<p><strong>ನವದೆಹಲಿ</strong>: ತುಮಕೂರು ಜಿಲ್ಲೆಯಲ್ಲಿ ಮತ್ತೆ ಎರಡು ರಸ್ತೆ ಕೆಳ ಸೇತುವೆ (ಆರ್ಯುಬಿ) ಹಾಗೂ ಒಂದು ರಸ್ತೆ ಮೇಲ್ಸೇತುವೆಯನ್ನು (ಆರ್ಒಬಿ) ರೈಲ್ವೆ ಇಲಾಖೆ ಮಂಜೂರು ಮಾಡಿದೆ. </p><p>ಈ ಕಾಮಗಾರಿಗಳ ಮೊತ್ತ ₹60 ಕೋಟಿ. ಕಾಮಗಾರಿಯ ಸಂಪೂರ್ಣ ವೆಚ್ಚವನ್ನು ರೈಲ್ವೆ ಇಲಾಖೆ ಭರಿಸಲಿದೆ ಎಂದು ರೈಲ್ವೆ ಹಾಗೂ ಜಲಶಕ್ತಿ ಖಾತೆಯ ರಾಜ್ಯ ಸಚಿವ ವಿ.ಸೋಮಣ್ಣ ತಿಳಿಸಿದ್ದಾರೆ. </p><p>₹13.44 ಕೋಟಿ ವೆಚ್ಚದಲ್ಲಿ ಕಲ್ಲಿಪಾಳ್ಯ ರಸ್ತೆಯಲ್ಲಿ ಕೆಳ ಸೇತುವೆ, ₹36.62 ಕೋಟಿ ವೆಚ್ಚದಲ್ಲಿ ಬೆಂಚಗೆರೆ ಗೇಟ್ನಲ್ಲಿ ರಸ್ತೆ ಮೇಲ್ಸೇತುವೆ ಹಾಗೂ ಬಂಡಿಹಳ್ಳಿ ರೋಡ್ ಗೇಟ್ನಲ್ಲಿ ₹10 ಕೋಟಿ ವೆಚ್ಚದಲ್ಲಿ ರಸ್ತೆ ಕೆಳ ಸೇತುವೆ ನಿರ್ಮಿಸಲಾಗುತ್ತದೆ ಎಂದು ಸಚಿವರು ತಿಳಿಸಿದ್ದಾರೆ.</p><p>ಐದು ಕಡೆಗಳಲ್ಲಿ ₹350 ಕೋಟಿ ವೆಚ್ಚದಲ್ಲಿ ರಸ್ತೆ ಮೇಲ್ಸೇತುವೆ ಕಾಮಗಾರಿಗಳನ್ನು ರೈಲ್ವೆ ಇಲಾಖೆ ಜುಲೈ 15ರಂದು ಮಂಜೂರು ಮಾಡಿತ್ತು. ಈ ಯೋಜನೆಗಳ ಅನುಷ್ಠಾನಕ್ಕೆ ಭೂ ಸ್ವಾಧೀನಕ್ಕೆ ತಕ್ಷಣ ಕ್ರಮ ಜರುಗಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.</p>.ತುಮಕೂರು | ಹೊಸ ಮೆಮು ರೈಲು ಸಂಚಾರ ಆರಂಭ: ವಿ.ಸೋಮಣ್ಣ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ತುಮಕೂರು ಜಿಲ್ಲೆಯಲ್ಲಿ ಮತ್ತೆ ಎರಡು ರಸ್ತೆ ಕೆಳ ಸೇತುವೆ (ಆರ್ಯುಬಿ) ಹಾಗೂ ಒಂದು ರಸ್ತೆ ಮೇಲ್ಸೇತುವೆಯನ್ನು (ಆರ್ಒಬಿ) ರೈಲ್ವೆ ಇಲಾಖೆ ಮಂಜೂರು ಮಾಡಿದೆ. </p><p>ಈ ಕಾಮಗಾರಿಗಳ ಮೊತ್ತ ₹60 ಕೋಟಿ. ಕಾಮಗಾರಿಯ ಸಂಪೂರ್ಣ ವೆಚ್ಚವನ್ನು ರೈಲ್ವೆ ಇಲಾಖೆ ಭರಿಸಲಿದೆ ಎಂದು ರೈಲ್ವೆ ಹಾಗೂ ಜಲಶಕ್ತಿ ಖಾತೆಯ ರಾಜ್ಯ ಸಚಿವ ವಿ.ಸೋಮಣ್ಣ ತಿಳಿಸಿದ್ದಾರೆ. </p><p>₹13.44 ಕೋಟಿ ವೆಚ್ಚದಲ್ಲಿ ಕಲ್ಲಿಪಾಳ್ಯ ರಸ್ತೆಯಲ್ಲಿ ಕೆಳ ಸೇತುವೆ, ₹36.62 ಕೋಟಿ ವೆಚ್ಚದಲ್ಲಿ ಬೆಂಚಗೆರೆ ಗೇಟ್ನಲ್ಲಿ ರಸ್ತೆ ಮೇಲ್ಸೇತುವೆ ಹಾಗೂ ಬಂಡಿಹಳ್ಳಿ ರೋಡ್ ಗೇಟ್ನಲ್ಲಿ ₹10 ಕೋಟಿ ವೆಚ್ಚದಲ್ಲಿ ರಸ್ತೆ ಕೆಳ ಸೇತುವೆ ನಿರ್ಮಿಸಲಾಗುತ್ತದೆ ಎಂದು ಸಚಿವರು ತಿಳಿಸಿದ್ದಾರೆ.</p><p>ಐದು ಕಡೆಗಳಲ್ಲಿ ₹350 ಕೋಟಿ ವೆಚ್ಚದಲ್ಲಿ ರಸ್ತೆ ಮೇಲ್ಸೇತುವೆ ಕಾಮಗಾರಿಗಳನ್ನು ರೈಲ್ವೆ ಇಲಾಖೆ ಜುಲೈ 15ರಂದು ಮಂಜೂರು ಮಾಡಿತ್ತು. ಈ ಯೋಜನೆಗಳ ಅನುಷ್ಠಾನಕ್ಕೆ ಭೂ ಸ್ವಾಧೀನಕ್ಕೆ ತಕ್ಷಣ ಕ್ರಮ ಜರುಗಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.</p>.ತುಮಕೂರು | ಹೊಸ ಮೆಮು ರೈಲು ಸಂಚಾರ ಆರಂಭ: ವಿ.ಸೋಮಣ್ಣ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>