ಗ್ರಾಮಸ್ಥರು ಕಳ್ಳರನ್ನು ಹಿಡಿಯಲು ಬೆನ್ನಟ್ಟಿದರು. ಓಡುವ ಭರದಲ್ಲಿ ಒಬ್ಬ ಬಿದ್ದು ಕಾಲು ಮುರಿದುಕೊಂಡಿದ್ದು, ಇಬ್ಬರು ಪರಾರಿಯಾಗಿದ್ದಾರೆ. ನಂತರ ಗ್ರಾಮಸ್ಥರು ಪೊಲೀಸರಿಗೆ ನೀಡಿದ ಮಾಹಿತಿ ಮೇರೆಗೆ ಗಾಯಗೊಂಡಿದ್ದ ಕಳ್ಳನನ್ನು ವಶಕ್ಕೆ ಪಡೆದು ವಿಚಾರಿಸಿದಾಗ ಆಂಧ್ರಮೂಲದ ವೆಂಕಣ್ಣ ಎಂದು ಗುರುತಿಸಲಾಗಿದ್ದು, ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ಕಳುಹಿಸಿದ್ದಾರೆ.