ನೀರಿನ ಸಮಸ್ಯೆ ತೀವ್ರವಾಗುತ್ತಿದ್ದರೂ ಅಧಿಕಾರಿಗಳು ಕ್ರಮ ಕೈಗೊಳ್ಳುತ್ತಿಲ್ಲ ಎಂದು ಸದಸ್ಯ ಸುರೇಶ್ ಆರೋಪಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ತಾ.ಪಂ ಅಧ್ಯಕ್ಷೆ ಕವಿತಾ, ‘ಈಗಾಗಲೇ ಬೇಸಿಗೆ ಆರಂಭವಾಗಿದೆ. ಕುಡಿಯುವ ನೀರಿಗೆ ಆದ್ಯತೆ ನೀಡಬೇಕು. ಯಾವ ಗ್ರಾಮದಲ್ಲೂ ಸಮಸ್ಯೆ ಆಗದಂತೆ ನೋಡಿಕೊಳ್ಳಬೇಕು. ಅಧಿಕಾರಿಗಳು ಜವಾಬ್ದಾರಿಯಿಂದ ಕೆಲಸ ಮಾಡಿ, ಸಮಸ್ಯೆ ಬಗೆಹರಿಸಬೇಕು’ ಎಂದು ಸೂಚಿಸಿದರು.