<p><strong>ತುಮಕೂರು: </strong>ನಗರದ ಲಕ್ಷ್ಮಮ್ಮ ಎಂಬುವವರ ಖಾತೆಯಿಂದ ದುಷ್ಕರ್ಮಿಗಳು ₹ 36 ಸಾವಿರವನ್ನು ಮಂಗಳವಾರ ಎಟಿಎಂ ಮೂಲಕ ಡ್ರಾ ಮಾಡಿದ್ದಾರೆ.</p>.<p>ಲಕ್ಷ್ಮಮ್ಮ ಅವರು ಶ್ರೀದೇವಿ ಎಂಜಿನಿಯರಿಂಗ್ ಕಾಲೇಜಿನ ಆವರಣದಲ್ಲಿರುವ ಕೆನರಾ ಬ್ಯಾಂಕಿನಲ್ಲಿ ಉಳಿತಾಯ ಖಾತೆ ಹೊಂದಿದ್ದಾರೆ. ಈ ಖಾತೆಗೆ ಅವರ ಪತಿ ಶ್ರೀರಾಮಯ್ಯ ಅವರ ಮೊಬೈಲ್ ಸಂಖ್ಯೆ ಜೋಡಣೆ ಮಾಡಿದ್ದಾರೆ.</p>.<p>ಶ್ರೀರಾಮಯ್ಯ ಅವರು ಚಿಕ್ಕತೊಟ್ಲುಕೆರೆಯ 66/11 ಕೆ.ವಿ. ವಿದ್ಯುತ್ ಉಪಸ್ಥಾವರದಲ್ಲಿ ಕಿರಿಯ ಎಂಜಿನಿಯರ್ ಆಗಿದ್ದು, ಜುಲೈ 8ರಂದು ರಾತ್ರಿ ಪಾಳಿಯ ಕೆಲಸಕ್ಕೆ ಹೋಗಿದ್ದರು. ಬೆಳಗಿನ ಜಾವ 4.57ಕ್ಕೆ ಅವರ ಮೊಬೈಲ್ಗೆ ಲಕ್ಷ್ಮಮ್ಮ ಅವರ ಖಾತೆಯಿಂದ ಹಣ ಡ್ರಾ ಮಾಡಿಕೊಂಡಿರುವ ಸಂದೇಶ ಬಂದಿದೆ.</p>.<p>‘ಶ್ರೀರಾಮಯ್ಯ ಅವರು ಹಣ ಡ್ರಾ ಆಗಿರುವ ಬಗ್ಗೆ ಪತ್ನಿಯನ್ನು ವಿಚಾರಿಸಿದ್ದಾರೆ. ನಂತರ ಕೆನರಾ ಬ್ಯಾಂಕ್ ಶಾಖೆಗೆ ಹೋಗಿ ವಿಚಾರಿಸಿದ್ದಾರೆ. ಬ್ಯಾಂಕಿನವರು ಶಿರಾ ರಸ್ತೆಯಲ್ಲಿರುವ ಕಾರ್ಪೊರೇಷನ್ ಬ್ಯಾಂಕಿನ ಎ.ಟಿ.ಎಂನಿಂದ ಹಣ ಡ್ರಾ ಆಗಿರುವುದಾಗಿ ಮಾಹಿತಿ ನೀಡಿದ್ದಾರೆ.</p>.<p>'ಬ್ಯಾಂಕಿನ ಖಾತೆ ಸಂಖ್ಯೆ, ಎಟಿಎಂ ಕಾರ್ಡ್ ಸಂಖ್ಯೆ, ಸಿ.ವಿ.ಸಿ ಸಂಖ್ಯೆ, ಪಾಸ್ ವರ್ಡ್ ಸಂಖ್ಯೆಯನ್ನು ಯಾರಿಗೂ ನೀಡಿಲ್ಲ. ಯಾರೋ ಕಳ್ಳರು ತಮ್ಮ ಬ್ಯಾಂಕ್ ಖಾತೆಯಿಂದ ಹಣ ಡ್ರಾ ಮಾಡಿದ್ದಾರೆ ಎಂದು ದೂರು ನೀಡಿದ್ದಾರೆ' ಎಂದು ನಗರ ಠಾಣೆ ಪೊಲೀಸರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು: </strong>ನಗರದ ಲಕ್ಷ್ಮಮ್ಮ ಎಂಬುವವರ ಖಾತೆಯಿಂದ ದುಷ್ಕರ್ಮಿಗಳು ₹ 36 ಸಾವಿರವನ್ನು ಮಂಗಳವಾರ ಎಟಿಎಂ ಮೂಲಕ ಡ್ರಾ ಮಾಡಿದ್ದಾರೆ.</p>.<p>ಲಕ್ಷ್ಮಮ್ಮ ಅವರು ಶ್ರೀದೇವಿ ಎಂಜಿನಿಯರಿಂಗ್ ಕಾಲೇಜಿನ ಆವರಣದಲ್ಲಿರುವ ಕೆನರಾ ಬ್ಯಾಂಕಿನಲ್ಲಿ ಉಳಿತಾಯ ಖಾತೆ ಹೊಂದಿದ್ದಾರೆ. ಈ ಖಾತೆಗೆ ಅವರ ಪತಿ ಶ್ರೀರಾಮಯ್ಯ ಅವರ ಮೊಬೈಲ್ ಸಂಖ್ಯೆ ಜೋಡಣೆ ಮಾಡಿದ್ದಾರೆ.</p>.<p>ಶ್ರೀರಾಮಯ್ಯ ಅವರು ಚಿಕ್ಕತೊಟ್ಲುಕೆರೆಯ 66/11 ಕೆ.ವಿ. ವಿದ್ಯುತ್ ಉಪಸ್ಥಾವರದಲ್ಲಿ ಕಿರಿಯ ಎಂಜಿನಿಯರ್ ಆಗಿದ್ದು, ಜುಲೈ 8ರಂದು ರಾತ್ರಿ ಪಾಳಿಯ ಕೆಲಸಕ್ಕೆ ಹೋಗಿದ್ದರು. ಬೆಳಗಿನ ಜಾವ 4.57ಕ್ಕೆ ಅವರ ಮೊಬೈಲ್ಗೆ ಲಕ್ಷ್ಮಮ್ಮ ಅವರ ಖಾತೆಯಿಂದ ಹಣ ಡ್ರಾ ಮಾಡಿಕೊಂಡಿರುವ ಸಂದೇಶ ಬಂದಿದೆ.</p>.<p>‘ಶ್ರೀರಾಮಯ್ಯ ಅವರು ಹಣ ಡ್ರಾ ಆಗಿರುವ ಬಗ್ಗೆ ಪತ್ನಿಯನ್ನು ವಿಚಾರಿಸಿದ್ದಾರೆ. ನಂತರ ಕೆನರಾ ಬ್ಯಾಂಕ್ ಶಾಖೆಗೆ ಹೋಗಿ ವಿಚಾರಿಸಿದ್ದಾರೆ. ಬ್ಯಾಂಕಿನವರು ಶಿರಾ ರಸ್ತೆಯಲ್ಲಿರುವ ಕಾರ್ಪೊರೇಷನ್ ಬ್ಯಾಂಕಿನ ಎ.ಟಿ.ಎಂನಿಂದ ಹಣ ಡ್ರಾ ಆಗಿರುವುದಾಗಿ ಮಾಹಿತಿ ನೀಡಿದ್ದಾರೆ.</p>.<p>'ಬ್ಯಾಂಕಿನ ಖಾತೆ ಸಂಖ್ಯೆ, ಎಟಿಎಂ ಕಾರ್ಡ್ ಸಂಖ್ಯೆ, ಸಿ.ವಿ.ಸಿ ಸಂಖ್ಯೆ, ಪಾಸ್ ವರ್ಡ್ ಸಂಖ್ಯೆಯನ್ನು ಯಾರಿಗೂ ನೀಡಿಲ್ಲ. ಯಾರೋ ಕಳ್ಳರು ತಮ್ಮ ಬ್ಯಾಂಕ್ ಖಾತೆಯಿಂದ ಹಣ ಡ್ರಾ ಮಾಡಿದ್ದಾರೆ ಎಂದು ದೂರು ನೀಡಿದ್ದಾರೆ' ಎಂದು ನಗರ ಠಾಣೆ ಪೊಲೀಸರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>