ತಿಪಟೂರಿನ ಅಭಿವೃದ್ಧಿ ಸಲುವಾಗಿ ನಗರಸಭೆಯಲ್ಲಿ ಒಂದಾಗಿ ಅಧಿಕಾರದ ಗದ್ದುಗೆ ಹಿಡಿದಿದ್ದೇವೆ. ಅನೇಕ ವರ್ಷಗಳ ನಂತರ ಬಿಜೆಪಿಗೆ ಬಹುಮತ ನೀಡಿದ್ದರೂ, ಲೋಕೇಶ್ವರ ಹಾಗೂ ಪಕ್ಷೇತರರ ಸಹಕಾರದಿಂದಾಗಿ ಸುಲಭವಾಗಿ ಅಧಿಕಾರದ ಗದ್ದುಗೆ ಹಿಡಿದಿದ್ದೇವೆ. ನಗರದ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಲಿದ್ದು, 6 ತಿಂಗಳ ಒಳಗಾಗಿ ಸಂಪೂರ್ಣ ರಸ್ತೆಗಳ ಅಭಿವೃದ್ಧಿಗೆ ಬದ್ಧ ಎಂದು ಶಾಸಕ ಬಿ.ಸಿ. ನಾಗೇಶ್ ಹೇಳಿದರು.