<p><strong>ತುರುವೇಕೆರೆ (ತುಮಕೂರು):</strong> ತಾಲ್ಲೂಕಿನ ದಂಡಿನಶಿವರ ಹೋಬಳಿ ಮಾರಸಂದ್ರ ಸಮೀಪದ ರಂಗನಹಟ್ಟಿ ಕಟ್ಟೆಯಲ್ಲಿ ಭಾನುವಾರ ಗಣಪತಿ ವಿಸರ್ಜನೆ ವೇಳೆ ಅಪ್ಪ, ಮಗ ಹಾಗೂ ಮತ್ತೊಬ್ಬ ಯುವಕ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.</p>.<p>ರಂಗನಹಟ್ಟಿ ಗ್ರಾಮದ ರೇವಣ್ಣ (50) ಅವರ ಮಗ ಶರತ್ (26) ಹಾಗೂ ದಯಾನಂದ್(22) ಎಂಬುವರು ಕೆರೆಯಲ್ಲಿ ಮುಳುಗಿ ಮೃತಪಟ್ಟಿದ್ದಾರೆ.</p>.<p>ಗ್ರಾಮದಲ್ಲಿ ಪ್ರತಿಷ್ಠಾಪಿಸಲಾಗಿದ್ದ ಸಾರ್ವಜನಿಕ ಗಣೇಶನನ್ನು ವಿಸರ್ಜಿಸಲು ಭಾನುವಾರ ಮಧ್ಯಾಹ್ನ ಮೂರು ಗಂಟೆಗೆ ರಂಗನಕಟ್ಟೆಗೆ ತೆರಳಿದ್ದರು.</p>.<p>ಗಣೇಶ ಮೂರ್ತಿಯನ್ನು ಹಿಡಿದು ಶರತ್ ಮತ್ತು ದಯಾನಂದ್ ನೀರಿಗೆ ಇಳಿದಿದ್ದರು. ಕೆಸರಿನಲ್ಲಿ ಕಾಲು ಹೂತುಕೊಂಡು ಈಜಲು ಸಾಧ್ಯವಾಗದೆ ದಡದಲ್ಲಿದ್ದವರನ್ನು ಸಹಾಯಕ್ಕೆ ಕೂಗಿಕೊಂಡಿದ್ದಾರೆ.</p>.<p>ಮಗ ನೀರಿನಲ್ಲಿ ಮುಳುಗುತ್ತಿರುವುದನ್ನು ಕಂಡ ರೇವಣ್ಣ ನೀರಿಗೆ ಧುಮಿಕಿದ್ದಾರೆ. ಅವರಿಗೂ ಈಜಲು ಸಾಧ್ಯವಾಗದೆ ಮುಳುಗಿ ಮೃತಪಟ್ಟಿದ್ದಾರೆ. </p>.<p>ಅಗ್ನಿಶಾಮಕ ದಳದ ಸಿಬ್ಬಂದಿ ಶವಗಳಿಗಾಗಿ ಶೋಧ ಕಾರ್ಯ ಮುಂದುವರೆಸಿದ್ದಾರೆ. ಕತ್ತಲೆಯಾಗುತ್ತಿರುವುದರಿಂದ ಶೋಧ ಕಾರ್ಯ ವಿಳಂಭವಾಗುವ ಸಾಧ್ಯತೆ ಇದೆ ಎಂದು ಅಗ್ನಿ ಶಾಮಕ ಠಾಣಾಧಿಕಾರಿ ಚನ್ನಾಚಾರಿ ತಿಳಿಸಿದ್ದಾರೆ.</p>.<p>ರಂಗನಹಟ್ಟಿ ಸುತ್ತಮುತ್ತಲಿನ ಜನರು ಕೆರೆ ಬಳಿ ಜಮಾಯಿಸಿದ್ದರು. ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ದಂಡಿನಶಿವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುರುವೇಕೆರೆ (ತುಮಕೂರು):</strong> ತಾಲ್ಲೂಕಿನ ದಂಡಿನಶಿವರ ಹೋಬಳಿ ಮಾರಸಂದ್ರ ಸಮೀಪದ ರಂಗನಹಟ್ಟಿ ಕಟ್ಟೆಯಲ್ಲಿ ಭಾನುವಾರ ಗಣಪತಿ ವಿಸರ್ಜನೆ ವೇಳೆ ಅಪ್ಪ, ಮಗ ಹಾಗೂ ಮತ್ತೊಬ್ಬ ಯುವಕ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.</p>.<p>ರಂಗನಹಟ್ಟಿ ಗ್ರಾಮದ ರೇವಣ್ಣ (50) ಅವರ ಮಗ ಶರತ್ (26) ಹಾಗೂ ದಯಾನಂದ್(22) ಎಂಬುವರು ಕೆರೆಯಲ್ಲಿ ಮುಳುಗಿ ಮೃತಪಟ್ಟಿದ್ದಾರೆ.</p>.<p>ಗ್ರಾಮದಲ್ಲಿ ಪ್ರತಿಷ್ಠಾಪಿಸಲಾಗಿದ್ದ ಸಾರ್ವಜನಿಕ ಗಣೇಶನನ್ನು ವಿಸರ್ಜಿಸಲು ಭಾನುವಾರ ಮಧ್ಯಾಹ್ನ ಮೂರು ಗಂಟೆಗೆ ರಂಗನಕಟ್ಟೆಗೆ ತೆರಳಿದ್ದರು.</p>.<p>ಗಣೇಶ ಮೂರ್ತಿಯನ್ನು ಹಿಡಿದು ಶರತ್ ಮತ್ತು ದಯಾನಂದ್ ನೀರಿಗೆ ಇಳಿದಿದ್ದರು. ಕೆಸರಿನಲ್ಲಿ ಕಾಲು ಹೂತುಕೊಂಡು ಈಜಲು ಸಾಧ್ಯವಾಗದೆ ದಡದಲ್ಲಿದ್ದವರನ್ನು ಸಹಾಯಕ್ಕೆ ಕೂಗಿಕೊಂಡಿದ್ದಾರೆ.</p>.<p>ಮಗ ನೀರಿನಲ್ಲಿ ಮುಳುಗುತ್ತಿರುವುದನ್ನು ಕಂಡ ರೇವಣ್ಣ ನೀರಿಗೆ ಧುಮಿಕಿದ್ದಾರೆ. ಅವರಿಗೂ ಈಜಲು ಸಾಧ್ಯವಾಗದೆ ಮುಳುಗಿ ಮೃತಪಟ್ಟಿದ್ದಾರೆ. </p>.<p>ಅಗ್ನಿಶಾಮಕ ದಳದ ಸಿಬ್ಬಂದಿ ಶವಗಳಿಗಾಗಿ ಶೋಧ ಕಾರ್ಯ ಮುಂದುವರೆಸಿದ್ದಾರೆ. ಕತ್ತಲೆಯಾಗುತ್ತಿರುವುದರಿಂದ ಶೋಧ ಕಾರ್ಯ ವಿಳಂಭವಾಗುವ ಸಾಧ್ಯತೆ ಇದೆ ಎಂದು ಅಗ್ನಿ ಶಾಮಕ ಠಾಣಾಧಿಕಾರಿ ಚನ್ನಾಚಾರಿ ತಿಳಿಸಿದ್ದಾರೆ.</p>.<p>ರಂಗನಹಟ್ಟಿ ಸುತ್ತಮುತ್ತಲಿನ ಜನರು ಕೆರೆ ಬಳಿ ಜಮಾಯಿಸಿದ್ದರು. ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ದಂಡಿನಶಿವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>