<p><strong>ತಿಪಟೂರು: </strong>ನಗರಸಭೆ ಚುನಾವಣೆ ನಡೆದು ವರ್ಷವೇ ಕಳೆದಿದೆ. ಕೆಲ ಸದಸ್ಯರು ಮೀಸಲಾತಿ ಬದಲಾವಣೆಗಾಗಿ ನ್ಯಾಯಾಲಯದ ಮೆಟ್ಟಿಲೇರಿ ರುವುದರಿಂದ ಆಡಳಿತ ಮಂಡಳಿ ರಚನೆ ವಿಳಂಬವಾಗಿದೆ.ಇದರಿಂದ ನಗರದ ಅಭಿವೃದ್ಧಿಗೆ ಹಿನ್ನಡೆಯಾಗಿದೆ.</p>.<p>2019ರ ಮೇನಲ್ಲಿ ಸ್ಥಳೀಯ ಸಂಸ್ಥೆಗಳಿಗೆ ಚುನವಾಣೆ ನಡೆದಿತ್ತು. ಸದಸ್ಯರ ಆಯ್ಕೆಯಾದ 10 ತಿಂಗಳ ಬಳಿಕ ಅಂದರೆ ಇದೇ ಮಾರ್ಚ್ ತಿಂಗಳಲ್ಲಿ ಅಧ್ಯಕ್ಷ (ಸಾಮಾನ್ಯ ಮಹಿಳೆ), ಉಪಾಧ್ಯಕ್ಷ (ಸಾಮಾನ್ಯ)<br />ಸ್ಥಾನಗಳಿಗೆ ಸರ್ಕಾರ ಮೀಸಲಾತಿ ಪ್ರಕಟಿಸಿತು.</p>.<p>ಮೀಸಲಾತಿ ಪ್ರಕಟಿಸುವಲ್ಲಿ ಸರ್ಕಾರ ಮೊದಲೇ ವಿಳಂಬ ಧೋರಣೆ ಅನುಸರಿಸಿತ್ತು. ಆದರೆ, ಅಧ್ಯಕ್ಷ, ಉಪಾಧ್ಯಕ್ಷರ ಮೀಸಲಾತಿ ಪ್ರಕಟವಾದ ಬಳಿಕ ಕೆಲ ಸದಸ್ಯರು ನ್ಯಾಯಾಲಯದ ಮೆಟ್ಟಿಲೇರಿದ್ದರಿಂದ ಆಡಳಿತ ಮಂಡಳಿ ರಚನೆ ಇನ್ನಷ್ಟು ತಡವಾಗಿದೆ.</p>.<p class="Subhead">ಅತಂತ್ರ ಸ್ಥಿತಿ: ನಗರ ಸುಮಾರು 70 ಸಾವಿರಕ್ಕೂ ಅಧಿಕ ಜನಸಂಖ್ಯೆ ಹೊಂದಿದೆ. ಒಟ್ಟು 31 ವಾರ್ಡ್ಗಳಿವೆ. ಬಿಜೆಪಿ 11, ಕಾಂಗ್ರೆಸ್ 9, ಜೆಡಿಎಸ್ 5, ಪಕ್ಷೇತರರು 6 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದಾರೆ. ಅತಂತ್ರ ಸ್ಥಿತಿ ನಿರ್ಮಾಣವಾಗಿದೆ. ಅಧಿಕಾರದ ಗದ್ದುಗೆಗಾಗಿ ಪಕ್ಷೇತರೇ ನಿರ್ಣಾಯಕರಾಗಿದ್ದಾರೆ. ಆದರೆ, ಜೆಡಿಎಸ್ನಲ್ಲಿ ಗುರುತಿಸಿಕೊಂಡಿದ್ದ ಮುಖಂಡ ಲೋಕೇಶ್ವರ ಹೊರ ಬಂದು ಬಿಜೆಪಿ ಸೇರಿದ್ದು ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆ ಹಲವು ಕುತೂಹಲಗಳಿಗೆ ಕಾರಣವಾಗಿದೆ.</p>.<p>ಕೆಲ ವಾರ್ಡ್ಗಳ ಜನರು, ‘ಸದಸ್ಯರು ಚುನಾವಣೆಯಲ್ಲಿ ಮಾತ್ರವೇ ಮತಯಾಚನೆಗೆ ಬಂದಿದ್ದು. ಗೆದ್ದ ನಂತರ ತಿರುಗಿಯೂ ನೋಡಿಲ್ಲ. ಬಡಾವಣೆಗಳ ಸಮಸ್ಯೆ ಬಗೆಹರಿಸುವವರು ಯಾರು’ ಎಂದು ಪ್ರಶ್ನಿಸುತ್ತಿದ್ದಾರೆ.</p>.<p>ಇತ್ತ ಸದಸ್ಯರು ಜನರ ಪ್ರಶ್ನೆಗಳಿಗೆ ಉತ್ತರ ನೀಡಲಾಗದೆ ಕೈಲಾದ ಸಹಕಾರ ನೀಡುತ್ತ ಅಧಿಕಾರಿಗಳ ಸಹಕಾರ ಪಡೆದು ಕೆಲ ಸಮಸ್ಯೆಗಳನ್ನು ಬಗೆಹರಿಸಲು ಮುಂದಾಗಿದ್ದಾರೆ.</p>.<p>ಲಾಕ್ಡೌನ್ ಕಾರಣ ಆಡಳಿತ ಮಂಡಳಿ ರಚನೆ ಇನ್ನಷ್ಟು ವಿಳಂಬವಾಗಬಹುದು. ಇದರಿಂದ ಚುನಾವಣೆಯಲ್ಲಿ ಗೆದ್ದು ವರ್ಷ ದಾಟಿದರೂ ಅಧಿಕಾರ ಅನುಭವಿಸಲು ಸದಸ್ಯರಿಗೆ ಸಾಧ್ಯವಾಗುತ್ತಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿಪಟೂರು: </strong>ನಗರಸಭೆ ಚುನಾವಣೆ ನಡೆದು ವರ್ಷವೇ ಕಳೆದಿದೆ. ಕೆಲ ಸದಸ್ಯರು ಮೀಸಲಾತಿ ಬದಲಾವಣೆಗಾಗಿ ನ್ಯಾಯಾಲಯದ ಮೆಟ್ಟಿಲೇರಿ ರುವುದರಿಂದ ಆಡಳಿತ ಮಂಡಳಿ ರಚನೆ ವಿಳಂಬವಾಗಿದೆ.ಇದರಿಂದ ನಗರದ ಅಭಿವೃದ್ಧಿಗೆ ಹಿನ್ನಡೆಯಾಗಿದೆ.</p>.<p>2019ರ ಮೇನಲ್ಲಿ ಸ್ಥಳೀಯ ಸಂಸ್ಥೆಗಳಿಗೆ ಚುನವಾಣೆ ನಡೆದಿತ್ತು. ಸದಸ್ಯರ ಆಯ್ಕೆಯಾದ 10 ತಿಂಗಳ ಬಳಿಕ ಅಂದರೆ ಇದೇ ಮಾರ್ಚ್ ತಿಂಗಳಲ್ಲಿ ಅಧ್ಯಕ್ಷ (ಸಾಮಾನ್ಯ ಮಹಿಳೆ), ಉಪಾಧ್ಯಕ್ಷ (ಸಾಮಾನ್ಯ)<br />ಸ್ಥಾನಗಳಿಗೆ ಸರ್ಕಾರ ಮೀಸಲಾತಿ ಪ್ರಕಟಿಸಿತು.</p>.<p>ಮೀಸಲಾತಿ ಪ್ರಕಟಿಸುವಲ್ಲಿ ಸರ್ಕಾರ ಮೊದಲೇ ವಿಳಂಬ ಧೋರಣೆ ಅನುಸರಿಸಿತ್ತು. ಆದರೆ, ಅಧ್ಯಕ್ಷ, ಉಪಾಧ್ಯಕ್ಷರ ಮೀಸಲಾತಿ ಪ್ರಕಟವಾದ ಬಳಿಕ ಕೆಲ ಸದಸ್ಯರು ನ್ಯಾಯಾಲಯದ ಮೆಟ್ಟಿಲೇರಿದ್ದರಿಂದ ಆಡಳಿತ ಮಂಡಳಿ ರಚನೆ ಇನ್ನಷ್ಟು ತಡವಾಗಿದೆ.</p>.<p class="Subhead">ಅತಂತ್ರ ಸ್ಥಿತಿ: ನಗರ ಸುಮಾರು 70 ಸಾವಿರಕ್ಕೂ ಅಧಿಕ ಜನಸಂಖ್ಯೆ ಹೊಂದಿದೆ. ಒಟ್ಟು 31 ವಾರ್ಡ್ಗಳಿವೆ. ಬಿಜೆಪಿ 11, ಕಾಂಗ್ರೆಸ್ 9, ಜೆಡಿಎಸ್ 5, ಪಕ್ಷೇತರರು 6 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದಾರೆ. ಅತಂತ್ರ ಸ್ಥಿತಿ ನಿರ್ಮಾಣವಾಗಿದೆ. ಅಧಿಕಾರದ ಗದ್ದುಗೆಗಾಗಿ ಪಕ್ಷೇತರೇ ನಿರ್ಣಾಯಕರಾಗಿದ್ದಾರೆ. ಆದರೆ, ಜೆಡಿಎಸ್ನಲ್ಲಿ ಗುರುತಿಸಿಕೊಂಡಿದ್ದ ಮುಖಂಡ ಲೋಕೇಶ್ವರ ಹೊರ ಬಂದು ಬಿಜೆಪಿ ಸೇರಿದ್ದು ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆ ಹಲವು ಕುತೂಹಲಗಳಿಗೆ ಕಾರಣವಾಗಿದೆ.</p>.<p>ಕೆಲ ವಾರ್ಡ್ಗಳ ಜನರು, ‘ಸದಸ್ಯರು ಚುನಾವಣೆಯಲ್ಲಿ ಮಾತ್ರವೇ ಮತಯಾಚನೆಗೆ ಬಂದಿದ್ದು. ಗೆದ್ದ ನಂತರ ತಿರುಗಿಯೂ ನೋಡಿಲ್ಲ. ಬಡಾವಣೆಗಳ ಸಮಸ್ಯೆ ಬಗೆಹರಿಸುವವರು ಯಾರು’ ಎಂದು ಪ್ರಶ್ನಿಸುತ್ತಿದ್ದಾರೆ.</p>.<p>ಇತ್ತ ಸದಸ್ಯರು ಜನರ ಪ್ರಶ್ನೆಗಳಿಗೆ ಉತ್ತರ ನೀಡಲಾಗದೆ ಕೈಲಾದ ಸಹಕಾರ ನೀಡುತ್ತ ಅಧಿಕಾರಿಗಳ ಸಹಕಾರ ಪಡೆದು ಕೆಲ ಸಮಸ್ಯೆಗಳನ್ನು ಬಗೆಹರಿಸಲು ಮುಂದಾಗಿದ್ದಾರೆ.</p>.<p>ಲಾಕ್ಡೌನ್ ಕಾರಣ ಆಡಳಿತ ಮಂಡಳಿ ರಚನೆ ಇನ್ನಷ್ಟು ವಿಳಂಬವಾಗಬಹುದು. ಇದರಿಂದ ಚುನಾವಣೆಯಲ್ಲಿ ಗೆದ್ದು ವರ್ಷ ದಾಟಿದರೂ ಅಧಿಕಾರ ಅನುಭವಿಸಲು ಸದಸ್ಯರಿಗೆ ಸಾಧ್ಯವಾಗುತ್ತಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>