ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕುಣಿಗಲ್‌: ಕದ್ದ ಹುಂಡಿ ಯಥಾಸ್ಥಿತಿಯಲ್ಲಿ ತಂದಿಟ್ಟ ಕಳ್ಳರು!

Last Updated 22 ಮಾರ್ಚ್ 2022, 4:32 IST
ಅಕ್ಷರ ಗಾತ್ರ

ಕುಣಿಗಲ್: ತಾಲ್ಲೂಕಿನ ರಂಗಸ್ವಾಮಿ ಬೆಟ್ಟದ ರಂಗನಾಥ ಸ್ವಾಮಿ ದೇವಾಲಯಗಳ ಎರಡು ಹುಂಡಿಗಳನ್ನು ಕದ್ದಿದ್ದ ಕಳ್ಳರು ದೇವರು ಮತ್ತು ಪೊಲೀಸರ ಭಯಕ್ಕೆ ಸೋಮವಾರ ವಾಪಸ್‌ತಂದಿಟ್ಟಿದ್ದಾರೆ.

ಬೆಟ್ಟದ ಮೇಲಿರುವ ರಂಗನಾಥ ಸ್ವಾಮಿ ದೇವಾಲಯಕ್ಕೆ ಸೇರಿದ್ದ ಹುಂಡಿಗಳನ್ನು ಕಳ್ಳರು ಶನಿವಾರ ರಾತ್ರಿ ಕಳವು ಮಾಡಿದ್ದರು. ಸುಮಾರು₹ 2 ಲಕ್ಷವಿದ್ದ ಹುಂಡಿ ಕಳುವಾಗಿರುವ ಬಗ್ಗೆ ಧರ್ಮದರ್ಶಿ ನೀಡಿದ ದೂರಿನ ಮೇರೆಗೆ ಕುಣಿಗಲ್ ಪೊಲೀಸರು ಪ್ರಕರಣ ದಾಖಲಿಸಿದ್ದರು.

ಸ್ಥಳಕ್ಕೆ ಶ್ವಾನದಳ, ಬೆರಳಚ್ಚು ತಜ್ಞರನ್ನು ಕರೆಯಿಸಿ ದುಷ್ಕರ್ಮಿಗಳ ಪತ್ತೆಗೆ ತೀವ್ರ ಕಾರ್ಯಾಚರಣೆ ನಡೆಸಿದ್ದರು.

ಸೋಮವಾರ ಬೆಳಿಗ್ಗೆ ಎರಡೂ ಹುಂಡಿಗಳು ದೇವಾಲಯದ ಬಳಿ ಪತ್ತೆಯಾಗಿವೆ. ಕಳ್ಳರು ಹುಂಡಿಯ ಬೀಗ ತೆಗೆಯದೆ ಯಥಾಸ್ಥಿತಿಯಲ್ಲಿ ತಂದಿಟ್ಟು ಪರಾರಿಯಾಗಿದ್ದಾರೆ. ಪೊಲೀಸರು ಹುಂಡಿಗಳನ್ನು ವಶಕ್ಕೆಪಡೆದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT