹಿಸಬೇಕು ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಂಗಣ್ಣಗೌಡ ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕುಣಿಗಲ್:</strong> ತಾಲ್ಲೂಕಿನ ಬಿದನಗೆರೆ ಗ್ರಾಮದ ತೋಪಿನ ರಂಗಸ್ವಾಮಿ ದೇವಾಲಯದ ಶೆಟರ್ ಮುರಿದು ಒಳ ಪ್ರವೇಶಿಸಿದ ಕಳ್ಳರು ನಾಲ್ಕು ಪಂಚಲೋಹದ ವಿಗ್ರಹಗಳನ್ನು ಕದ್ದಿದ್ದಾರೆ.</p>.<p>ದೇವಾಲಯ ರಾಷ್ಟ್ರೀಯ ಹೆದ್ದಾರಿ 75ರ ಬೈಪಾಸ್ ರಸ್ತೆಗೆ ಹೊಂದಿಕೊಂಡಿದೆ. ಕಳ್ಳರು ಗುರುವಾರ ರಾತ್ರಿ ರಸ್ತೆ ಬದಿಯ ವಿದ್ಯುತ್ ಕಂಬದಿಂದ ಅಕ್ರಮವಾಗಿ ಸಂಪರ್ಕ ಪಡೆದು ದೇವಾಲಯದ ಗ್ರೀಲ್ ಮತ್ತು ಶೆಟರ್ಗಳನ್ನು ಕಟ್ಟರ್ ಬಳಸಿ ಮುರಿದು ಒಳ ಪ್ರವೇಶಿಸಿ ವಿಗ್ರಹ ಕದ್ದಿದ್ದಾರೆ.</p>.<p>ಅರ್ಚಕ ರಂಗಸ್ವಾಮಿ ಕುಣಿಗಲ್ ಪೊಲೀಸರಿಗೆ ದೂರು ನೀಡಿದ್ದಾರೆ.</p>.<p>ಬಿದನಗೆರೆ ತೋಪಿನ ರಂಗಸ್ವಾಮಿ ದೇವಾಲಯದಲ್ಲಿ ನಾಲ್ಕನೆ ಬಾರಿಗೆ ಕಳ್ಳತನ ನಡೆದಿದೆ. ತಾಲ್ಲೂಕಿನಲ್ಲಿ ಜಾನುವಾರು ಕಳ್ಳತನ, ಮನೆಗಳ್ಳತನ, ದೇವಾಲಯಗಳಲ್ಲಿ ಕಳ್ಳತನ, ಸರಗಳ್ಳತನ ಪ್ರಕರಣ ನಿರಂತರವಾಗಿ ನಡೆಯುತ್ತಿದೆ. ರಾಷ್ಟ್ರೀಯ ಹೆದ್ದಾರಿಗಳಲ್ಲಿ ವಾಹನ ಚಾಲಕರನ್ನು ಅಡ್ಡಗಟ್ಟಿ ಸುಲಿಗೆ ಮಾಡುತ್ತಿರುವ ಪ್ರಕರಣಗಳು ನಡೆಯುತ್ತಿದೆ ಪೊಲೀಸರು ಈ ಬಗ್ಗೆ ಹೆಚ್ಚಿನ ನಿಗಾ ವಹಿಸಬೇಕು ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಂಗಣ್ಣಗೌಡ ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>