<p><strong>ಶಿರಾ: </strong>ರಾಜ್ಯದಲ್ಲಿ ಅಧಿಕಾರ ನಡೆಸುತ್ತಿರುವ ಬಿಜೆಪಿ ಸರ್ಕಾರ ಭ್ರಷ್ಟಾಚಾರದಲ್ಲಿ ತೊಡಗಿದ್ದು, ಪಿಂಚಣಿ ನೀಡಲು ಸಹ ಹಣವಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆರೋಪಿಸಿದರು.</p>.<p>ಕಾಂಗ್ರೆಸ್ ಪ್ರಚಾರ ಕಚೇರಿ ಉದ್ಘಾಟಿಸಿ ಮಾತನಾಡಿದ ಅವರು, ಸರ್ಕಾರದ ಖಜಾನೆ ಸ್ವಂತ ಆಸ್ತಿಯಾಗಿದೆ ಎಂದು ವಾಗ್ದಾಳಿ ನಡೆಸಿದರು.</p>.<p>ಕೊರೊನಾ ಸಂಕಷ್ಟದ ಸಮಯದಲ್ಲಿ ರೈತರು, ಕಾರ್ಮಿಕರು, ಕುಶಲಕರ್ಮಿಗಳು ಸೇರಿದಂತೆ ಯಾರ ನೋವಿಗೂ ಸರ್ಕಾರ ಸ್ವಂದಿಸಲಿಲ್ಲ. ಜನರ ಆರೋಗ್ಯ ಕಾಪಾಡಲು ಸರ್ಕಾರ ವಿಫಲವಾಗಿದೆ ಎಂದು ಅವರು ಟೀಕಿಸಿದರು.</p>.<p>ಉಪ ಚುನಾವಣೆ ದೃಷ್ಟಿಯಲ್ಲಿಟ್ಟುಕೊಂಡು ಸರ್ಕಾರ ಕಾಡುಗೊಲ್ಲರ ಅಭಿವೃದ್ಧಿ ನಿಗಮ ಸ್ಥಾಪಿಸಲು ಹೊರಟಿದೆ. ಆದರೆ, ನಿಗಮಕ್ಕೆ ಒಂದು ಪೈಸೆಯನ್ನೂ ತೆಗೆದಿರಿಸಿಲ್ಲ. ಚುನಾವಣೆ ಸಮಯದಲ್ಲಿ ಬಿಜೆಪಿಯವರಿಗೆ ಇಂತಹ ಯೋಚನೆಗಳು ಬರುತ್ತವೆ ಎಂದು ಶಿವಕುಮಾರ್ ಲೇವಡಿ ಮಾಡಿದರು.</p>.<p>ಎರಡೂ ಕ್ಷೇತ್ರಗಳಲ್ಲಿ ಮತದಾರರು ತೋರಿಸುತ್ತಿರುವ ಉತ್ಸಾಹ ಗಮನಿಸಿದರೆ ಚುನಾವಣೆಯ ಫಲಿತಾಂಶ ಹೇಗಿರುತ್ತದೆ ಎಂಬ ಸುಳಿವು ಈಗಾಗಲೇ ಸಿಕ್ಕಿದೆ. ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.</p>.<p>ಟಿ.ಬಿ.ಜಯಚಂದ್ರ ಅವರು ₹2,500 ಕೋಟಿ ಅನುದಾನದಲ್ಲಿ ಅಭಿವೃದ್ಧಿ ಕೆಲಸ ಮಾಡಿದ್ದಾರೆ. ಅವರು ಮಾಡಿರುವ ಕೆಲಸಗಳು ಜನರ ಕಣ್ಣು ಮುಂದೆ ಇವೆ. ಅಭಿವೃದ್ಧಿಗಾಗಿ ಅವರನ್ನು ಗೆಲ್ಲಿಸಬೇಕು ಎಂದರು.</p>.<p>ಜೆಡಿಎಸ್ಗೆ ಬೆಂಬಲ ನೀಡಿದ್ದ ವ್ಯಕ್ತಿಯನ್ನು ಕರೆ ತಂದುಬಿಜೆಪಿ ಟಿಕೆಟ್ ನೀಡಲಾಗಿದೆ. ಅವರಿಗೆ ಸ್ವಂತ ಶಕ್ತಿ ಇದ್ದರೆ ಅವರ ಪಕ್ಷದಲ್ಲಿ ಒಬ್ಬರಿಗೆ ಟಿಕೆಟ್ ನೀಡಬೇಕಿತ್ತು. ಕ್ಷೇತ್ರದ ಜನತೆಗೆ ಈ ಬಗ್ಗೆ ಅರಿವಿಗೆ ಎಂದರು.</p>.<p>ಕಾಂಗ್ರೆಸ್ ಅಭ್ಯರ್ಥಿ ಟಿ.ಬಿ.ಜಯಚಂದ್ರ, ಮುಖಂಡರಾದ ಬಿ.ಎನ್.ಚಂದ್ರಪ್ಪ, ಮುದ್ದಹನುಮೇಗೌಡ, ಸಾಸಲು ಸತೀಶ್, ಕಲ್ಕೆರೆ ರವಿಕುಮಾರ್, ಸುಧಾಕರ್, ಮುರಳೀಧರ್ ಹಾಲಪ್ಪ, ಬರಗೂರು ನಟರಾಜು, ಪಿ.ಆರ್.ಮಂಜುನಾಥ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿರಾ: </strong>ರಾಜ್ಯದಲ್ಲಿ ಅಧಿಕಾರ ನಡೆಸುತ್ತಿರುವ ಬಿಜೆಪಿ ಸರ್ಕಾರ ಭ್ರಷ್ಟಾಚಾರದಲ್ಲಿ ತೊಡಗಿದ್ದು, ಪಿಂಚಣಿ ನೀಡಲು ಸಹ ಹಣವಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆರೋಪಿಸಿದರು.</p>.<p>ಕಾಂಗ್ರೆಸ್ ಪ್ರಚಾರ ಕಚೇರಿ ಉದ್ಘಾಟಿಸಿ ಮಾತನಾಡಿದ ಅವರು, ಸರ್ಕಾರದ ಖಜಾನೆ ಸ್ವಂತ ಆಸ್ತಿಯಾಗಿದೆ ಎಂದು ವಾಗ್ದಾಳಿ ನಡೆಸಿದರು.</p>.<p>ಕೊರೊನಾ ಸಂಕಷ್ಟದ ಸಮಯದಲ್ಲಿ ರೈತರು, ಕಾರ್ಮಿಕರು, ಕುಶಲಕರ್ಮಿಗಳು ಸೇರಿದಂತೆ ಯಾರ ನೋವಿಗೂ ಸರ್ಕಾರ ಸ್ವಂದಿಸಲಿಲ್ಲ. ಜನರ ಆರೋಗ್ಯ ಕಾಪಾಡಲು ಸರ್ಕಾರ ವಿಫಲವಾಗಿದೆ ಎಂದು ಅವರು ಟೀಕಿಸಿದರು.</p>.<p>ಉಪ ಚುನಾವಣೆ ದೃಷ್ಟಿಯಲ್ಲಿಟ್ಟುಕೊಂಡು ಸರ್ಕಾರ ಕಾಡುಗೊಲ್ಲರ ಅಭಿವೃದ್ಧಿ ನಿಗಮ ಸ್ಥಾಪಿಸಲು ಹೊರಟಿದೆ. ಆದರೆ, ನಿಗಮಕ್ಕೆ ಒಂದು ಪೈಸೆಯನ್ನೂ ತೆಗೆದಿರಿಸಿಲ್ಲ. ಚುನಾವಣೆ ಸಮಯದಲ್ಲಿ ಬಿಜೆಪಿಯವರಿಗೆ ಇಂತಹ ಯೋಚನೆಗಳು ಬರುತ್ತವೆ ಎಂದು ಶಿವಕುಮಾರ್ ಲೇವಡಿ ಮಾಡಿದರು.</p>.<p>ಎರಡೂ ಕ್ಷೇತ್ರಗಳಲ್ಲಿ ಮತದಾರರು ತೋರಿಸುತ್ತಿರುವ ಉತ್ಸಾಹ ಗಮನಿಸಿದರೆ ಚುನಾವಣೆಯ ಫಲಿತಾಂಶ ಹೇಗಿರುತ್ತದೆ ಎಂಬ ಸುಳಿವು ಈಗಾಗಲೇ ಸಿಕ್ಕಿದೆ. ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.</p>.<p>ಟಿ.ಬಿ.ಜಯಚಂದ್ರ ಅವರು ₹2,500 ಕೋಟಿ ಅನುದಾನದಲ್ಲಿ ಅಭಿವೃದ್ಧಿ ಕೆಲಸ ಮಾಡಿದ್ದಾರೆ. ಅವರು ಮಾಡಿರುವ ಕೆಲಸಗಳು ಜನರ ಕಣ್ಣು ಮುಂದೆ ಇವೆ. ಅಭಿವೃದ್ಧಿಗಾಗಿ ಅವರನ್ನು ಗೆಲ್ಲಿಸಬೇಕು ಎಂದರು.</p>.<p>ಜೆಡಿಎಸ್ಗೆ ಬೆಂಬಲ ನೀಡಿದ್ದ ವ್ಯಕ್ತಿಯನ್ನು ಕರೆ ತಂದುಬಿಜೆಪಿ ಟಿಕೆಟ್ ನೀಡಲಾಗಿದೆ. ಅವರಿಗೆ ಸ್ವಂತ ಶಕ್ತಿ ಇದ್ದರೆ ಅವರ ಪಕ್ಷದಲ್ಲಿ ಒಬ್ಬರಿಗೆ ಟಿಕೆಟ್ ನೀಡಬೇಕಿತ್ತು. ಕ್ಷೇತ್ರದ ಜನತೆಗೆ ಈ ಬಗ್ಗೆ ಅರಿವಿಗೆ ಎಂದರು.</p>.<p>ಕಾಂಗ್ರೆಸ್ ಅಭ್ಯರ್ಥಿ ಟಿ.ಬಿ.ಜಯಚಂದ್ರ, ಮುಖಂಡರಾದ ಬಿ.ಎನ್.ಚಂದ್ರಪ್ಪ, ಮುದ್ದಹನುಮೇಗೌಡ, ಸಾಸಲು ಸತೀಶ್, ಕಲ್ಕೆರೆ ರವಿಕುಮಾರ್, ಸುಧಾಕರ್, ಮುರಳೀಧರ್ ಹಾಲಪ್ಪ, ಬರಗೂರು ನಟರಾಜು, ಪಿ.ಆರ್.ಮಂಜುನಾಥ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>