<p><strong>ತುಮಕೂರು:</strong> ಜಿಲ್ಲೆಯಲ್ಲಿ 176 ಜನಪದ ಕಲಾ ಪ್ರಕಾರಗಳಿವೆ. ಓದಲು, ಬರೆಯಲು ಬಾರದವರ ಸಾಹಿತ್ಯ ಭಂಡಾರ ಜನಪದ ಸಾಹಿತ್ಯ ಎಂದು ಜಾನಪದ ಕಲಾವಿದ ಸಣ್ಣಹೊನ್ನಯ್ಯ ಕಂಟಲಗೆರೆ ಹೇಳಿದರು.</p>.<p>ತಾಲ್ಲೂಕಿನ ನಾಗವಲ್ಲಿ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಶನಿವಾರ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಹಮ್ಮಿಕೊಂಡಿದ್ದ ‘ಕನ್ನಡ ಸಾಹಿತ್ಯ ಪರಿಷತ್ತಿನ ನಡೆ– ಯುವ ಜನತೆಯ ಕಡೆ’ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಚಿಕ್ಕಬೆಳ್ಳಾವಿ ಶಿವಕುಮಾರ್, ‘ಪರಿಷತ್ತು ಕನ್ನಡ ಭಾಷೆ ಮತ್ತು ಇತಿಹಾಸವ ತಿಳಿಸುವ ಕಾರ್ಯ ಮಾಡುತ್ತಿದೆ. ಇದರ ಉದ್ದೇಶವನ್ನು ಯುವ ಸಮೂಹ ಅರ್ಥ ಮಾಡಿಕೊಳ್ಳಬೇಕು. ಸಾಹಿತ್ಯ ಪ್ರಕಾರದಲ್ಲಿನ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು’ ಎಂದು ಸಲಹೆ ಮಾಡಿದರು.</p>.<p>ಕನ್ನಡ ಸಾಹಿತ್ಯ ಪರಿಷತ್ತಿನ ಗೂಳೂರು ಹೋಬಳಿಯ ಅಧ್ಯಕ್ಷರಾಗಿ ತೋಪಯ್ಯ, ಹೆಬ್ಬೂರು ಹೋಬಳಿ ಅಧ್ಯಕ್ಷರಾಗಿ ವಾಸು ಅವರನ್ನು ನೇಮಿಸಲಾಯಿತು. ಕಾಲೇಜಿನ ಪ್ರಾಂಶುಪಾಲ ಎಸ್.ಸಿದ್ಧರಾಜು, ಸಾಹಿತ್ಯ ಪರಿಷತ್ತಿನ ಶಶಿಕುಮಾರ್, ದೇವರಾಜು, ಪ್ರಕಾಶ್, ರಾಜಶೇಖರ್, ಸಂಪತ್ ಕುಮಾರ್ ಇತರರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು:</strong> ಜಿಲ್ಲೆಯಲ್ಲಿ 176 ಜನಪದ ಕಲಾ ಪ್ರಕಾರಗಳಿವೆ. ಓದಲು, ಬರೆಯಲು ಬಾರದವರ ಸಾಹಿತ್ಯ ಭಂಡಾರ ಜನಪದ ಸಾಹಿತ್ಯ ಎಂದು ಜಾನಪದ ಕಲಾವಿದ ಸಣ್ಣಹೊನ್ನಯ್ಯ ಕಂಟಲಗೆರೆ ಹೇಳಿದರು.</p>.<p>ತಾಲ್ಲೂಕಿನ ನಾಗವಲ್ಲಿ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಶನಿವಾರ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಹಮ್ಮಿಕೊಂಡಿದ್ದ ‘ಕನ್ನಡ ಸಾಹಿತ್ಯ ಪರಿಷತ್ತಿನ ನಡೆ– ಯುವ ಜನತೆಯ ಕಡೆ’ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಚಿಕ್ಕಬೆಳ್ಳಾವಿ ಶಿವಕುಮಾರ್, ‘ಪರಿಷತ್ತು ಕನ್ನಡ ಭಾಷೆ ಮತ್ತು ಇತಿಹಾಸವ ತಿಳಿಸುವ ಕಾರ್ಯ ಮಾಡುತ್ತಿದೆ. ಇದರ ಉದ್ದೇಶವನ್ನು ಯುವ ಸಮೂಹ ಅರ್ಥ ಮಾಡಿಕೊಳ್ಳಬೇಕು. ಸಾಹಿತ್ಯ ಪ್ರಕಾರದಲ್ಲಿನ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು’ ಎಂದು ಸಲಹೆ ಮಾಡಿದರು.</p>.<p>ಕನ್ನಡ ಸಾಹಿತ್ಯ ಪರಿಷತ್ತಿನ ಗೂಳೂರು ಹೋಬಳಿಯ ಅಧ್ಯಕ್ಷರಾಗಿ ತೋಪಯ್ಯ, ಹೆಬ್ಬೂರು ಹೋಬಳಿ ಅಧ್ಯಕ್ಷರಾಗಿ ವಾಸು ಅವರನ್ನು ನೇಮಿಸಲಾಯಿತು. ಕಾಲೇಜಿನ ಪ್ರಾಂಶುಪಾಲ ಎಸ್.ಸಿದ್ಧರಾಜು, ಸಾಹಿತ್ಯ ಪರಿಷತ್ತಿನ ಶಶಿಕುಮಾರ್, ದೇವರಾಜು, ಪ್ರಕಾಶ್, ರಾಜಶೇಖರ್, ಸಂಪತ್ ಕುಮಾರ್ ಇತರರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>