ಬಳ್ಳಾರಿಯಿಂದ ಚಳ್ಳಕೆರೆ, ಹಿರಿಯೂರು, ಹುಳಿಯಾರು, ಚಿಕ್ಕನಾಯಕನಹಳ್ಳಿ, ತಿಪಟೂರಿನ ಕೆ.ಬಿ.ಕ್ರಾಸ್, ತುರುವೇಕೆರೆ, ನಾಗಮಂಗಲ, ಶ್ರೀರಂಗಪಟ್ಟಣ, ಮೈಸೂರು, ನಂಜನಗೂಡು ಮಾರ್ಗವಾಗಿ ಚಾಮರಾಜನಗರ ತಲುಪುವ ರಾಷ್ಟ್ರೀಯ ಹೆದ್ದಾರಿ 150ಎ ರಸ್ತೆಯ ಎರಡು ಬದಿಯಲ್ಲಿ ಸಾವಿರಾರು ಗಿಡ- ಮರಗಳನ್ನು ಕಾಣಬಹುದಿತ್ತು. ಆದರೆ, ಈ ರಸ್ತೆಯನ್ನು ಅಭಿವೃದ್ಧಿ ಮಾಡುವ ಉದ್ದೇಶದಿಂದ ಎಲ್ಲ ಮರಗಳನ್ನು ಕತ್ತರಿಸಲಾಗುತ್ತಿದೆ.