ಬಿದನಗೆರೆ ತೋಪಿನ ರಂಗಸ್ವಾಮಿ ದೇವಾಲಯದಲ್ಲಿ ನಾಲ್ಕನೆ ಬಾರಿಗೆ ಕಳ್ಳತನ ನಡೆದಿದೆ. ತಾಲ್ಲೂಕಿನಲ್ಲಿ ಜಾನುವಾರು ಕಳ್ಳತನ, ಮನೆಗಳ್ಳತನ, ದೇವಾಲಯಗಳಲ್ಲಿ ಕಳ್ಳತನ, ಸರಗಳ್ಳತನ ಪ್ರಕರಣ ನಿರಂತರವಾಗಿ ನಡೆಯುತ್ತಿದೆ. ರಾಷ್ಟ್ರೀಯ ಹೆದ್ದಾರಿಗಳಲ್ಲಿ ವಾಹನ ಚಾಲಕರನ್ನು ಅಡ್ಡಗಟ್ಟಿ ಸುಲಿಗೆ ಮಾಡುತ್ತಿರುವ ಪ್ರಕರಣಗಳು ನಡೆಯುತ್ತಿದೆ ಪೊಲೀಸರು ಈ ಬಗ್ಗೆ ಹೆಚ್ಚಿನ ನಿಗಾ ವಹಿಸಬೇಕು ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಂಗಣ್ಣಗೌಡ ಒತ್ತಾಯಿಸಿದ್ದಾರೆ.