ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪೊಲೀಸರಿಂದ ಹಲ್ಲೆಗೆ ಒಳಗಾಗಿ ವ್ಯಕ್ತಿ ಸಾವು: ಮೂವರು ಪೊಲೀಸರ ಅಮಾನತು

Last Updated 6 ಡಿಸೆಂಬರ್ 2022, 14:41 IST
ಅಕ್ಷರ ಗಾತ್ರ

ತುಮಕೂರು: ಸೈಕಲ್ ಕಳ್ಳತನ ಪ್ರಕರಣದಲ್ಲಿ ಪೊಲೀಸರಿಂದ ಹಲ್ಲೆಗೆ ಒಳಗಾಗಿ ವ್ಯಕ್ತಿಯೊಬ್ಬರು ಸಾವನ್ನಪ್ಪಿದ ಪ್ರಕರಣದಲ್ಲಿ ಮೂವರು ಪೊಲೀಸರನ್ನು ಅಮಾನತು ಮಾಡಲಾಗಿದೆ.

ಜಯನಗರ ಪೊಲೀಸ್ ಠಾಣೆಯ ಹೆಡ್‌ ಕಾನ್‌ಸ್ಟೇಬಲ್ ಓಂಕಾರೇಶ್ವರ, ಕಾನ್‌ಸ್ಟೇಬಲ್‌ಗಳಾದ ರಾಜು, ಮಂಜಪ್ಪ ಮಸಾಲವಾರ ಅಮಾನತುಗೊಂಡವರು. ಸೈಕಲ್ ಕಳ್ಳತನ ಆರೋಪದ ಮೇಲೆ ಠಾಣೆಗೆ ಕರೆತಂದಿದ್ದ ಹನುಮಂತರಾಯಪ್ಪ (58) ಮೇಲೆ ಪೊಲೀಸರು ಹಲ್ಲೆ ನಡೆಸಿ, ಕೊಲೆ ಮಾಡಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದರು.

ಕಳೆದ ಶನಿವಾರ, ಭಾನುವಾರ ಆರೋಪಿಯನ್ನು ವಿಚಾರಣೆಗಾಗಿ ಜಯನಗರ ಪೊಲೀಸ್ ಠಾಣೆಗೆ ಕರೆತರಲಾಗಿತ್ತು. ಭಾನುವಾರ ವಿಚಾರಣೆ ಮುಗಿಸಿ ವಾಪಸ್ ಕರೆತಂದು ಬಿಟ್ಟ ನಂತರ ಸಾವನ್ನಪ್ಪಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT