ಅತಂತ್ರ ಸ್ಥಿತಿ: ನಗರ ಸುಮಾರು 70 ಸಾವಿರಕ್ಕೂ ಅಧಿಕ ಜನಸಂಖ್ಯೆ ಹೊಂದಿದೆ. ಒಟ್ಟು 31 ವಾರ್ಡ್ಗಳಿವೆ. ಬಿಜೆಪಿ 11, ಕಾಂಗ್ರೆಸ್ 9, ಜೆಡಿಎಸ್ 5, ಪಕ್ಷೇತರರು 6 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದಾರೆ. ಅತಂತ್ರ ಸ್ಥಿತಿ ನಿರ್ಮಾಣವಾಗಿದೆ. ಅಧಿಕಾರದ ಗದ್ದುಗೆಗಾಗಿ ಪಕ್ಷೇತರೇ ನಿರ್ಣಾಯಕರಾಗಿದ್ದಾರೆ. ಆದರೆ, ಜೆಡಿಎಸ್ನಲ್ಲಿ ಗುರುತಿಸಿಕೊಂಡಿದ್ದ ಮುಖಂಡ ಲೋಕೇಶ್ವರ ಹೊರ ಬಂದು ಬಿಜೆಪಿ ಸೇರಿದ್ದು ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆ ಹಲವು ಕುತೂಹಲಗಳಿಗೆ ಕಾರಣವಾಗಿದೆ.