ತಿಪಟೂರು: ನಗರದ ರೈಲ್ವೆ ನಿಲ್ದಾಣ ರಸ್ತೆಯಲ್ಲಿ ಇರುವ ತಾಲ್ಲೂಕು ಪಂಚಾಯಿತಿ ಕಚೇರಿ ಬಾಗಿಲು ಮುರಿದು, ಗೋಡೆ ಕೊರೆದು ಕಳ್ಳತನ ಮಾಡಿರುವ ಘಟನೆ ಸೋಮವಾರ ರಾತ್ರಿ ನಡೆದಿದೆ.
ತಾಲ್ಲೂಕು ಪಂಚಾಯಿತಿ ಕಾರ್ಯಾಲಯದಲ್ಲಿ ಕಳೆದ ಹಲವಾರು ದಿನಗಳಿಂದ ರಾತ್ರಿ ಪಾಳಿ ಕಾವಲುಗಾರರನ್ನು ನಿಯೋಜಿಸುವುದನ್ನು ನಿಲ್ಲಿಸಲಾಗಿದೆ. ಇದನ್ನೇ ಅಸ್ತ್ರವನ್ನಾಗಿಸಿಕೊಂಡು ಕಳ್ಳತನ ಮಾಡಿದ್ದಾರೆ. ದಾಖಲೆ ಕಳವು ಮಾಡಿರುವ ಬಗ್ಗೆ ಇನ್ನಷ್ಟೇ ಗೊತ್ತಾಗಬೇಕಿದೆ.